ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರ ಕೊಡಿಸಿ: ತಹಸೀಲ್ದಾರ್ಶಿರಹಟ್ಟಿ ಪಟ್ಟಣದ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ೨೦೨೩-೨೪ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ತಹಸೀಲ್ದಾರ್ ಅನಿಲ ಬಡಿಗೇರ ಮಾತನಾಡಿ, ಕಲಿಕೆಯಿಂದ ಮಾತ್ರ ಮನೆ, ಸಮಾಜ, ದೇಶ ಉದ್ಧಾರ ಮಾಡಲು ಸಾಧ್ಯವಾಗುತ್ತಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ತಂದೆ- ತಾಯಿಗಳ ಮುಖ್ಯ ಜವಾಬ್ದಾರಿಯಾಗಿದೆ ಎಂದರು.