• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
16000 ಪುಟ ಆರ್‌ಟಿಐ ದಾಖಲೆ ಒಯ್ಯಲು ಎತ್ತಿನಗಾಡಿ ತಂದ!
ಕೆಪಿಎಸ್‌ ಶಾಲೆಗಳನ್ನು ಮುಚ್ಚುವ ಹುನ್ನಾರ ಖಂಡಿಸಿ ಪ್ರತಿಭಟನೆ
ಪ್ಲಾಸ್ಟಿಕ್ ನಿಷೇಧ ಉಲ್ಲಂಘಿಸಿ ಟೇಸ್ಟಿಂಗ್ ಪೌಡರ್ ಬಳಕೆ
ಹಳೇಬೀಡಿನ ಪುಷ್ಪಗಿರಿಯಲ್ಲಿ ಲಕ್ಷದೀಪೋತ್ಸವ
ಗುಂಡಿ ಮುಚ್ಚಲು ಕೂಡ ಅನುದಾನ ಇಲ್ಲದ ಸರ್ಕಾರ
ಶಿಕ್ಷಣದಲ್ಲಿ ಕ್ರಾಂತಿ ಮಾಡಿದ ಜಿಲ್ಲೆ ಹಾಸನ
ವ್ಯವಹಾರಿಕ ಭಾಷೆ ಬೇರೆಯಾದರೂ ಮಾತೃಭಾಷೆಯನ್ನು ಮರೆಯಬೇಡಿಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವೇಗ ಸಿಗಲಿಪ್ರಾಥಮಿಕ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಗೆ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆಡಿಜಿಟಲೀಕರಣದಿಂದ ಕನ್ನಡದ ಸ್ಪಷ್ಟ ಓದು ಬರಹ ಕುಗ್ಗುತ್ತಿದೆ

ಇನ್ನಷ್ಟು ಸುದ್ದಿ

ಆತ್ಮವಿಶ್ವಾಸದಿಂದ ನಿಮ್ಮ ಕಲೆ ಪ್ರದರ್ಶಿಸಿ
ಶಿಕ್ಷಣ ಸಂಯೋಜಕ ಮಲ್ಲೇಶ್ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ವಿವಿಧ ಸ್ಪರ್ಧೆಗಳ ಮಹತ್ವವನ್ನು ವಿವರಿಸಿದರು. ಧಾರ್ಮಿಕ ಪಠಣ ನೈತಿಕತೆಯನ್ನು ಬೆಳೆಸುತ್ತದೆ, ಜಾನಪದ ಗೀತೆ ಜನಜೀವನದ ಸರಳತೆಯನ್ನು ಪ್ರತಿಬಿಂಬಿಸುತ್ತದೆ, ನೃತ್ಯ ಮತ್ತು ಕಲೆಗಳು ನಮ್ಮ ಪುರಾತನ ಸಾಂಸ್ಕೃತಿಕ ಸಂಪತ್ತಾಗಿದೆ. ಚಿತ್ರಕಲೆ ರವಿವರ್ಮರನ್ನು ನೆನಪಿಸುವ ಕಲೆಯ ಮೆರವಣಿಗೆ. ಆಶುಭಾಷಣ ಸ್ಪರ್ಧೆ ವೇದಿಕೆ ಭಯವನ್ನು ನಿವಾರಿಸುತ್ತದೆ. ಪ್ರತಿಯೊಬ್ಬರೂ ತಮ್ಮ ಪ್ರತಿಭೆಯನ್ನು ಹೊರತರುವ ಅವಕಾಶ ಬಳಸಿಕೊಳ್ಳಬೇಕು ಎಂದರು.
