ಏ. 1ರಿಂದ ಕೃಷಿ ಕಾರ್ಮಿಕರಿಗೆ ನರೇಗಾ ಉದ್ಯೋಗ ಪ್ರಾರಂಭಬೇಸಿಗೆ ಬಂತು ಎಂದು ಗ್ರಾಮೀಣ ಕೂಲಿಕಾರರಿಗೆ ಕೆಲಸ ಸಿಗಲ್ಲ ಎಂಬ ಭಯಬೇಡ. ಏಪ್ರೀಲ್-೧ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಈ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದುಪಯೋಗ ದೊರಕುವಂತಾಗಿ ಕೆಲಸದ ಹಸವು ಇರುವವರಿಗೆ ಕೆಲಸ ಕೊಡುವಂತೆ ಕಾಯಕಬಂಧುಗಳು ಕಾರ್ಯನಿರ್ವಹಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ.ಇನಾಮದಾರ ಹೇಳಿದರು.