ಸಾರಾಂಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿಯನ್ನು ಹಸ್ತಾಂತರ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿಯನ್ನು ಹಸ್ತಾಂತರ ಮಾಡಲಾಯಿತು.ಮಡಿಕೇರಿ ತಾಲೂಕು ಚೆಂಬು ಗ್ರಾಮದ ಉಂಬಳೆ ಭಾಸ್ಕರ ಮತ್ತು ಜಯಂತಿ ದಂಪತಿಗಳ ಮನೆಯು ಇತ್ತೀಚೆಗೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ.) ಟ್ರಸ್ಟ್ ವತಿಯಿಂದ ಪರಿಹಾರ ಧನವಾಗಿ ದೊರಕಿದ 25,000 ರು. ಹಸ್ತಾಂತರವನ್ನು ಯೋಜನಾಧಿಕಾರಿಗಳಾದ ಪುರುಷೋತ್ತಮ ನಿರ್ವಹಿಸಿದರು.
ಈ ಸಂದರ್ಭ ವಲಯ ಮೇಲ್ವಿಚಾರಕರಾದ ಸಂತೋಷ್, ಸೇವಾ ಪ್ರತಿನಿಧಿ ಚಿದಾನಂದ, ಎಂ.ಚೆಂಬು ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿ ವಿಜಯಕುಮಾರ್, ಎಂ.ಟಿ.ರಾಮಮೂರ್ತಿ ಅವರು ಉಪಸ್ಥಿತರಿದ್ದರು.