ಆಲದಮರಕ್ಕೆ ಸರ್ಕಾರಿ ಬಸ್ ಡಿಕ್ಕಿಅರಸೀಕೆರೆ ಬಸ್ ನಿಲ್ದಾಣದಿಂದ ಹೊರಟ ಬಸ್ ಕೇವಲ ಹತ್ತು ನಿಮಿಷಗಳ ನಂತರ ಬೋರನಕೊಪ್ಪಲು ಹತ್ತಿರ ನಿಯಂತ್ರಣ ತಪ್ಪಿ ಆಲದಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ಬಸ್ನ ಮುಂದಿನಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರಲ್ಲಿ ಕೆಲವರು ಬಸ್ ಒಳಗೇ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣವೇ ರಕ್ಷಣಾಕಾರ್ಯಕ್ಕೆ ಧಾವಿಸಿ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಎರಡು ಕಾಲುಗಳು ಮುರಿದಿರುವ ಮಾಹಿತಿ ಲಭ್ಯವಾಗಿದೆ. ಮತ್ತೊಬ್ಬ ಪ್ರಯಾಣಿಕನಿಗೂ ತೀವ್ರ ಗಾಯವಾಗಿದ್ದು, ಅವರನ್ನು ತಕ್ಷಣವೇ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಉಳಿದ ಪ್ರಯಾಣಿಕರನ್ನು ನಗರದ ಜೆ.ಸಿ. ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಗಂಭೀರ ಸ್ಥಿತಿಯಲ್ಲಿರುವ ಕೆಲವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.