• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ಪ್ರತಿಮೆಗೆ ಅಪಮಾನ, ದುಷ್ಕರ್ಮಿಗಳ ವಿಕೃತಿ ಖಂಡಿಸಿ ಗದಗದಲ್ಲಿ ಪ್ರತಿಭಟನೆ
ಕಲಬುರ್ಗಿ ಜಿಲ್ಲೆಯ ಕೋಟನೂರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಸಮತಾ ಸೇನಾ ಜಿಲ್ಲೆ ಸಂಘಟನೆಯ ನೇತೃತ್ವದಲ್ಲಿ ದಲಿತ ಪರ ವಿವಿಧ ಸಂಘಟನೆಗಳೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ಹನುಮ ಧ್ವಜ ತೆರವು ಖಂಡಿಸಿ ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಜಿಲ್ಲಾಡಳಿತ ಭವನದ ಎದುರಿಗೆ ಸೋಮವಾರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಮಂಡ್ಯ ಕೆರಗೋಡು ಗ್ರಾಮದಲ್ಲಿನ ಹಾರಿಸಿದ್ದ ಹನುಮ ಧ್ವಜವನ್ನು ತೆರವುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕಾರ್ಯಕರ್ತರು ಜಿಲ್ಲಾಡಳಿತ ಮುಂಭಾಗದ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಿಂಗಟಾಲೂರು ವೀರಭದ್ರೇಶ್ವರ ಸುಕ್ಷೇತ್ರಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ರು. 1 ಕೋಟಿ ಅನುದಾನ-ಸಚಿವ ಎಚ್ಕೆ
ಸರ್ಕಾರ ಮಾಡುವಂತಹ ಕಾರ್ಯವನ್ನು ದೇವಸ್ಥಾನ ಟ್ರಸ್ಟ್ ಕಮಿಟಿಯ ಎಲ್ಲರೂ ಸೇರಿ ಪ್ರಾಮಾಣಿಕವಾಗಿ ಮಾಡಿದ್ದಾರೆ. ಸಿಂಗಟಾಲೂರು ಶ್ರಿ ವೀರಭದ್ರೇಶ್ವರ ಸುಕ್ಷೇತ್ರದ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ 1 ಕೋಟಿ ರು.ಗಳ ಅನುದಾನ ನೀಡುವುದಾಗಿ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಯಾತ್ರಾ ನಿವಾಸದ ಹಣ ದುರುಪಯೋಗವಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ-ಸಚಿವ ಎಚ್‌.ಕೆ. ಪಾಟೀಲ
ಯಾತ್ರಾ ನಿವಾಸ ಕಾಮಗಾರಿ ಪ್ರಾರಂಭಿಸಿ ಸಂಪೂರ್ಣವಾಗಿ ಹಣವನ್ನು ತೆಗೆಸಿಕೊಂಡಿದ್ದಾರೆ. ಆದರೂ ಕಾಮಗಾರಿ ಅಪೂರ್ಣವಾಗಿರುವ ಬಗ್ಗೆ ತಮಗೆ ಮಾಹಿತಿ ಬಂದಿದ್ದು, ತಕ್ಷಣವೇ ಇಲಾಖೆ ಅಧಿಕಾರಿಯೊಬ್ಬರನ್ನು ವಿಚಾರಣೆ ಮಾಡಲು ಕಳಿಸಿ ಒಂದು ವೇಳೆ ಅವರು ಹಣವನ್ನು ಸಮರ್ಪಕವಾಗಿ ಬಳಕೆ ಮಾಡದಿರುವುದು ಕಂಡು ಬಂದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಹುಲಕೋಟಿ ಆರ್.ಎಂ.ಎಸ್.ಎಸ್ ಈಗ ಅಂಗಾಂಗ ಕಸಿಗೂ ಸಿದ್ಧ!
