• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿ ಶಾಸಕರ ಮಾತಿಗೆ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಹೇಗೆ ?
ಮುಂಡರಗಿಯಿಂದ ಶಿರಹಟ್ಟಿಗೆ ತೆರಳುವಾಗ ಬಾಗೇವಾಡಿ ಹತ್ತಿರವಿರುವ ಕಣವಿ ದುರ್ಗಮ್ಮನ ದೇವಸ್ಥಾನಕ್ಕೆ ಮಂಗಳವಾರ ಹಾಗೂ ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು, ರಾತ್ರಿ ವೇಳೆಯಲ್ಲಿ ಕತ್ತಲೆಯಾಗುವುದರಿಂದ ಜನರ ಅನುಕೂಲಕ್ಕಾಗಿ ಅಲ್ಲಿ ವಿದ್ಯುತ್ ಹಾಕುವಂತೆ ಹೆಸ್ಕಾಂ ಇಲಾಖೆ ಅಧಿಕಾರಿಗೆ 50 ಬಾರಿ ಮಾತನಾಡಿದರೂ ಈ ಬಗ್ಗೆ ಯಾವುದೇ ರೀತಿ ಕೆಲಸ ಮಾಡಿಲ್ಲ. ಅಧಿಕಾರಿ ಶಾಸಕರ ಮಾತಿಗೆ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಹೇಗೆ ? ನಾವು ಸಾರ್ವಜನಿಕರಿಗೆ ಏನು ಹೇಳಬೇಕು ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ವ್ಯಕ್ತ ಪಡಿಸಿದರು.
ಮಕ್ಕಳು ಮಾನವೀಯ ಮೌಲ್ಯಗಳನ್ನು ಮರೆತಿದ್ದಾರೆ- ಶಿವಾನಂದ ಶಾಸ್ತ್ರಿ
ಈ ಆಧುನಿಕ ಯುಗದಲ್ಲಿ ಮೊಬೈಲ್‌ ಗೀಳಿನಿಂದ ಮಕ್ಕಳು ಮಾನವೀಯ ಮೌಲ್ಯಗಳನ್ನು ಮರೆತು ಗುರುಗಳನ್ನು ನಿಂದಿಸುತ್ತಿರುವುದು ಸಮಾಜದ ಅವನತಿಯ ಮುನ್ಸೂಚನೆಯಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ನಯ-ವಿನಯತೆಯನ್ನು ಅವಶ್ಯವಾಗಿ ಕಲಿಸಬೇಕು. ನಮ್ಮ ಮಕ್ಕಳ ವರ್ತನೆಯಿಂದ ಆ ಕುಟುಂಬದ ಸಂಸ್ಕಾರವನ್ನು ಕಂಡು ಹಿಡಿಯಬಹುದು. ಹೀಗಾಗಿ ಮಕ್ಕಳು ಸುಸಂಸ್ಕೃತರಾಗಿ ಬಾಳಬೇಕು ಎಂದು ಕೊಂಗವಾಡದ ಶಿವಾನಂದ ಶಾಸ್ತ್ರಿಗಳು ಉಣ್ಣಿಮಠ ಹೇಳಿದರು.
ಭಾರತೀಯ ಸಂಪ್ರದಾಯದಲ್ಲಿ ಗುರುವಿಗೆ ವಿಶೇಷ ಸ್ಥಾನ
ಕಡ್ಲಿಗಡಬ ಹುಣ್ಣಿಮೆಯೊಂದಿಗೆ ಬರುವ ಗುರುಪೂರ್ಣಿಮೆ ನಿಮಿತ್ತ ತಾಲೂಕಿನ ಬೆಳ್ಳಟ್ಟಿ ಗ್ರಾಮದ ರಾಮಲಿಂಗೇಶ್ವರ ದಾಸೋಹ ಮಠದ ಬಸವರಾಜ ಮಹಾಸ್ವಾಮಿಗಳಿಗೆ ಶಿರಹಟ್ಟಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರಣ್ಣ ಅಂಗಡಿ ಹಾಗೂ ಸಂಗಡಿಗರು ಗೌರವ ಸಮರ್ಪಣೆ ಸಲ್ಲಿಸಿ ಆಶೀರ್ವಾದ ಪಡೆದರು.
