ಸಾರಾಂಶ
ಕೃಷ್ಣ ಪರಮಭಕ್ತರ ಮೂಲಕ ಒಂದು ಕೋಟಿಗೂ ಅಧಿಕ ಜನರಿಂದ ಭಗವದ್ಗೀತೆಯನ್ನು ಬರೆಸಿ ಉಡುಪಿಯ ಶ್ರೀಕೃಷ್ಣನಿಗೆ ಸಮರ್ಪಿಸುವುದು, ಜಾತಿ, ಮತ ಭೇದವಿಲ್ಲದೆ ಶ್ರೀ ಕೃಷ್ಣನ ಭಕ್ತಿಯನ್ನು, ಭಗವದ್ಗೀತೆಯನ್ನು ಜನತೆಗೆ ತಲುಪಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ಮುಂದಿನ 2 ವರ್ಷಗಳ ತಮ್ಮ ಪರ್ಯಾಯದ ಅವಧಿಯಲ್ಲಿ ಭಗವದ್ಗೀತೆಯ ಸಾರವನ್ನು ಜನರಿಗೆ ತಲುಪಿಸುವ ಉದ್ದೇಶದೊಂದಿಗೆ ಕೋಟಿ ಗೀತಾ ಲೇಖನ ಯಜ್ಞವನ್ನು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸಂಕಲ್ಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೀತಾ ಯಜ್ಞ ಸಮಿತಿ ವತಿಯಿಂದ ಡಿ.23 ಮತ್ತು 24ರಂದು ‘ಗೀತೋತ್ಸವʼ ಕಾರ್ಯಕ್ರಮವನ್ನು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.ಭಾವಿ ಪರ್ಯಾಯ ಪೀಠಾಧೀಶ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ನಡೆಯುವ ಈ ಗೀತೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಭಾಗವಹಿಸಲಿದ್ದಾರೆ.
ಕೃಷ್ಣ ಪರಮಭಕ್ತರ ಮೂಲಕ ಒಂದು ಕೋಟಿಗೂ ಅಧಿಕ ಜನರಿಂದ ಭಗವದ್ಗೀತೆಯನ್ನು ಬರೆಸಿ ಉಡುಪಿಯ ಶ್ರೀಕೃಷ್ಣನಿಗೆ ಸಮರ್ಪಿಸುವುದು, ಜಾತಿ, ಮತ ಭೇದವಿಲ್ಲದೆ ಶ್ರೀ ಕೃಷ್ಣನ ಭಕ್ತಿಯನ್ನು, ಭಗವದ್ಗೀತೆಯನ್ನು ಜನತೆಗೆ ತಲುಪಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.ಎರಡು ದಿನಗಳ ಈ ಗೀತೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪುಸ್ತಕ ಮಳಿಗೆಗಳು ಇರಲಿವೆ. ಭಾನುವಾರ ನಡೆಯುವ ಸಮಾರೋಪ ಸಮಾರಂಭಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಶಾಸಕರಾದ ಉದಯ ಗರುಡಾಚಾರ್, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದರೆ ಎಂದು ಮಠದ ಪ್ರಕಟಣೆ ತಿಳಿಸಿದೆ.