ಹುಲಕೋಟಿ ಹತ್ತಾರು ಹೊಸತನಕ್ಕೆ ಮುನ್ನುಡಿ ಬರೆದಿರುವ ಗ್ರಾಮ. ಪ್ರಸ್ತುತ ಅಂಗಾಂಗ ಕಸಿ (ಟ್ರ್ಯಾನ್ಸಪ್ಲ್ಯಾಂಟ್) ಕೂಡಾ ಅಲ್ಲಿನ ಆರ್.ಎಂ.ಎಸ್.ಎಸ್ (ರೂರಲ್ ಮೆಡಿಕಲ್ ಸರ್ವೀಸ್ ಸೊಸೈಟಿ) ಆಸ್ಪತ್ರೆಯು ಈ ರೀತಿಯ ಅತ್ಯಾಧುನಿಕ ಸೌಲಭ್ಯವನ್ನು ಪಡೆಯುತ್ತಿರುವ ಉತ್ತರ ಕರ್ನಾಟಕ ಭಾಗದ ಮೊದಲ ಗ್ರಾಮೀಣ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸಾತ್ವಿಕ ಶಕ್ತಿಗಳು ಮರೆಯಾಗಿ, ತಾಮಸ ಶಕ್ತಿ ಬೆಳೆದು, ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಬರುತ್ತಿದೆ-ಸಚಿವ ಎಚ್‌.ಕೆ. ಪಾಟೀಲ
ಸಾತ್ವಿಕ ಶಕ್ತಿಗಳು ಮರೆಯಾಗಿ, ತಾಮಸ ಶಕ್ತಿ ಬೆಳೆದು, ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಬರುತ್ತಿದೆ. ಇದು ಆತಂಕದ ಬೆಳವಣಿಗೆಯಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.
ಸಿರಿಧಾನ್ಯ ಮೇಳ, ಕೃಷಿ ತಂತ್ರಜ್ಞಾನ ಪ್ರದರ್ಶನಕ್ಕೆ ಸಚಿವ ಎಚ್‌.ಕೆ. ಪಾಟೀಲ ಚಾಲನೆ
ಗದಗತಾಲೂಕಿನ ಹುಲಕೋಟಿಯ ಕೈಲಾಸ ಆಶ್ರಮದ 32ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಲಾದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳವು ಆಶ್ರಮಕ್ಕೆ ಬಂದಿದ್ದ ಭಕ್ತರು ವಿಶೇಷವಾಗಿ ರೈತರು, ರೈತ ಮಹಿಳೆಯರ ಗಮನ ಸಳೆಯಿತು.
ಮಕ್ಕಳಲ್ಲಿ ಆತ್ಮಸ್ಥೈರ್ಯ ಬೆಳೆಸಿ: ಮಿಥುನ ಜಿ. ಪಾಟೀಲ
ಪ್ರತಿಭೆ, ಸಾಮರ್ಥ್ಯಕ್ಕೆ ತಕ್ಕಂತೆ ಸೂಕ್ತ ವಾತಾವರಣ ಕಲ್ಪಿಸುವುದರ ಜೊತೆಗೆ, ಗುರಿ, ಸಾಧನೆಗಾಗಿ ಮಕ್ಕಳಲ್ಲಿ ಆತ್ಮ ಸ್ಥೈರ್ಯ ಬೆಳೆಸಬೇಕು. ಈ ದಿಸೆಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದು ಪುರಸಭೆ ಉಪಾಧ್ಯಕ್ಷ ಮಿಥುನ ಜಿ. ಪಾಟೀಲ ಹೇಳಿದರು.
ಶಕ್ತಿದೇವಿಯ ಆರಾಧನೆ ಮಾಡುವುದರಿಂದ ಇಷ್ಟಾರ್ಥಗಳು ಸಿದ್ಧಿಸುತ್ತವೆ
ನಮ್ಮ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ದೇವಿಯ ಆರಾಧನೆ ಮಾಡುವುದರಿಂದ ನಮ್ಮ ಪಾಪ ಕರ್ಮಗಳು ದೂರಾಗುತ್ತವೆ ಎನ್ನುವ ನಂಬಿಕೆ ಬಲವಾಗಿದೆ. ಆದ್ದರಿಂದ ದೇವಿಯ ಆರಾಧನೆಗಳು ನಮ್ಮ ಸುತ್ತ ನಡೆಯುತ್ತವೆ ಎಂದು ಶಿಕ್ಷಕಿ ಮೈತ್ರಾದೇವಿ ಹಿರೇಮಠ ಹೇಳಿದರು.
ಅಯೋಧ್ಯೆಯಿಂದ ಮರಳಿದ ಮುತ್ತಣ್ಣನಿಗೆ ಭವ್ಯ ಸ್ವಾಗತ
ಅಯೋಧ್ಯೆಗೆ ಪಾದಯಾತ್ರೆ ಕೈಗೊಂಡು ಬಾಲರಾಮನ ದರ್ಶನ ಪಡೆದು ತವರಿಗೆ ವಾಪಸಾದ ಗಾಂಧಿ ವೇಷಧಾರಿ ಮುತ್ತಣ್ಣ ತಿರ್ಲಾಪುರ ಅವರಿಗೆ ಸ್ವಗ್ರಾಮ ರೋಣ ತಾಲೂಕಿನ ಕರಕಿಕಟ್ಟಿಯಲ್ಲಿ ಮೆರವಣಿಗೆ ಮಾಡಿ, ವಸ್ತ್ರ ಮಾಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.
  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 547
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved