• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಡ್ಸ್ ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಅವಶ್ಯಕ: ಸಂಕನೂರ
ಗದಗ ನಗರದ ಜೆ.ಟಿ. ಕಾಲೇಜಿನ ವಿಡಿಯೋ ಕಾನ್ಫರನ್ಸ್‌ ಹಾಲ್‍ದಲ್ಲಿ ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲ್ಲಿ ಜರುಗಿದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ವಿಪ ಸದಸ್ಯ ಎಸ್‌.ವಿ. ಸಂಕನೂರ ಉದ್ಘಾಟಿಸಿದರು.
ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ಗಳಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಗದಗ ಜಿಲ್ಲಾ ಕೇಂದ್ರಕ್ಕೆ ನಿತ್ಯವೂ ವಿದ್ಯಾಭ್ಯಾಸಕ್ಕಾಗಿ ಬರುವ ಸಾವಿರಾರು ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ನಗರದ ಪುಟ್ಟರಾಜ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಏಕೀಕರಣಕ್ಕೆ ಉತ್ತರ ಕರ್ನಾಟಕದ ಕೊಡುಗೆ ಅಪಾರ
ಶಿರಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ ಕರ್ನಾಟಕ ಸುವರ್ಣ ಸಂಭ್ರಮ ೫೦ರ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ನರೇಗಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಶಿವಮೂರ್ತಿ ಕುರೇರ ಪಾಲ್ಗೊಂಡು ಮಾತನಾಡಿದರು.
ದೇವರ ಆಭರಣ ಕಳುವು, ಪೊಲೀಸರಿಂದ ಪರಿಶೀಲನೆ
ಶಿರಹಟ್ಟಿ ತಾಲೂಕಿನ ಶ್ರೀಮಂತಗಡದ ಹೊಳಲಮ್ಮ ದೇವಿ ದೇವಸ್ಥಾನದಲ್ಲಿ ತಡರಾತ್ರಿ ದೇವಿಯ ಗರ್ಭಗುಡಿಯ ಬೀಗ ಮುರಿದು ದೇವಿ ಮೈಮೇಲಿದ್ದ ಚಿನ್ನದ ಸರ, ಆಭರಣಗಳನ್ನು ಕಳುವು ಮಾಡಿದ ಘಟನೆ ನಡೆದಿದೆ. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕಳ್ಳರು ದೇವಸ್ಥಾನದ ಕೀಲಿ ಮುರಿದು ಹೊಳಲಮ್ಮ ದೇವಿಯ ಕಿರೀಟ ಹಾಗೂ ಆಭರಣ ಕಳ್ಳತನ ಮಾಡಿದ್ದಾರೆ.
ಯಾವತ್ತು ಜಾತಿ ಜನಗಣತಿ ಬಿಡುಗಡೆ ಮಾಡ್ತಾರೋ ಅವತ್ತೇ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಕ್ಲೋಸ್
ಒಂಬತ್ತು ವರ್ಷಗಳಿಂದ ಸಿದ್ದರಾಮಯ್ಯ ಜಾತಿಗಣತಿ ಬಗ್ಗೆ ಹೇಳುತ್ತಿದ್ದಾರೆ. ವಿಧಾನ ಪರಿಷತ್ತನಲ್ಲಿ ನಾನೇ ಹತ್ತು ಬಾರಿ‌ ಕೇಳಿದ್ದೇನೆ, ಅದರ ಬಗ್ಗೆ ಮಾತನಾಡಲಿಲ್ಲ. ಯಾವಾಗ ಜಾತಿ ಜನಗಣತಿ ರಿಲೀಸ್ ಮಾಡ್ತೀರಿ ಅಂದರೆ ನಾಳೆ, ನಾಡಿದ್ದು, ಆಚೆ ನಾಡಿದ್ದು, ರೆಡಿ ಆಗುತ್ತಿದೆ ಎಂದು ಹಾರಿಕೆ ಉತ್ತರ ಕೊಡುತ್ತಲೇ ಬಂದರು. ನಾನು ಇಳಿಯುವುದರೊಳಗಾಗಿ ಕೊಟ್ಟೇ ಇಳಿಯುತ್ತೇನೆ ಅಂದಿದ್ರು. ಇವತ್ತಿನವರೆಗೂ ಅದು ಆಗಿಲ್ಲ. ನಾನು ಅಂದೇ ಹೇಳಿದ್ದೆ, ನೀವು ಜಾತಿ ಜಾತಿ ನಡುವೆ ಬೆಂಕಿ ಹಚ್ವುತ್ತೀರಿ ಎಂದು ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌. ಈಶ್ವರಪ್ಪ ಕಿಡಿ ಕಾರಿದ್ದಾರೆ.
ಡಿ. ೧ರಿಂದ ಹಿರೇಮಠದ ಜಾತ್ರಾ ಮಹೋತ್ಸವ
ನರೇಗಲ್ಲ ಪಟ್ಟಣದ ಹಿರೇಮಠದ ಜಾತ್ರಾ ಮಹೋತ್ಸವ ಡಿ. ೧ರಿಂದ ೧೧ರ ವರೆಗೆ ಜರುಗಲಿದೆ ಎಂದು ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು ಹೇಳಿದರು. ಜಾತ್ರಾ ಮಹೋತ್ಸವದ ನಿಮಿತ್ತ ಅನೇಕ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಡಿ. ೧ರಿಂದ ೯ರ ವರೆಗೆ ತಾವು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಪುರಾಣ ಹೇಳುವುದಾಗಿ ತಿಳಿಸಿದರು. ನಿತ್ಯವೂ ಸಿದ್ಧಾಂತ ಶಿಖಾಮಣಿಯ ಪ್ರವಚನವಿದ್ದು, ಇದನ್ನು ಈ ಸಾರಿ ಶ್ರೀಮಠದ ಭಕ್ತರಿಂದಲೆ ಹೇಳಿಸುವ ನೂತನ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ವಿಜಯನಗರ ಕಾರ್ಖಾನೆ ಎದುರು ಅಣಕು ಶವ ಪ್ರದರ್ಶನ
ಮುಂಡರಗಿ ತಾಲೂಕಿನ ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯ ವ್ಯಾಪ್ತಿಯ ಗಂಗಾಪುರ ವಿಭಾಗದ ಕೊರ್ಲಹಳ್ಳಿ, ಗಂಗಾಪುರ ಹಾಗೂ ಶೀರನಹಳ್ಳಿ ಗ್ರಾಮಗಳ ರೈತರ ಜಮೀನುಗಳಲ್ಲಿ ಕಾರ್ಖಾನೆಯವರು ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಕಟಾವಿಗೆ ಗ್ಯಾಂಗ್ ಮ್ಯಾನ್ ಗಳನ್ನು ಕಳಿಸುತ್ತಿಲ್ಲ ಎಂದು ಮಂಗಳವಾರ ಕಾರ್ಖಾನೆ ಎದುರಿನಲ್ಲಿ ಅಣಕು ಶವಯಾತ್ರೆ ಮಾಡುವ ಮೂಲಕ ತಕ್ಷಣವೇ ನಿತ್ಯ 250 ಟನ್ ಕಟಾವಿಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದರು.
ಸಾಮಾನ್ಯರು, ಅನುಭಾವಿಗಳ ಜೀವನ ದೃಷ್ಟಿಕೋನಕ್ಕೂ ವ್ಯತ್ಯಾಸವಿದೆ
ಹಿರಿಯರು, ಶರಣರು ಬಹಳಷ್ಟು ಚಿಂತನೆ ನಡೆಸಿದರೂ ನಮ್ಮ ಜೀವನ ಯಾಕ ಕೆಟ್ಟಿದೆ ಅಂದರೆ ನಮ್ಮ ವಿಚಾರಗಳು ಕೆಟ್ಟಿವೆ. ವಿಚಾರ ಕೆಟ್ಟಿದ್ದಕ್ಕ ಜೀವನ ಕೆಟ್ಟಿದೆ, ವಿಚಾರ ಒಳ್ಳೆಯವು ಇದ್ದರೆ ಜೀವನ ಸುಧಾರಿಸುತ್ತವೆ. ಸಾಮಾನ್ಯರ ಜೀವನ ದೃಷ್ಟಿಕೋನಕ್ಕೂ ಒಬ್ಬ ಅನುಭಾವಿ ಜೀವನ ದೃಷ್ಟಿಕೋನ ನೋಡುವುದು ಬಹಳ ವ್ಯತ್ಯಾಸ ಇದೆ, ಈ ನಾಡಿನ ಶರಣ ಪರಂಪರೆಯಲ್ಲಿ ಅಲ್ಲಮ ಪ್ರಭುಗಳು ಬಹಳ ದೊಡ್ಡವರು ಎಂದು ಕೊಪ್ಪಳದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಡಂಬಳದಲ್ಲಿ ನಡೆದ ಸದ್ಭಾವನಾ ಪಾದಯಾತ್ರೆ ಬಳಿಕ ಹೇಳಿದರು.
ಅಕಾಲಿಕ ಮಳೆಗೆ ಹಾಳಾದ ಗೋವಿನ ಜೋಳದ ಬೆಳೆ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆ-ಗಾಳಿಗೆ ಸಮೀಪದ ಬಾಲೆಹೊಸೂರ ಗ್ರಾಮದ ಸಣ್ಣಬಸಪ್ಪ ಅಣ್ಣಿಗೇರಿ ಎಂಬುವವರ ಹೊಲದಲ್ಲಿನ ಗೋವಿನ ಜೋಳದ ಬೆಳೆ ನೆಲಕ್ಕೆ ಬಿದ್ದು ನಾಶವಾಗಿದೆ.ತಾಲೂಕಿನ ರೈತರಿಗೆ ಶಾಪವಾಗಿ ಕಾಡುತ್ತಿದ್ದ ಮಳೆ 3-4 ತಿಂಗಳಿಂದ ಮಾಯವಾಗಿತ್ತು. ಆದರೆ ಮಂಗಳವಾರ ಸಂಜೆ 6 ಗಂಟೆಗೆ ಆರಂಭವಾದ ಮಳೆ-ಗಾಳಿಯು ರಾತ್ರಿ 8 ಗಂಟೆಯವರೆಗೆ ಸುರಿಯುವ ಮೂಲಕ ರೈತರಿಗೆ ಸಂಕಷ್ಟ ಉಂಟು ಮಾಡಿದೆ.
ರೈತರಿಗೆ ತ್ವರಿತ ಸೇವೆ ಕಲ್ಪಿಸಲು‌ ಶ್ರಮಿಸಿದ ಸರ್ವೇ ಅಧಿಕಾರಿಗಳಿಗೆ ತಾಕೀತು
ಅಳತೆ, ವಾಟ್ನಿ, ಪೋಡಿ, ಆಕಾರ ಬಂದು ನಕಲು ಸೇರಿದಂತೆ ಯಾವುದೇ ಸೇವೆಯಾಗಲಿ ತ್ವರಿತಗತಿಯಲ್ಲಿಯೇ ಕಲ್ಪಿಸುವಲ್ಲಿ ಸರ್ವೇ ಇಲಾಖೆ ಪ್ರತಿಯೋರ್ವ ಅಧಿಕಾರಿ, ಸಿಬ್ಬಂದಿಗಳು ಶ್ರಮಿಸಬೇಕು. ಅನಗತ್ಯ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ವೈಶಾಲಿ ಅವರು ರೋಣ ಸರ್ವೇ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 435
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved