ಜಿಲ್ಲಾ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣತೆ ಸಹಕರಿಸಿ: ಶಾಸಕ ಜಿ.ಎಸ್. ಪಾಟೀಲಐತಿಹಾಸಿಕ ನಾಡು ಗಜೇಂದ್ರಗಡ ಪಟ್ಟಣದಲ್ಲಿ ಫೆ. 24, ಮತ್ತು 25ರಂದು ಜರುಗುವ ಗದಗ ಜಿಲ್ಲಾ ಮಟ್ಟದ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಜರುಗುವ ದಿಶೆಯಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳ, ಸಿಬ್ಬಂದಿ ಪಾತ್ರ ಅತೀ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಸಲಹೆ ನೀಡಿದರು.