ಸಾರಾಂಶ
ಹಾರೂಗೇರಿ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮರಣ ಹೊಂದಿದ್ದಾರೆ.
ರಾಯಬಾಗ: ತಾಲೂಕಿನ ನಿಡಗುಂದಿ ಗ್ರಾಮ ಪಂಚಾಯಿತಿ ಸದಸ್ಯ ಶಿವಾನಂದ ಮಗದುಮ್ಮ (40) ಅಪಘಾತದಲ್ಲಿ ಅಸುನೀಗಿದ್ದಾರೆ.
ಶುಕ್ರವಾರ ರಾತ್ರಿ ಸುಮಾರು 7 ಗಂಟೆಗೆ ಸುಮಾರಿಗೆ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಸ್ವಗ್ರಾಮ ನಾಗರಾಳಕ್ಕೆ ಸ್ಕೂಟಿ ಮೇಲೆ ತೆರಳುವಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅವರನ್ನು ಹಾರೂಗೇರಿ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮರಣ ಹೊಂದಿದ್ದಾರೆ.