ಆಟೋ ಚಾಲಕರು ಕನ್ನಡ ನಾಡು ನುಡಿಯ ರಕ್ಷಕರು
ರಾಜ್ಯದಲ್ಲಿನ ಪರಭಾಷಿಕರ ನಡುವೆ ಕೂಡ ಕನ್ನಡ ನಾಡು ನುಡಿಗೆ ಆಟೋ ಮಾಲಿಕರು ಮತ್ತು ಚಾಲಕರು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದ್ದು, ಭಾಷಾ ಸಂರಕ್ಷಣೆಯಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ ಎಂದು ಉದ್ಯಮಿ ಮಂಜುನಾಥ ರಾವ್ ಹೇಳಿದರು. ನಗರದ ರೈಲ್ವೆ ನಿಲ್ದಾಣ ರಸ್ತೆಯ ಶ್ರೀ ವಿಘ್ನೇಶ್ವರ ಅಟೋ ಮಾಲೀಕರು ಮತ್ತು ಚಾಲಕರ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.
ದೆಹಲಿ ಸ್ಫೋಟ ಖಂಡಿಸಿ ಅರೇಹಳ್ಳಿಯಲ್ಲಿ ಪ್ರತಿಭಟನೆ
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ಮಾತನಾಡಿ, ಭಯೋತ್ಪಾದಕ ಚಟುವಟಿಗಳನ್ನು ಬುಡಸಮೇತ ಕಿತ್ತೊಗೆಯುವುದು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರವಾಗಿದೆ. ಅವರ ನಾಯಕತ್ವದಲ್ಲಿ ಬಹಳಷ್ಟು ದೇಶದ್ರೋಹಿ ಚಟುವಟಿಕೆಗಳಿಗೆ ಕಡಿವಾಣ ಹಾಕುತಿದ್ದಾರೆ. ಅದಕ್ಕಾಗಿ ಭಾರತೀಯರಾದ ನಾವೆಲ್ಲರೂ ಸಹ ಸಹಕರಿಸುವುದು ಅಗತ್ಯವಾಗಿದೆ. ನಮ್ಮ ಅರೇಹಳ್ಳಿ ಭಾಗದಲ್ಲಿಯೂ ಇತ್ತೀಚೆಗೆ ದಿನದಿಂದ ದಿನಕ್ಕೆ ವಲಸಿಗರ ಸಂಖ್ಯೆ ಜಾಸ್ತಿಯಾಗಿ ಅಕ್ರಮ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದಾರೆಂಬ ಸಂಶಯವೂ ಮೇಲ್ನೋಟಕ್ಕೆ ಕಾಣುತ್ತಿದೆ ಎಂದರು.
ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ವಿಜ್ಞಾನ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚಿಗೆ ಶ್ರೀ ದುರ್ಗಾ ಕ್ರಿಕೆಟರ್ಸ್ ಹಾಸನ ಅವರಿಂದ ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ವಿವಿಧ ಜಿಲ್ಲೆಗಳ ಹಲವು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ಅದರಲ್ಲಿ ಹಾಸನ ನಗರದ ವಿನಾಯಕ ಜ್ಯುವೆಲ್ಲರ್ಸ್ (ಎಸ್.ವಿ.ಜೆ.) ಮಾಲೀಕರಾದ ಕೆ.ಆರ್. ಭಾಸ್ಕರ್ ಅವರ ಒಡೆಯತ್ವದ ಶ್ರೀರಾಮ್ ಕ್ರಿಕೆಟರ್ಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.
ಕಸ್ತೂರಬಾ ರಸ್ತೆಯಲ್ಲಿ ಅನಧಿಕೃತ ಹಣ್ಣಿನ ಅಂಗಡಿಗಳ ತೆರವು
ಹಲವು ದಿನಗಳಿಂದ ರಸ್ತೆ ಬದಿ ಅನಧಿಕೃತ ವ್ಯಾಪಾರಗಳಿಂದ ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಅಧಿಕೃತರಿಗೆ ಸಿಗುತ್ತಿದ್ದ ಹಿನ್ನೆಲೆ ಕ್ರಮ ಜರುಗಿಸಿದರು. ಬೆಳಗ್ಗೆ ಆರಂಭವಾದ ಕಾರ್ಯಾಚರಣೆಯ ವೇಳೆ ಪೌರಕಾರ್ಮಿಕರು, ಸೂಪರ್ವೈಸರ್‌ಗಳು, ಆರೋಗ್ಯ ನಿರೀಕ್ಷಕರು ಮತ್ತು ಪಾಲಿಕೆ ಸಿಬ್ಬಂದಿ ಒಂದಾಗಿ ತಂಡ ರಚಿಸಿ ಫುಟ್ಪಾತ್ ಹಾಗೂ ರಸ್ತೆ ಬದಿಯಲ್ಲಿ ಹಾಕಿದ್ದ ಅಂಗಡಿಗಳನ್ನು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಅನಧಿಕೃತ ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿ ಪಾಲಿಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ಘಟನೆ ಉಂಟಾಯಿತು.
ಸಹಕಾರಿ ಸಂಘಗಳು ಬಲಿಷ್ಠವಾದಲ್ಲಿ ರೈತರಿಗೆ ಸಹಕಾರಿ
ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಸಹಕಾರ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವ ಮೂಲಕ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಗಬಹುದು. ಸಹಕಾರ ಕ್ಷೇತ್ರ ಪ್ರಗತಿ ಕಂಡರೆ ದೇಶದ ಆರ್ಥಿಕಾಭಿವೃದ್ಧಿ ನಾಗಾಲೋಟದಲ್ಲಿ ಸಾಗಲಿದ್ದು, ಇದನ್ನು ಅರಿತು ಸರ್ವರೂ ಮುನ್ನಡೆ ಯಬೇಕು ಎಂದು ಹೇಳಿದರು. ಗ್ರಾಮಾಂತರ ಪ್ರದೇಶದ ಆರ್ಥಿಕ ಚಟುವಟಿಕೆಗಳು ಸಹಕಾರ ಸಂಘದ ಮೇಲೆ ಅವಲಂಬಿತವಾಗಿದ್ದು, ಇದೊಂದು ಉತ್ತಮ ಬೆಳವಣಿಗೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.
ಬಸವೇಶ್ವರ ದೇವಾಲಯದಲ್ಲಿ ವೈಭವದ ಕಾರ್ತಿಕ ಪೂಜೆ
ಹಾಸನ ನಗರದ ಅರಳೇಪೇಟೆ ರಸ್ತೆ ಬಳಿ ಇರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮವನ್ನು ಭಕ್ತಿಪೂರ್ಣವಾಗಿ ನೆರವೇರಿಸಲಾಯಿತು. ದೇವಾಲಯವನ್ನು ಹೂವಿನ ಅಲಂಕಾರ ಹಾಗೂ ವಿದ್ಯುತ್ ಅಲಂಕಾರದಲ್ಲಿ ಸಿಂಗರಿಸಲಾಗಿದ್ದು, ಶ್ರೀ ಬಸವಣ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ನಿವೃತ್ತ ಎಂಜಿನಿಯರ್ ಮಂಜುನಾಥ್, ನಾಗರಾಜ್ ಕೊಡ್ಲಪೇಟೆ, ಕೀರ್ತಿಕುಮಾರ್ ಹಾಗೂ ಮಾಸ್ಟರ್ ಕೆ.ಎಸ್. ಜಗದೀಶ್ ಮೊದಲಾದವರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.
