ಸಾರಾಂಶ
ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಮಕ್ಕಳು ಸಮಗ್ರವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಶಿಕ್ಷಣವನ್ನು ಕಲಿಯಬೇಕು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಕಾಂತರಾಜು ತಿಳಿಸಿದರು. ಪ್ರಾಪಂಚಿಕ ವಿಷಯಗಳ ಬಗ್ಗೆ ಅರಿವನ್ನು ಹೊಂದಬೇಕು ಮತ್ತು ಸಮಾನತೆ ಭ್ರಾತೃತ್ವ ಹಾಗೂ ಸಮಾಜದಲ್ಲಿ ಶಿಕ್ಷಣದಿಂದ ಉನ್ನತವಾದ ಹುದ್ದೆಗಳ ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಕನ್ನಡಪ್ರಭ ವಾರ್ತೆ ಹಾಸನ
ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಮಕ್ಕಳು ಸಮಗ್ರವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಶಿಕ್ಷಣವನ್ನು ಕಲಿಯಬೇಕು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಕಾಂತರಾಜು ತಿಳಿಸಿದರು. ನಗರದ ೮೦ ಫೀಟ್ ರಸ್ತೆ ಬಳಿ ಇರುವ ತಾಜ್ ಕನ್ವೆನ್ಷನ್ ಹಾಲ್ನಲ್ಲಿ ಕರ್ನಾಟಕ ಉರ್ದು ಅಕಾಡೆಮಿ ಬೆಂಗಳೂರು, ಹಾಸನ ಜಿಲ್ಲಾ ಮಟ್ಟದ ಸರ್ಕಾರಿ ಹಾಗೂ ಸರ್ಕಾರೇತರ ಉರ್ದು ಶಾಲೆಗಳ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅಖಿಲ ಭಾರತ ಮಟ್ಟದ ಕವಿಗೋಷ್ಠಿ ಮುಶಾಯಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣವನ್ನು ಕಲಿತರೆ ಸಾಲದು. ಮಕ್ಕಳು ಸಮಗ್ರವಾಗಿ ಎಲ್ಲಾ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಶಿಕ್ಷಣವನ್ನು ಕಲಿಯಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕೂಡ ಕಲಿಬೇಕು. ಅದೇ ನಿಟ್ಟಿನಲ್ಲಿ ಇಂದು ಓದುವ ಅಭ್ಯಾಸ ಮಕ್ಕಳಲ್ಲಿ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರಾಪಂಚಿಕ ವಿಷಯಗಳ ಬಗ್ಗೆ ಅರಿವನ್ನು ಹೊಂದಬೇಕು ಮತ್ತು ಸಮಾನತೆ ಭ್ರಾತೃತ್ವ ಹಾಗೂ ಸಮಾಜದಲ್ಲಿ ಶಿಕ್ಷಣದಿಂದ ಉನ್ನತವಾದ ಹುದ್ದೆಗಳ ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು. ಜನಪ್ರಿಯ ಆಸ್ಪತ್ರೆಯ ಮುಖ್ಯಸ್ಥರಾದ ಅಬ್ದುಲ್ ಬಶೀರ್ ಅವರು ಮಾತನಾಡುತ್ತಾ, ಈ ಕಾರ್ಯಕ್ರಮ ಆಯೋಜನೆಗೊಂಡಿರುವುದು ತುಂಬಾ ಸಂತೋಷದ ವಿಷಯ. ಹಾಗೆಯೇ ಮಕ್ಕಳು ಉರ್ದು ಕವಿಗೋಷ್ಠಿಯಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಬೇಕು ಮತ್ತು ಓದುವ ಅಭ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಂಯೋಜಕರು ಮತ್ತು ಸದಸ್ಯರು ಕರ್ನಾಟಕ ಉರ್ದು ಅಕಾಡೆಮಿ ಬೆಂಗಳೂರು ಡಾ. ಅಕ್ಟರ್ ಸೈಯಿದಾ ಕಾನಂ ಇವರು ಮಾತನಾಡುತ್ತಾ, ಈ ರೀತಿಯ ಕಾರ್ಯಕ್ರಮಗಳನ್ನು ಜಿಲ್ಲಾಮಟ್ಟದಲ್ಲಿ ಆಯೋಜನೆ ಮಾಡಿರುವುದು ನಮಗೆ ತುಂಬಾ ಸಂತೋಷ ತಂದಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಅನಾವರಣಗೊಳಿಸಲು ಉಪಯುಕ್ತವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳು ಕಾರ್ಯಕ್ರಮದ ಸಂಪೂರ್ಣ ಉಪಯೋಗ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಸೈಯದ್ ತಾಜ್ ಅಧ್ಯಕ್ಷರು ರೆಹಬರ್ ವೆಲ್ಫೇರ್ ಅಸೋಸಿಯೇಷನ್ ಹಾಗೂ ಅಲ್ಲಮೀನ್ ವಿದ್ಯಾಸಂಸ್ಥೆ, ಹಾಸನ ಪ್ರೊಫೆಸರ್ ಸೈಯದ್ ಶಹಬುದ್ದೀನ್ ಹಾಗೂ ಹಿರಿಯ ಸಾಹಿತಿಗಳು ಹಾಸನ ಜನಾಬ್ ಸೈಯದ್ ನಿಜಾಂ ಶಾ ಕಾದ್ರಿ ಕಾರ್ಯದರ್ಶಿ ಕರ್ನಾಟಕ ರಾಜ್ಯ ಉರ್ದು ಶಿಕ್ಷಕರ ಸಂಘ ಬೆಂಗಳೂರು ಹಾಗೂ ಎಸ್ ಎಸ್ ಪಾಷಾ ಮತ್ತಿತರರು ಹಾಜರಿದ್ದರು.