ವಿಮಾ ಮೊತ್ತ, ಪರಿಹಾರ ಧನದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಲೀಡ್ ಬ್ಯಾಂಕ್ (ಡಿಎಲ್ಆರ್ ಸಿ) ಸಭೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧ್ಯಕ್ಷತೆಯಲ್ಲಿ ನಡೆಯಿತು. ರೈತರಿಗೆ ನೀಡುವ ವಿಮಾ ಮೊತ್ತ, ಪರಿಹಾರ ಧನದ ಮೊತ್ತ ಸಾಲಕ್ಕೆ ಹೊಂದಾಣಿಕೆ ಮಾಡಬಾರದು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಸಹಾಯಧನ, ಸಾಲ ಸೌಲಭ್ಯ ಮಂಜೂರಾತಿಯಲ್ಲಿ ಅರ್ಹ ಬ್ಯಾಂಕ್ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.