ಪಾತಾಳೇಶ್ವರ ದೇಗುಲದಲ್ಲಿ ಕಡೆಕಾರ್ತಿಕ ವಿಶೇಷ ಪೂಜೆ
ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ವತಿಯಿಂದ ಶಿವಲಿಂಗಕ್ಕೆ ಕ್ಷೀರಾಭಿಷೇಕ, ಪಂಚಾಭಿಷೇಕ, ಪುಷ್ಪಾರ್ಚನೆ, ಬಿಲ್ಬಾರ್ಚನೆ ಸೇರಿದಂತೆ ವಿಶೇಷ ಹೂವಿನ ಅಲಂಕಾರದೊಂದಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು. ಇದೇ ಸಂದರ್ಭ ಬಂದಂತ ಭಕ್ತಾದಿಗಳಿಗೆ ಪ್ರಸಾದವಾಗಿ ಉಪ್ಪಿಟ್ಟು ಕೇಸರಿ ಬಾತ್ ಸೇರಿದಂತೆ ಪಂಚಾಮೃತ ವಿತರಿಸಿದರು. ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಪೂಜೆ ನೆರವೇರಿಸಲಾಯಿತು.
ಹೆಣ್ಣುಮಕ್ಕಳು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ
ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳಿವೆ. ಅವುಗಳನ್ನು ಬಳಕೆ ಮಾಡಿಕೊಂಡು ಹೆಣ್ಣುಮಕ್ಕಳು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ. ಮೊದಲು ನಿಮ್ಮನ್ನು ನೀವು ಗೌರವಿಸಿಕೊಂಡರೆ ಇತರರು ನಿಮ್ಮನ್ನು ಗೌರವಿಸುತ್ತಾರೆ. ಹಾಗಾಗಿ ನಿಮ್ಮ ಮೇಲೆ ನೀವು ಅಗೌರವವನ್ನು ಹೊಂದಬೇಡಿ. ನೀವು ಏನು ಎಂದು ಮತ್ತೊಬ್ಬರು ವ್ಯಾಖ್ಯಾನಿಸುವುದಕ್ಕೆ ಅವಕಾಶ ಕೊಡಬೇಡಿ. ನಿಮ್ಮ ಬಲಹೀನತೆ ಮತ್ತುನಿಮ್ಮ ಶಕ್ತಿ ಏನು ಎಂಬುದು ನಿಮಗೆ ಗೊತ್ತಿದೆ ಎನ್ನುವ ಆತ್ಮವಿಶ್ವಾಸ ನಿಮ್ಮಲ್ಲಿರಬೇಕು ಎಂದರು.
ಉದ್ಯಮಿಗಳಿಗೆ ಬ್ಯಾಂಕಿನಿಂದ ಸಿಗುವ ಸಹಕಾರಗಳ ಅರಿವಿರಬೇಕು
ಉದ್ದಿಮೆದಾರರು ಕೈಗಾರಿಕೆಗಳನ್ನು ಪ್ರಾರಂಭಿಸಲು ಕೇವಲ ಕೈಗಾರಿಕೆಗಳ ಬಗ್ಗೆ ತರಬೇತಿ ಮಾತ್ರವಲ್ಲ ವಿದ್ಯುತ್, ನೀರು, ಉದ್ಯೋಗ ಇವುಗಳ ಬಗ್ಗೆ ಸಾಕಷ್ಟು ವಿಚಾರ ತಿಳಿದುಕೊಂಡು ಬ್ಯಾಂಕಿನ ಸಹಕಾರಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯ ಎಂದು ಕಾಸಿಯಾ ಸಂಸ್ಥೆ ಅಧ್ಯಕ್ಷರಾದ ಗಣೇಶ್ ರಾವ್ ಬಿ.ಆರ್ ತಿಳಿಸಿದರು. ಕೈಗಾರಿಕೆಗಳನ್ನು ಪ್ರಾರಂಭಿಸಲು ವಿದ್ಯುತ್, ನೀರು, ಉದ್ಯೋಗ ಇವುಗಳ ಬಗ್ಗೆ ಸಾಕಷ್ಟು ವಿಚಾರ ತಿಳಿದುಕೊಂಡು ಬ್ಯಾಂಕಿನ ಸಹಕಾರದೊಂದಿಗೆ ಕೈಗಾರಿಕೆಗಳು ಅಭಿವೃದ್ಧಿಯಾಗಬೇಕೆಂದು ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 564
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved