ಬೀದಿಬದಿ ವ್ಯಾಪಾರಿಗಳ ಕಾಯ್ದೆ ಜಾರಿ ಸ್ಥಳೀಯ ಸಂಸ್ಥೆಗಳ ಕರ್ತವ್ಯ-ಮಹೇಶ ಪತ್ತಾರಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಮುಖಾಂತರ ಅವರ ಜೀವನೋಪಾಯ ಹಕ್ಕು, ಸಂರಕ್ಷಣೆಯನ್ನು ಖಾತ್ರಿ ಪಡಿಸುವುದು ಸ್ಥಳೀಯ ಸಂಸ್ಥೆಗಳ ಕರ್ತವ್ಯವಾಗಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೆಡರೇಶನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ ಪತ್ತಾರ ಆಗ್ರಹಿಸಿದರು.