ದೊಡ್ಡಬಳ್ಳಾಪುರ: ವಿಷಪೂರಿತ ಹಾವು ಕಡಿದು 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದ ತೋಟದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಮಾಂಜಿ ಮತ್ತು ವಿನೋದಮ್ಮ ದಂಪತಿ ಮಗಳಾದ ಅನುಷಾ ಸಾವನ್ನಪ್ಪಿರುವ ಬಾಲಕಿ. ತಾಲೂಕಿನ ತೂಬಗೆರೆ ಹೋಬಳಿಯ ಟಿ.ಹೊಸಹಳ್ಳಿ ನಿವಾಸಿಗಳಾಗಿರುವ ಈ ದಂಪತಿ ಕೋಳೂರು ಗ್ರಾಮದ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸವಾಗಿದ್ದರು ಎನ್ನಲಾಗಿದೆ. ಶುಕ್ರವಾರ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಮಗುವಿಗೆ ಹಾವು ಕಚ್ಚಿದ್ದು, ಅಸ್ವಸ್ಥಗೊಂಡಿದ್ದ ಮಗುವನ್ನು ಪೋಷಕರು ಕೂಡಲೇ ಆಸ್ಪತ್ರೆಗೆ ಕರೆತಂದಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಹಾವು ಕಡಿದು ಬಾಲಕಿ ಸಾವು
ದೊಡ್ಡಬಳ್ಳಾಪುರ: ವಿಷಪೂರಿತ ಹಾವು ಕಡಿದು 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದ ತೋಟದಲ್ಲಿ ನಡೆದಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.