ಸಾರಾಂಶ
ಕಡೂರು, ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಲ್ಲಿ ರಾಜ್ಯ ಸರಕಾರ ಹೆಚ್ಚು ಒತ್ತು ನೀಡುತ್ತಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿ ಆವರಣದಲ್ಲಿ ತ್ರಿಚಕ್ರ ವಾಹನ-ಸಾಧನ ಸಲಕರಣೆ ವಿತರಿಸಿ
ಕನ್ನಡಪ್ರಭ ವಾರ್ತೆ, ಕಡೂರುವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಲ್ಲಿ ರಾಜ್ಯ ಸರಕಾರ ಹೆಚ್ಚು ಒತ್ತು ನೀಡುತ್ತಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು. ಸೋಮವಾರ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿ ಆವರಣದಲ್ಲಿ ವಿಕಲಚೇತನರ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಗಳು ಮತ್ತು ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು. ವಿಕಲಚೇತನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವಿವಿಧ ಸೌಲಭ್ಯಗಳ ಅಡಿ ಸಲಕರಣೆಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ. ಇದರಿಂದ ಅವರ ಮನೋಸ್ಥೈರ್ಯ ವನ್ನು ಹೆಚ್ಚಿಸಿದಂತಾಗುತ್ತದೆ. ಅಂಗವಿಕಲರ ಪುನರ್ವಸತಿ ಕೇಂದ್ರ ಕಚೇರಿಯಡಿ ಮಂಜೂರಾಗಿರುವ ಮೂರು ತ್ರಿಚಕ್ರ ವಾಹನಗಳು, ಒಂದು ಬ್ಯಾಟರಿ ಚಾಲಿತ ವಿಲ್ಚೇರ್ ಹಾಗೂ ಲ್ಯಾಪ್ಟ್ಯಾಪ್ ಸೇರಿದಂತೆ ವಿವಿಧ ಸಾಧನ ಸಲಕರಣೆ ವಿತರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಆಸಂದಿ ಕಲ್ಲೇಶ್, ತಾಪಂ ಇಒ ಸಿ.ಆರ್. ಪ್ರವೀಣ್, ಜಿಲ್ಲಾ ವಿಕಲ ಚೇತನರ ಪ್ರಭಾರೆ ಅಧಿಕಾರಿ ವೀರಭದ್ರಯ್ಯ, ಎಂ.ಆರ್.ಡಬ್ಲೂ ಶಹನಾವಾಜ್, ತಾಪಂ ಮಾಜಿ ಅಧ್ಯಕ್ಷ ದಾಸಯ್ಯನಗುತ್ತಿ ಚಂದ್ರಪ್ಪ, ಸಾಣೇಹಳ್ಳಿ ಆರಾಧ್ಯ, ಅಣ್ಣೀಗೆರೆ ತಮ್ಮಯ್ಯ, ರಾಜೇಶ್, ಕಿರಣ್ ಮತ್ತಿತರಿದ್ದರು.2ಕೆಕೆಡಿಯು3 ಕಡೂರು ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ವಿಕಲಚೇತನರ ಫಲಾನುಭವಿಗಳಿಗೆ ತ್ರಿಚಕ್ರವಾಹನದ ವಿತರಣೆ ಕಾರ್ಯಕ್ರಮವನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು. ಆಸಂಧಿಕಲ್ಲೇಶ್, ಸಿ.ಆರ್.ಪ್ರವೀಣ್, ವೀರಭದ್ರಯ್ಯ, ಶಾನಾವಾಜ್ ಮತ್ತಿತರಿದ್ದರು.