ದಸರಾ ಕೇಕ್ ಶೋಗೆ ಮಕ್ಕಳು, ಅನಾಥರು, ಹಿರಿಯ ನಾಗರಿಕರಿಗೆ ಉಚಿತ ಪ್ರವೇಶ
Author : KannadaprabhaNewsNetwork
Published : Oct 06 2025, 01:00 AM IST
40 | Kannada Prabha
Image Credit: KP
ನಗರದಲ್ಲಿ ದಸರಾ ಕೇಕ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ವಿಶೇಷ ಆಕರ್ಷಣೆಯಾಗಿ ಈ ಬಾರಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಅನಾಥರು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವೃದ್ಧಾಶ್ರಮ ನಿವಾಸಿಗಳಿಗೆ ಉಚಿತ ಪ್ರವೇಶ ನೀಡಲಾಗಿದೆ
ಮೈಸೂರು : ನಗರದಲ್ಲಿ ದಸರಾ ಕೇಕ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ವಿಶೇಷ ಆಕರ್ಷಣೆಯಾಗಿ ಈ ಬಾರಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಅನಾಥರು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವೃದ್ಧಾಶ್ರಮ ನಿವಾಸಿಗಳಿಗೆ ಉಚಿತ ಪ್ರವೇಶ ನೀಡಲಾಗಿದೆ ಎಂದು ಆಯೋಜಕ ದಿನೇಶ್ ಹೇಳಿದರು.
ಕೇಕ್ ಶೋನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂಬ ವಿಶಿಷ್ಟ ಥೀಮ್ ಆಯ್ಕೆ ಮಾಡಲಾಗಿದ್ದು, ಆಧುನಿಕ ಮೈಸೂರಿನ ನಿರ್ಮಾಣಕ್ಕೆ ಕಾರಣರಾದ ಅವರ ದರ್ಶನವನ್ನು ಸ್ಮರಿಸುತ್ತದೆ. ಮೈಸೂರು ಅರಮನೆ, ನಾಲ್ವಡಿ ಅವರ ಸಾಧನೆಗಳಿಂದ ಪ್ರೇರಿತ ಮಾದರಿಗಳನ್ನು ಕೇಕ್ ರೂಪದಲ್ಲಿ ಕಲಾತ್ಮಕವಾಗಿ ಸಿದ್ಧಪಡಿಸಲಾಗಿದೆ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.