ಕಳಸಿನ ಕೆರೆ ಏರಿ ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆಈ ರಸ್ತೆಯಲ್ಲಿ ಬೈಕ್ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ಸಾಕಷ್ಟು ನಡೆದಿವೆ. ಈ ರಸ್ತೆ ಅಭಿವೃದ್ಧಿಗೆ ಈಗಾಗಲೇ ಶಾಸಕರು ಅನುದಾನ ತಂದು ಟೆಂಡರ್ ಪ್ರಕ್ರಿಯೆ ಮುಗಿಸಿದ್ದರೂ ಅಧಿಕಾರಿಗಳ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕೆಲಸವಾಗುತ್ತಿಲ್ಲ. ತಕ್ಷಣವೇ ರಸ್ತೆ ನಿರ್ಮಿಸಲು ಅಧಿಕಾರಿಗಳು, ಗುತ್ತಿಗೆದಾರರು ಮುಂದಾಗಬೇಕು. ಇಲ್ಲದಿದ್ದಲ್ಲಿ ಸಂಘಟನೆಯಿಂದ ಲೋಕೋಪಯೋಗಿ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ .