ಎಂಪಿ ಶ್ರೇಯಸ್ ಪಟೇಲ್ ಹುಟ್ಟುಹಬ್ಬದ ಅಂಗವಾಗಿ ಯುವ ಜನ ಸೇವಾ ಕಾರ್ಯಕ್ರಮಹಾಸನ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ರೋಗಿಗೆಗಳ ಆರೋಗ್ಯ ವಿಚಾರಿಸಿದರು. ಬಳಿಕ ಅಂಧಮಕ್ಕಳ ಶಾಲೆ, ವೃದ್ಧಾಶ್ರಮಗಳಲ್ಲಿ ಅನ್ನದಾನ ಬೀದಿ ಬದಿ ವಾಸಿಗಳಿಗೆ ಹಾಸಿಗೆ ಹೊದಿಕೆ ವಿತರಿಸುವ ಮೂಲಕ ಇಡೀ ದಿನವನ್ನು ಸೇವಾ ದಿನವಾಗಿ ಆಚರಿಸಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಹಾಸನ ಸಂಸದರಾದ ಶ್ರೇಯಸ್ ಪಟೇಲ್ ಅವರಿಗೆ 34ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಜನಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಶ್ರೇಯಸ್ ಪಟೇಲ್ ಅವರಿಗೆ ದೇವರು ಆಯಸ್ಸು ಆರೋಗ್ಯದ ಜೊತೆಗೆ ಇನ್ನಷ್ಟು ದೊಡ್ಡ ಹುದ್ದೆಗಳಿಸುವ ಶಕ್ತಿ ಕೊಟ್ಟು ಇನ್ನಷ್ಟು ಜನ ಸೇವೆಗೆ ಅವಕಾಶ ಮಾಡಿಕೊಡಲಿ ಎಂದು ಶುಭಹಾರೈಸಿದರು.