ಮನಸ್ಸಿನ ಸಂಕಲ್ಪ-ವಿಕಲ್ಪ ಅಳಿಯಲಿ: ಬಸವೇಶ್ವರಿ ಮಾತಾಜಿ
ಲಿಂಗಧಾರಣವಾದ ಬಳಿಕ ದೇಹವೇ ಅಂಗವೆನಿಸುವುದು. ಮನಸ್ಸಿನ ಸಂಕಲ್ಪ-ವಿಕಲ್ಪಗಳು ಅಳಿಯಬೇಕು. ಮನಸ್ಸಿನ ನೆಮ್ಮದಿಗೋಸ್ಕರ ಅನೇಕ ರಾಜಮಹಾರಾಜರು ತಮ್ಮ ಸಿರಿ ತೊರೆದು ಕಲ್ಯಾಣದ ಅನುಭವ ಮಂಟಪಕ್ಕೆ ಬಂದರು ಎಂದು ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾಜಿ ಹೇಳಿದರು.
ಕೈಕೊಟ್ಟ ಮಳೆ, ಮಲಪ್ರಭಾ ಜಲಾಶಯದತ್ತ ರೈತರ ಚಿತ್ತ!
ತಾಲೂಕಿನಲ್ಲಿ ಈ ಬಾರಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆಗಳೆಲ್ಲಾ ಒಣಗುತ್ತಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಮಲಪ್ರಭಾ ಜಲಾಶಯದತ್ತ ಚಿತ್ತ ನೆಟ್ಟಿದ್ದಾರೆ!
ಪ್ರವಾಸೋದ್ಯಮ ಇಲಾಖೆಯ ಕಾರ್ಯ ಶ್ಲಾಘನೀಯ: ಶ್ರೀಗಳು
101 ದೇವಾಲಯ, 101 ಕಲ್ಯಾಣಿಗಳನ್ನು ಹೊಂದಿರುವ ಇತಿಹಾಸ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಜೈನ ಬಸದಿಗಳನ್ನು ಅಭಿವೃದ್ಧಿ ಮಾಡುವ ಜತೆಗೆ ಅವುಗಳ ಸಂರಕ್ಷಣೆಗೆ ಕಂಕಣ ಬದ್ಧರಾಗಿ ನಿಂತಿರುವ ಪ್ರವಾಸೋದ್ಯಮ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಶ್ರವಣಬೆಳಗೋಳದ ಚಾರುಕೀರ್ತಿ ಭಟ್ಟಾಚಾರ್ಯ ಪಂಡಿತಾಚಾರ್ಯ ಸ್ವಾಮೀಜಿ ಹೇಳಿದರು.
ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಅವಶ್ಯ: ಹೆಬ್ಬಳ್ಳಿ
ಪತ್ರಕರ್ತರು ಜಾತ್ಯತೀತ ಮನೋಭಾವ ಹಾಗೂ ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಹೆಬ್ಬಳ್ಳಿ ಹೇಳಿದರು.
ಹಸಿರಿಗಾಗಿ ಅಲ್ಲ ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು
ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಕೇಶವ ದೇವಾಂಗ ಕರೆ ನೀಡಿದರು.
ಖಾಸಗಿ ಶಾಲಾ-ಕಾಲೇಜುಗಳಿಗೆ ವಿಧಿಸಿದ ಷರತ್ತು ಸಡಿಲಗೊಳಿಸಲು ಆಗ್ರಹ
ಗಜೇಂದ್ರಗಡ ತಾಲೂಕಿನ ಖಾಸಗಿ ಶಾಲಾ-ಕಾಲೇಜುಗಳಿಗೆ ಮತ್ತು ಕನ್ನಡ ಶಾಲೆಗಳ ರಕ್ಷಣೆಗೆ ಹಾಗೂ ಶಾಲೆಗಳಿಗೆ ವಿಧಿಸಿದ ಷರತ್ತುಗಳನ್ನು ಸಡಿಲಗೊಳಿಸಲು ಆಗ್ರಹಿಸಿ ತಾಲೂಕಿನ ಖಾಸಗಿ ಅನುದಾನ ರಹಿತ ಪ್ರಾಥಮಿಕ ಶಿಕ್ಷಣ ಸಂಸ್ಥೆಗಳ ತಾಲೂಕು ಘಟಕದಿಂದ ಸೋಮವಾರ ಇಲ್ಲಿನ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ನೀಡಿದರು.
ಗದಗ ಪೊಲೀಸರ ಕಾರ್ಯಾಚರಣೆ, ಮಹಿಳೆ ಸೇರಿ 6 ಅಕ್ರಮ ಗಾಂಜಾ ಮಾರಾಟಗಾರರ ಬಂಧನ
ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ತಂಡವನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಒಟ್ಟು 6 ಜನರನ್ನು ಬಂಧಿಸಿ 6.7 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved