ಪಂಚ ಗ್ಯಾರಂಟಿಗಳಿಂದ ಕೋಟ್ಯಂತರ ಕುಟುಂಬ ಬಡತನ ರೇಖೆಯಿಂದ ಮೇಲಕ್ಕೆ-ಸಚಿವ ಎಚ್.ಕೆ. ಪಾಟೀಲಶೋಷಣೆಗೆ ಒಳಗಾದವರ ಪರ ಗಟ್ಟಿಯಾಗಿ ನಿಂತು ಸಾಮಾಜಿಕ, ಆರ್ಥಿಕ, ನ್ಯಾಯ ನೀಡುವ, ನಾಡಿನ ಜನತೆಯ ದೈನಂದಿನ ಬವಣೆಗಳನ್ನು ನೀಗಿಸಲು ಪಂಚ ಗ್ಯಾರಂಟಿಗಳನ್ನು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಜನತೆಗೆ ಕೊಡುವುದರ ಮೂಲಕ ಬಡತನ ರೇಖೆಯಿಂದ ಮೇಲೆತ್ತುವ ದೃಢ ಹೆಜ್ಜೆ ಇಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.