ಕ್ರಿಯಾಶೀಲ ಸಂಘಟಕ ಡಾ. ರವಿ ಗುಂಜೀಕರಗೆ ಇಂದು ಅಭಿನಂದನೆಕ್ರೀಯಾಶೀಲ ಸಂಘಟಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಜಿಲ್ಲಾ ಅಧಿಕಾರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ, ಜಿಲ್ಲಾ ಘಟಕದ ಅಧ್ಯಕ್ಷ ಡಾ. ರವಿ ಗುಂಜೀಕರ್ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಮೇ.6 ಬೆಳಗ್ಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆಯಾಗಿದೆ.