₹೮.೯ಕೋಟಿ ವೆಚ್ಚದ ಕೋಲ್ಡ್‌ ಸ್ಟೋರೇಜ್‌ಗೆ ಭೂಪೂಜೆ

| Published : Jun 18 2025, 11:49 PM IST

ಸಾರಾಂಶ

ಗುಂಡ್ಲುಪೇಟೆ ಎಪಿಎಂಸಿ ಪ್ರಾಂಗಣದಲ್ಲಿ ಕೋಲ್ಡ್‌ ಸ್ಟೋರೇಜ್‌ಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಪಟ್ಟಣದ ಬಳಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ₹೮.೯ ಕೋಟಿ ವೆಚ್ಚದ ಶೀತಲ ಸಂಗ್ರಹಾಗಾರ (ಕೋಲ್ಡ್‌ ಸ್ಟೋರೇಜ್) ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿಸಿದರು.ಗುದ್ದಲಿ ಪೂಜೆ ಬಳಿಕ ಮಾತನಾಡಿದ ಶಾಸಕರು, ಆರ್‌ಐಡಿಎಫ್‌ ೩೦ರ ಯೋಜನೆಯಡಿ ₹೮.೯ ಕೋಟಿ ಅನುದಾನದಲ್ಲಿ ೨೨೦೦ ಮೆಟ್ರಿಕ್‌ ಟನ್‌ ಸಾಮರ್ಥ್ಯದ ಶೀಥಲ ಸಂಗ್ರಹಾಗಾರ (ಕೋಲ್ಡ್‌ ಸ್ಟೋರೇಜ್)‌ ನಿರ್ಮಾಣವಾಗಲಿದೆ ಎಂದರು. ರಾಜ್ಯ ಸರ್ಕಾರ ರಾಜ್ಯದಲ್ಲಿ ೯ ಶೀತಲ ಸಂಗ್ರಹಾಗಾರ (ಕೋಲ್ಡ್‌ ಸ್ಟೋರೇಜ್‌) ಮಂಜೂರು ಮಾಡಿದ್ದು,೯ರಲ್ಲಿ ದಕ್ಷಿಣ ರಾಜ್ಯದಲ್ಲಿ ಗುಂಡ್ಲುಪೇಟೆ ಎಪಿಎಂಸಿಯೂ ಸೇರಿದೆ. ಕೃಷಿ ಮಾರಾಟ ಸಚಿವ ಶಿವಾನಂದ ಎಸ್‌ ಪಾಟೀಲ್‌ರು ನಾನು ಮಾಡಿದ ಮನವಿಗೆ ಸ್ಪಂದಿಸಿದ್ದಕ್ಕೆ ಮೊದಲು ಅವರಿಗೆ ಧನ್ಯವಾದ ಎಂದರು.

ಶೀತಲ ಸಂಗ್ರಹಾಗಾರ (ಕೋಲ್ಡ್‌ ಸ್ಟೋರೇಜ್) ಕಾಮಗಾರಿಯು ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಎಪಿಎಂಸಿ ಆವರಣದಲ್ಲಿ ರಸ್ತೆಗಳು ಹಾಳಾಗಿವೆ. ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುದಾನ ಬಂದ ತಕ್ಷಣ ರಸ್ತೆಗಳ ಕಾಮಗಾರಿ ಆರಂಭಿಸುವ ಭರವಸೆಯನ್ನು ಶಾಸಕರು ನೀಡಿದರು.

ಡಿಸಿಎಂಗೆ ಧನ್ಯವಾದ:ಕೋಲ್ಡ್‌ ಸ್ಟೋರೇಜ್‌ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಧನ್ಯವಾದ ಸಲ್ಲಿಸಿದರು.

ಈ ಸಮಯದಲ್ಲಿ ಎಪಿಎಂಸಿ ಅಧ್ಯಕ್ಷ ಆರ್.ಎಸ್.ನಾಗರಾಜು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್‌, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಿ.ಎಂ.ಮುನಿರಾಜು, ಪಿ.ಬಿ.ರಾಜಶೇಖರ್‌, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.‌ಮಹೇಶ, ಹಾಪ್‌ಕಾಮ್ಸ್‌ ಅಧ್ಯಕ್ಷ ಎಂ.ನಾಗೇಶ್‌, ಎಪಿಎಂಸಿ ಉಪಾಧ್ಯಕ್ಷ ರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಮೊಳ್ಳಯ್ಯನಹುಂಡಿ ಬಸವರಾಜು, ಎಚ್.ಆರ್.ಕುಮಾರ್, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ನಟೇಶ್‌, ಸೋಮಹಳ್ಳಿ ಮಧು, ಎಚ್.ಎನ್.ಬಸವರಾಜು, ಎಪಿಎಂಸಿ ಸದಸ್ಯರಾದ ಪಿ.ಮಹದೇವಪ್ಪ, ಹೊಂಗಹಳ್ಳಿ ನಾಗರಾಜು, ವಿರೂಪಾಕ್ಷ, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಜಿ.ಮಡಿವಾಳಪ್ಪ,ಕೋಟೆಕೆರೆ ಫ್ಯಾಕ್‌ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ,ಪುರಸಭೆ ಅಧ್ಯಕ್ಷ ಮಧು,ಕಾಂಗ್ರೆಸ್‌ ಮುಖಂಡರಾದ ಬಿ.ಎಸ್.ಪಂಚಾಕ್ಷರಿ,ದೇವರಹಳ್ಳಿ ಪ್ರಭು, ನೀಲಕಂಠಪ್ಪ ಹೊರೆಯಾಲ, ಕಿಲಗೆರೆ ಪ್ರಸಾದ್‌, ಕೆ.ಎಂ.ಮಾದಪ್ಪ, ಜಿ.ಕೆ.ಲೋಕೇಶ್, ಎಪಿಎಂಸಿ ಕಾರ್ಯದರ್ಶಿ ಎಸ್.ಶ್ರೀಧರ್ ಸೇರಿದಂತೆ ಎಪಿಎಂಸಿ ಸದಸ್ಯರು ಹಾಗು ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.‌