ಪಂಚಾಯಿತಿ ಚುನಾವಣೆ ನಡೆಸುವಲ್ಲಿ ಸರ್ಕಾರದ ಅಸಡ್ಡೆ: ಸಾಣೂರು ನರಸಿಂಹ ಕಾಮತ್

| Published : Nov 17 2025, 02:00 AM IST

ಪಂಚಾಯಿತಿ ಚುನಾವಣೆ ನಡೆಸುವಲ್ಲಿ ಸರ್ಕಾರದ ಅಸಡ್ಡೆ: ಸಾಣೂರು ನರಸಿಂಹ ಕಾಮತ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳು ಐದು ವರ್ಷಗಳಿಂದ ಚುನಾವಣೆಯಿಲ್ಲದೆ ಸ್ತಬ್ಧವಾಗಿರುವುದಲ್ಲದೇ, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯೂ ಅನಿಶ್ಚಿತತೆಯಲ್ಲಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಆಡಳಿತ ಮಂಡಳಿ ಸದಸ್ಯ ಹಾಗೂ ಸಾಣೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳು ಐದು ವರ್ಷಗಳಿಂದ ಚುನಾವಣೆಯಿಲ್ಲದೆ ಸ್ತಬ್ಧವಾಗಿರುವುದಲ್ಲದೇ, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯೂ ಅನಿಶ್ಚಿತತೆಯಲ್ಲಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಆಡಳಿತ ಮಂಡಳಿ ಸದಸ್ಯ ಹಾಗೂ ಸಾಣೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸರ್ಕಾರ ಪಂಚಾಯತ್‌ ರಾಜ್ ವ್ಯವಸ್ಥೆಯನ್ನು ಜನಪ್ರತಿನಿಧಿಗಳ ಬದಲಿಗೆ ಅಧಿಕಾರಿಗಳ ಮೂಲಕ ನಡೆಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದರು.ರಾಜ್ಯ ಸರ್ಕಾರವು ವಾರ್ಡ್‌ವಾರು ಸದಸ್ಯರ ಸಂಖ್ಯೆ ಹಾಗೂ ಮೀಸಲು ನಿಗದಿ ಮಾಡದೆ ಇದ್ದ ಕಾರಣದಿಂದಲೇ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿರುವುದು ಸರ್ಕಾರದ ಬೇಜವಾಬ್ದಾರಿತನದ ಉದಾಹರಣೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಕಾಲದಲ್ಲಿ ನಡೆಸುವುದು ಸಂವಿಧಾನ ಭಾದ್ಯತೆ ಎಂದು ಸುಪ್ರೀಂ ಕೋರ್ಟ್ ಕೂಡ ಎಚ್ಚರಿಸಿದ್ದರೂ, ಸರ್ಕಾರದ ಇಚ್ಛಾಶಕ್ತಿಯ ಕೊರತೆಯಿಂದ ಪ್ರಜಾಪ್ರಭುತ್ವದ ಬೇರುಗಳು ದುರ್ಬಲವಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಲಕ್ಷಾಂತರ ಸ್ಥಳೀಯ ನಾಯಕರಿಂದ ಬೃಹತ್ ಪ್ರತಿಭಟನೆಗೆ ತಯಾರಾಗಿರಿ, ಪಕ್ಷಭೇದ ಮರೆತು ಬೀದಿಗಿಳಿಯುವ ಪರಿಸ್ಥಿತಿ ಉಂಟಾಗಲಿದೆ ಎಂದು ಕಾಮತ್ ಎಚ್ಚರಿಸಿದರು.