ಉಡುಪಿ ಜಿಲ್ಲೆಯಲ್ಲಿ ವಿಕಲಚೇತನರಿಂದ ಹಸಿರು ಕ್ರಾಂತಿ

| Published : Jul 06 2024, 12:52 AM IST

ಸಾರಾಂಶ

ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಚಾಲನೆ ನೀಡಿದರು.

ನಗರದ ಆದಿ ಉಡುಪಿ ಬಳಿಯಿರುವ ವಲಯ ಅರಣ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೀಸ್ ಫೌಂಡೇಶನ್ ಈ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಇಂತಹ ಕಾರ್ಯಕ್ರಮಗಳು ಎಲ್ಲರಿಗೂ ಸ್ಫೂರ್ತಿ ತರಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅತಿಥಿಯಾಗಿ ಹಿರಿಯ ವಕೀಲ ಜಯಪ್ರಕಾಶ್ ಕೆದ್ಲಾಯ ಮಾತನಾಡಿ, ಹಸಿರೇ ನಮ್ಮ ಉಸಿರು, ಇವತ್ತು ಹಸಿರು ಕ್ರಾಂತಿ ಇಡೀ ದೇಶದಲ್ಲೇ ಆಗಬೇಕಾಗಿದೆ. ವೀಕಲಚೇತನರೆಲ್ಲರೂ ಒಗ್ಗೂಡಿ ಸಾವಿರ ಗಿಡಗಳನ್ನು‌ ನೆಡುವ ಮೂಲಕ ಹಸಿರು ಕ್ರಾಂತಿಗೆ ಮುಂದಾಗಿರುವುದು ಸಂತಸದ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಯೋಜನಾ‌ ಸಹಾಯಕ ಶಿವಾಜಿ, ಪೀಸ್ ಫೌಂಡೇಶನ್ ಸಂಸ್ಥೆಯ ಜಗದೀಶ್ ಭಟ್, ಉದ್ಯಮಿಗಳಾದ ಸ್ಟಾನ್ಲಿ, ಪತ್ರಕರ್ತರಾದ ಜನಾರ್ದನ್ ಕೊಡವೂರು, ಶಿಜಿತ್, ಕಲಾವಿದ ಸಂದೇಶ್, ಯುವ ಉದ್ಯಮಿ ಕೆ.ಸಂದೀಪ್ ಉಪಸ್ಥಿತರಿದ್ದರು. ಅರಣ್ಯ ಇಲಾಖಾ ಸಿಬ್ಬಂದಿ ಕೇಶವ ಪೂಜಾರಿ ಕಾರ್ಯಕ್ರಮ‌ ನಿರ್ವಹಿಸಿದರು.

ಬಳಿಕ‌ ಆದಿ‌ ಉಡುಪಿ ಶಾಲಾ ವಠಾರದಲ್ಲಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.