ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಬಿಎಸ್ವೈ ವಾಗ್ದಾಳಿ
KannadaprabhaNewsNetwork | Published : Oct 16 2023, 01:45 AM IST
ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಬಿಎಸ್ವೈ ವಾಗ್ದಾಳಿ
ಸಾರಾಂಶ
ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಬಿಎಸ್ವೈ ವಾಗ್ದಾಳಿ
ಗ್ಯಾರಂಟಿ ಜಾರಿ ಮಾಡ್ತೇವೆಂದು ಹೇಳಿ ಸರ್ಕಾರದ ಖಜಾನೆ ಖಾಲಿಯಾಗಿದೆ । ಲಿಂಗಸುಗೂರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ಕನ್ನಡಪ್ರಭ ವಾರ್ತೆ ಲಿಂಗಸುಗೂರು ಮಳೆ ಇಲ್ಲದೇ ರಾಜ್ಯದಲ್ಲಿ ಭೀಕರ ಬರ ಆವರಿಸಿ ರೈತರು, ಸಾಮಾನ್ಯ ಜನರು ಬದುಕು ಸಾಗಿಸುವುದು ದುಸ್ಥರವಾಗಿ ಉಸಿರುಗಟ್ಟುವ ವಾತಾವರಣ ನಿರ್ಮಾಣಗೊಂಡಿದೆ. ರಾಜ್ಯ ಸರ್ಕಾರ ಬರ ಪರಿಹಾರದ ಯೋಜನೆಗಳನ್ನು ರೂಪಿಸದೆ ಆಡಳಿತ ಕೈಚೆಲ್ಲಿ ಕುಳಿತಿದೆ ಎಂದು ಮಾಜಿ ಮುಖ್ಯಂತ್ರಿ ಬಿ.ಎಸ್ ಯಡಿಯೂರಪ್ಪನವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಲಿಂಗಸುಗೂರಿನಲ್ಲಿ ಆಯೋಜಿಸಿರುವ ರಂಬಾಪುರಿ ಜಗದ್ಗುರುಗಳ ದಸರಾ ದರ್ಬಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾನುವಾರ ಆಗಮಿಸಿದಾಗ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರದಿಂದ ರೈತರ ಬೆಳೆಗಳು ನಷ್ಟಕ್ಕೀಡಾಗಿವೆ. ರೈತರಿಗೆ ಪರಿಹಾರ ನೀಡುತ್ತಿಲ್ಲ. ಬರಗಾಲದಂತಹ ಭೀಕರ ಸ್ಥಿತಿಯಲ್ಲಿ ಜನರ ನೆರವಿಗೆ ದಾವಿಸಬೇಕಿರುವ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರಿಸುತ್ತಿದೆ ಎಂದು ಆರೋಪಿಸಿದರು. ಗ್ಯಾರಂಟಿ ಯೋಜನೆಗಳ ಜಾರಿ ಮಾಡುತ್ತೇವೆಂದು ರಾಜ್ಯದ ಖಜಾನೆ ಖಾಲಿಯಾಗಿದೆ. ಪರಿಣಾಮ ರಸ್ತೆ, ನೀರಾವರಿ, ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲದಂತಾಗಿದೆ. ಸರ್ಕಾರ ದಿವಾಳಿಯಾಗಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ರಾಜ್ಯ ಸರ್ಕಾರ ಬರಗಾಲದ ಸ್ಥಿತಿಯಲ್ಲೂ ಜನರ ಬದುಕು ಸುಧಾರಿಸಲು ಯಾವುದೇ ಕಾರ್ಯಕ್ರಮ ಕೈಗೊಂಡಿಲ್ಲ ಎಂದು ಛೇಡಿಸಿದರು. ಗುತ್ತಿಗೆದಾರರಿಗೆ ಕಾಮಗಾರಿ ಮಾಡಿದ ಹಣ ಪಾವತಿ ಮಾಡಿಲ್ಲ. ಇದರಿಂದ ಸರ್ಕಾರದ ಕೆಲಸಗಳು ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಅಲ್ಲದೇ ಹಣ ನೀಡದಿದ್ದರೆ ಕೆಲಸ ನಿಲ್ಲಿಸುವುದಾಗಿ ಹೇಳುತ್ತಿದ್ದಾರೆ. ಆದರೂ ಸರ್ಕಾರ ಮೌನ ವಹಿಸಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಗುತ್ತಿಗೆದಾರರು, ಕಲಾವಿದರೂ ಸೇರಿದಂತೆ ಒಂದೊಂದೇ ಹಗರಗಣಗಳು ಹೊರ ಬರುತ್ತಿವೆ. ಎಂಬುದಕ್ಕೆ ಕಲಾವಿದರಿಂದ ಕಮಿಷನ್ ಪಡೆಯಲು ಮುಂದಾಗಿರುವುದು ರಾಜ್ಯ ಆಡಳಿತದ ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಇಂತಹ ಗಂಭೀರ ಹಗರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ತುಟಿಬಿಚ್ಚದಿರುವುದು ದುರ್ದೈವದ ಸಂಗತಿಯಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ವಿದ್ಯುತ್ ಕಣ್ಣು ಮುಚ್ಚಾಲೆ ನಡೆದಿದೆ. ರಾಜ್ಯ ಸರ್ಕಾರ ಜನರ ಹಿತ ಮರೆತಿದೆ. ಬೇರೆ ಕಡೆಯಿಂದ ವಿದ್ಯುತ್ ಖರೀದಿಸಿ ಸಮಸ್ಯೆ ಸರಿದೂಗಿಸಬೇಕು. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಮ್ಮ ಅವಧಿಯಲ್ಲಿ ಹೆಚ್ಚುವರಿ ವಿದ್ಯುತ್ ಖರೀದಿಸಿ ಲೋಡ್ಶೆಡ್ಡಿಂಗ್ ಆಗದಂತೆ ಜನರಿಗೆ ವಿದ್ಯುತ್ ಪೂರೈಕೆ ಮಾಡಿದ್ದೇವೆ. ಕೂಡಲೇ ಸರ್ಕಾರ ವಿದ್ಯುತ್ ಸೇರಿದಂತೆ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸಬೇಕೆಂದು ಆಗ್ರಹಿಸಿದರು. ಐಟಿ ದಾಳಿ ವೇಳೆ ದೊರೆತ ಕೋಟ್ಯಂತರ ಹಣವು ಚುನಾವಣೆಗಾಗಿ ತೆಗೆದಿಟ್ಟ ಅಕ್ರಮ ಹಣ ಎಂಬ ದಟ್ಟ ಆರೋಪಗಳು ಇವೆ. ಈ ಹಣದ ಕುರಿತು ಸಮಗ್ರ ತನಿಖೆಯಾಗಬೇಕು. ಚುನಾವಣೆಗಾಗಿ 1000 ಕೋಟಿ ಹಣ ಸಂಗ್ರಹದ ಕುರಿತು ಕೇಂದ್ರ ಸಚಿವ ಜೋಷಿಯವರ ಹೇಳಿಕೆ ರಾಜ್ಯ ಸರ್ಕಾರ ಹಣ ಸಂಗ್ರಹದ ಕುರಿತು ಹೇಳಿದ್ದು ಸರಿಯಾಗಿದೆ ಎಂದು ತಿಳಿಸಿದರು. ಜಾತಿ ಗಣತಿ ವರದಿ ಬಿಡುಗಡೆಗೆ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿ ನಮ್ಮದೇನು ತಕರಾರು ಇಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಸಂಚರಿಸಿ ಪ್ರಚಾರ ಮಾಡುವೆ. 25ಕ್ಕೂ ಅಧಿಕ ಸ್ಥಾನಗಳ ಗೆಲ್ಲುವ ಗುರಿ ಇದೆ. ಶೀಘ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗುತ್ತದೆ ಎಂದರು.