ಸಮರ್ಪಕ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆನಿತ್ಯ ಗ್ರಾಮೀಣ ಪ್ರದೇಶಗಳಿಂದ ಜಿಲ್ಲಾ ಕೇಂದ್ರ ಗದಗ, ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ ನಗರಗಳಿಗೆ ಹೈಸ್ಕೂಲ್, ಕಾಲೇಜ ಶಿಕ್ಷಣಕ್ಕೆ ಹೋಗುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಅಂತಿಮ ವರ್ಷದ ಪದವಿ ತರಗತಿಗಳು ಶುರುವಾದರೂ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗುತ್ತಿಲ್ಲ.