ಬಸವೇಶ್ವರ ದೇವಾಲಯದಲ್ಲಿ ವೈಭವದ ಕಾರ್ತಿಕ ಪೂಜೆಹಾಸನ ನಗರದ ಅರಳೇಪೇಟೆ ರಸ್ತೆ ಬಳಿ ಇರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮವನ್ನು ಭಕ್ತಿಪೂರ್ಣವಾಗಿ ನೆರವೇರಿಸಲಾಯಿತು. ದೇವಾಲಯವನ್ನು ಹೂವಿನ ಅಲಂಕಾರ ಹಾಗೂ ವಿದ್ಯುತ್ ಅಲಂಕಾರದಲ್ಲಿ ಸಿಂಗರಿಸಲಾಗಿದ್ದು, ಶ್ರೀ ಬಸವಣ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ನಿವೃತ್ತ ಎಂಜಿನಿಯರ್ ಮಂಜುನಾಥ್, ನಾಗರಾಜ್ ಕೊಡ್ಲಪೇಟೆ, ಕೀರ್ತಿಕುಮಾರ್ ಹಾಗೂ ಮಾಸ್ಟರ್ ಕೆ.ಎಸ್. ಜಗದೀಶ್ ಮೊದಲಾದವರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.