ಸಾರಾಂಶ
ಬೆಳಗಾವಿ ಅಧಿವೇಶನ ಸಂಧರ್ಭ ಪಂಚಮಸಾಲಿ ಸಮುದಾಯದ ಮೇಲೆ ಲಾಠಿಜಾರ್ಜ್ ಮಾಡಿದ್ದನ್ನು ಖಂಡಿಸಿ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಮತ್ತು ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ತಹಸೀಲ್ದಾರರಿಗೆ ಮನವಿ । ಲಾಠಿ ಜಾರ್ಜ್ಗೆ ಖಂಡನೆಕನ್ನಡಪ್ರಭ ವಾರ್ತೆ ಕುಕನೂರು
ಬೆಳಗಾವಿ ಅಧಿವೇಶನ ಸಂಧರ್ಭ ಪಂಚಮಸಾಲಿ ಸಮುದಾಯದ ಮೇಲೆ ಲಾಠಿಜಾರ್ಜ್ ಮಾಡಿದ್ದನ್ನು ಖಂಡಿಸಿ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಮತ್ತು ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತುಕುಕನೂರಿನ ಡಾ. ಮಹಾದೇವ ಸ್ವಾಮೀಜಿ ಮಾತನಾಡಿ, ಈ ನಾಡಿನ ಬಹುತೇಕ ಮಠಗಳಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಹೇಳಿದರು.
ಪಂಚಮಸಾಲಿ ಸಮುದಾಯದ ಹೋರಾಟ ಹತ್ತಿಕ್ಕುವ ಕಾರ್ಯದ ಜೊತೆಗೆ ಸಮಾಜದ ಬಂಧುಗಳ ಮೇಲೆ ಲಾಠಿ ಜಾರ್ಜ್ ಮಾಡಿದ್ದು ಖಂಡನೀಯವಾದದ್ದು. ಸರ್ಕಾರ ಅನ್ಯಾಯಕ್ಕೆ ಒಳಗಾದ ಜನರಿಗೆ ಸೂಕ್ತ ಚಿಕಿತ್ಸೆ ನೀಡಿ ಆ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.ತಾಲೂಕ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ವೀರಣ್ಣ ಅಣ್ಣಿಗೇರಿ ಮಾತನಾಡಿ, ಸಮಾಜದವರಿಗೆ ಲಾಠಿಜಾರ್ಜ್ ಮಾಡಿರುವುದು ಲಿಂಗಾಯತ ಸಮುದಾಯಕ್ಕೆ ನೋವುಂಟು ಮಾಡಿದೆ. ಸರ್ಕಾರ ಈ ಕೂಡಲೇ ಸಮಾಜದ ಕ್ಷಮೆ ಕೇಳಬೇಕು ಎಂದರು.
ಕುಕನೂರಿನ ಗ್ರೇಡ್ 2 ತಹಸೀಲ್ದಾರ ಮನವಿ ಸ್ವೀಕರಿಸಿದರು.ಪ್ರಮುಖರಾದ ಗದಿಗೆಪ್ಪ ಪವಾಡಶೆಟ್ಟಿ, ಶರಣಪ್ಪ ಗುತ್ತಿ, ಯಲ್ಲಪ್ಪ ಗೌಡ್ರ, ಬಸವರಾಜ ಹುಂಡಿ, ಎಂ.ಸಿ. ಹೀರೇಮಠ, ಸಂಗಮೇಶ ಕಲ್ಮಠ, ರಾಮನಗೌಡ ಹುಚನೂರು, ಚಂದ್ರಶೇಖರಯ್ಯ ಗಣಚಾರಿ ಇತರರು ಇದ್ದರು.