ಕುಡಿಯುವ ನೀರಿನ ಬವಣೆ ತಪ್ಪಿಸಿ: ಎಸ್.ಬಿ. ಜೋಗಣ್ಣವರಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಶೀಘ್ರ ಜಾರಿ ಮಾಡಿ, ಈ ಭಾಗದ ಜನರ ಕುಡಿಯುವ ನೀರಿನ ಬವಣೆ ತಪ್ಪಿಸಿ ಎಂದು ರೈತ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಅವರು ರಾಜ್ಯ, ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ಮಹದಾಯಿ ಹೋರಾಟ ವೇದಿಕೆಯಲ್ಲಿ 3234ನೇ ದಿನದ ಹೋರಾಟದಲ್ಲಿ ಅವರು ಮಾತನಾಡಿದರು.