ಗಂಗಾವತಿಯಲ್ಲಿ ಇಂದು ಗಣೇಶ ವಿಸರ್ಜನೆ, 1200 ಪೊಲೀಸರ ನಿಯೋಜನೆ

| Published : Sep 16 2025, 12:03 AM IST

ಗಂಗಾವತಿಯಲ್ಲಿ ಇಂದು ಗಣೇಶ ವಿಸರ್ಜನೆ, 1200 ಪೊಲೀಸರ ನಿಯೋಜನೆ
Share this Article
  • FB
  • TW
  • Linkdin
  • Email

ಸಾರಾಂಶ

ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಷಣ ಮತ್ತು ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ನಗರದಲ್ಲಿ ಜಿಲ್ಲಾ ಪೊಲೀಸ್ ಪಡೆ ಸೇರಿದಂತೆ ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳಿಂದ ಅಧಿಕಾರಿಗಳು ಸೇರಿದಂತೆ 1200ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ.

ಗಂಗಾವತಿ:

ನಗರದಲ್ಲಿ ವಿಜಯವೃಂದ ಯುವಕ ಸಂಘದಿಂದ ಸೆ. 16ರಂದು ಗಣೇಶ ವಿಸರ್ಜನೆ ಮತ್ತು ಶೋಭಾಯಾತ್ರೆ ನಡೆಯಲಿದ್ದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಗವಹಿಸಿ ಮಧ್ಯಾಹ್ನ 3 ಗಂಟೆಗೆ ಡಾ. ಬಾಬಾ ಜಗಜೀವನ್ ರಾಮ್ ವೃತ್ತದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಬಿಗಿ ಭದ್ರತೆ:

ಬಸನಗೌಡ ಪಾಟೀಲ ಯತ್ನಾಳ ಭಾಷಣ ಮತ್ತು ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ನಗರದಲ್ಲಿ ಜಿಲ್ಲಾ ಪೊಲೀಸ್ ಪಡೆ ಸೇರಿದಂತೆ ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳಿಂದ ಅಧಿಕಾರಿಗಳು ಸೇರಿದಂತೆ 1200ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ. 5 ಕೆಎಸ್‌ಆರ್‌ಪಿ ತುಕಡಿ, 8 ಜಿಲ್ಲಾ ಮೀಸಲು ಪಡೆ ತಂಡ ಆಗಮಿಸಿದೆ. ಭಾಷಣ ನಡೆಯುವ ಸನಿಹದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ವಿವಿಧ ವೃತ್ತ ಮತ್ತು ಸೂಕ್ಷ್ಮ ಪ್ರದೇಶಗಲ್ಲಿ ಒಟ್ಟು 150 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವಿಜಯನಗರ ಹಾಗೂ ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೊಕ್ಕಾಂ ಹೂಡಿದ್ದಾರೆ.

ಪಥ ಸಂಚಲನ:

ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸ್‌ ಇಲಾಖೆಯಿಂದ ಪಥಸಂಚಲನ ನಡೆಯಿತು.