ಮಕ್ಕಳನ್ನು ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹಿಸಿಸಾಂಸ್ಕೃತಿಕ ಕ್ರೀಡಾ ಸಂಭ್ರಮದಲ್ಲಿ ಮಕ್ಕಳ ಪ್ರತಿಭೆ, ಉತ್ಸಾಹ ಮತ್ತು ಕೌಶಲ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮಕ್ಕೆ ದಿಲ್ಲಿಯ ಮಾಜಿ ನಗರಸಭಾಧ್ಯಕ್ಷ ಹಾಗೂ ಹಿರಿಯ ಕ್ರೀಡಾಪಟು ಚನ್ನವೀರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿ, ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪೋಷಕರು ಮಕ್ಕಳಿಗೆ ಕೇವಲ ಶಿಕ್ಷಣವಷ್ಟೇ ಅಲ್ಲ, ಕ್ರೀಡೆಯಲ್ಲಿಯೂ ಪ್ರೋತ್ಸಾಹ ನೀಡುವುದು ಅತ್ಯಂತ ಅಗತ್ಯ. ಕ್ರೀಡೆ ಮಕ್ಕಳು ಶಿಸ್ತಿನ ಜೀವನಕ್ಕೆ, ಆರೋಗ್ಯಕರ ಬೆಳವಣಿಗೆಗೆ ಮತ್ತು ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಲಹೆ ನೀಡಿದರು. ಮಹಾರಾಜ ಪಾರ್ಕ್ನಲ್ಲಿ ಜಿಲ್ಲಾ ಅಮೆಚೂರ್ ಬಾಡಿ ಬಿಲ್ಡರ್ ಸಂಸ್ಥೆಯ ವತಿಯಿಂದ ಕರಾಟೆ, ಜೂಡೋ, ಮಲ್ಲಕಂಬ ಸೇರಿದಂತೆ ವಿವಿಧ ಕ್ರೀಡಾಕ್ಷೇತ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಕ್ಕಳಿಗಾಗಿ ಆಟೋಟ ಸ್ಪರ್ಧೆಗಳನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.