• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಕರ್ಮರ ದಾರಿದೀಪದಲ್ಲಿ ನಡೆಯೋಣ
ಹಾಸನ ಮಹಾನಗರ ಪಾಲಿಕೆಗೆ ಗಿರೀಶ್‌ ಚನ್ನವೀರಪ್ಪ ಹೊಸ ಮೇಯರ್
ಪ್ರಧಾನಿ ಮೋದಿ ಹುಟ್ಟುಹಬ್ಬದಂಗವಾಗಿ ಪೆಂಡಾಲ್‌ ಗಣಪನಿಗೆ ವಿಶೇಷ ಪೂಜೆ
ಕಾಫಿ ತೋಟಗಳಲ್ಲಿ ಕಾಡಾನೆಗಳ ದಾಂಧಲೆ
ಯತ್ನಾಳ್‌ ಹೇಳಿಕೆ ಖಂಡಿಸಿ ಭೀಮ್ ಆರ್ಮಿ ಸಂಘಟನೆ ಪ್ರತಿಭಟನೆ
ಗಾಂಜಾ ಸಹಿತ ಓರ್ವನ ಬಂಧನ
ಗಣಪತಿ ಸನ್ನಿಧಾನದಲ್ಲಿ ಮುರುಳಿ ತಂಡದಿಂದ ಗಾನಸುಧೆಸಮಾಜಕ್ಕೆ ವಿಶ್ವಕರ್ಮರ ಪಾತ್ರ ಅನನ್ಯಎಪಿಜೆ ಅಬ್ದುಲ್ ಕಲಾಂರವರು ಒಂದು ದೊಡ್ಡ ಶಕ್ತಿತೇರಾಪಂಥ್‌ ಯುವಕ ಪರಿಷದ್‌ನಿಂದ ರಕ್ತದಾನ ಶಿಬಿರ

ಇನ್ನಷ್ಟು ಸುದ್ದಿ

ಬೆಳೆಗೆ ಸೂಕ್ತ ಬೆಲೆ ಇಲ್ಲದಿದ್ದರೆ ರೈತರಿಗೆ ಸಂಕಷ್ಟ
ಬೆಳೆಗಾರರ ಶ್ರಮಕ್ಕೆ ಸೂಕ್ತ ಬೆಲೆ ಸಿಗದಿದ್ದರೆ ರೈತರ ಮತ್ತು ವರ್ತಕರ ಜೀವನ ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ರಾಜ್ಯ ಹಸಿ ಶುಂಠಿ ವರ್ತಕರ ಮತ್ತು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಸಾಗರ್ ಬಾಬು ತಿಳಿಸಿದರು. ಶುಂಠಿ ಕೃಷಿಯು ಸುದೀರ್ಘ ಇತಿಹಾಸವನ್ನು ಹೊಂದಿದೆ. ಜಗತ್ತಿನಲ್ಲಿ ಬೆಳೆಯುವ ಶುಂಠಿಯ ಒಟ್ಟು ಪ್ರಮಾಣದಲ್ಲಿ ಸುಮಾರು ಶೇ. 30ರಷ್ಟು ಭಾರತದಲ್ಲಿ ಉತ್ಪಾದನೆಯಾಗುತ್ತದೆ, ಇದು ವಿಶೇಷ ಸಂಗತಿಯಾಗಿದೆ. ಶುಂಠಿ ಬೆಳೆಗಾರರು ಮತ್ತು ವರ್ತಕರಿಗೆ ವಿಶೇಷ ಸೌಲಭ್ಯಗಳು ಮತ್ತು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಅವರು ಹೇಳಿದರು.
ಗುರಿ ತಕ್ಕಂತೆ ಪೂರಕ ಶಿಕ್ಷಣ ಪಡೆದಾಗ ಸಾಧನೆ ಸಾಧ್ಯ
ಜೀವನದಲ್ಲಿ ಏನಾಗಬೇಕೆಂಬ ಗುರಿಯೊಂದಿಗೆ ಯುವಕರು ಶಿಕ್ಷಣ ಪಡೆದುಕೊಂಡರೆ ಮಾತ್ರ ಸಮಾಜದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ರೋಟರಿ ವಲಯ 9ರ ಮಾಜಿ ಸಹಾಯಕ ಗೌವರ್ನರ್ ಹಾಗೂ ವೈದ್ಯೆ ಡಾ. ಸೌಮ್ಯ ಮಣಿ ಅವರು ಸಲಹೆ ನೀಡಿದರು. ಸಮಾಜ ಸೇವಕ ಹಾಗೂ ಉದ್ಯಮಿ ವಿಜಯ್ ಕುಮಾರ್ ಮಾತನಾಡಿ, ಸಮಾಜ ನಮಗೆ ಎಲ್ಲವನ್ನೂ ಕೊಟ್ಟಿದೆ. ಆದರೆ ಅದನ್ನು ಮರಳಿ ಸಮಾಜಕ್ಕೆ ನೀಡಬೇಕೆಂಬ ಆಲೋಚನೆ ಎಲ್ಲರಲ್ಲಿ ಇರೋದಿಲ್ಲ. ಆದರೆ ಅಕ್ಷರ ಬುಕ್ ಹೌಸ್ ಪುಸ್ತಕಗಳನ್ನು ನೀಡಿ ಭವಿಷ್ಯದ ಆಧಾರಸ್ತಂಭವಾಗುವ ಮಕ್ಕಳಿಗೆ ಸಮಾಜ ಕಟ್ಟುವ ಕೆಲಸ ಮಾಡುತ್ತಿದೆ. ಇಂತಹ ಕಾರ್ಯಗಳಿಗೆ ಪ್ರತಿಯೊಬ್ಬರೂ ಕೈಜೋಡಿಸಿದರೆ ಪ್ರತಿಯೊಬ್ಬರ ಮನೆಯ ಮಕ್ಕಳು ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದರು.
ಎಚ್‌ಪಿವಿ ಲಸಿಕೆಯಿಂದ ಗರ್ಭಕೊರಳ ಕ್ಯಾನ್ಸರ್‌ ತಡೆಗಟ್ಟಬಹುದು
9 ರಿಂದ 25 ವಯೋಮಿತಿಯೊಳಗಿನ ಬಾಲಕಿಯರು, ಯುವತಿಯರು, ಮಹಿಳೆಯರು ಎಚ್‌ಪಿವಿ ಲಸಿಕೆಯನ್ನು ಪಡೆಯುವುದರಿಂದ ಗರ್ಭಕೊರಳಿನ ಕ್ಯಾನ್ಸರನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಪ್ರಸೂತಿ ಸ್ತ್ರೀರೋಗ ತಜ್ಞರ ಸಂಘದ ಅಧ್ಯಕ್ಷರಾದ ಡಾ. ಪ್ರೇಮಲತಾ ತಿಳಿಸಿದರು. ಶೇ. ೫೦ಕ್ಕೂ ಮೀರಿ ಮಹಿಳೆಯರು ಮರಣ ಹೊಂದುತ್ತಿದ್ದಾರೆ. ೩೦ ವರ್ಷ ಮೇಲ್ಪಟ್ಟ ಮದುವೆಯಾದ ಮಹಿಳೆಯರು ಕಡ್ಡಾಯವಾಗಿ ಸ್ತ್ರೀರೋಗ ತಜ್ಞರಿಂದ ತಪಾಸಣೆ ಮಾಡಿಸಿಕೊಳ್ಳಬೇಕು. ೯- ೧೪ ವಯಸ್ಸಿನ ಮಕ್ಕಳು ಲಸಿಕೆ ಪಡೆದರೆ ಶೇ. ೧೦೦ ರಷ್ಟು ಕ್ಯಾನ್ಸರ್ ರಹಿತ ಜೀವನ ಸಾಗಿಸಬಹುದು ಎಂದರು.
ಮಲಸಾವರ ಗ್ರಾಮದಲ್ಲಿ ಆನೆ ಹಾವಳಿ
ಮಲೆನಾಡು ಭಾಗದ ಅರೇಹಳ್ಳಿ ಹೋಬಳಿ ವ್ಯಾಪ್ತಿಯ ಮಲಸಾವರ ಗ್ರಾಮದಲ್ಲಿ ಕಳೆದ ರಾತ್ರಿ ಆನೆಗಳ ಹಿಂಡೊಂದು ನುಗ್ಗಿ ಓಡಾಡಿದ ಘಟನೆ ನಡೆದಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಗ್ರಾಮಾಂತರ ಪ್ರದೇಶಕ್ಕೆ ಬಂದ ಆನೆಗಳು ಹೊಲ ಜಮೀನು ಹಾಗೂ ತೋಟಗಳ ದಾರಿ ಹಿಡಿದ ಪರಿಣಾಮ ಭಯದಿಂದ ಗ್ರಾಮಸ್ಥರು ಮನೆಬಾಗಿಲು ಬೀಗ ಹಾಕಿಕೊಂಡು ನಿದ್ದೆಯಿಲ್ಲದ ರಾತ್ರಿ ಕಳೆಯಬೇಕಾಯಿತು. ಪ್ರತಿ ರಾತ್ರಿ ಆನೆಗಳ ಚಲನವಲನ ಹೆಚ್ಚುತ್ತಿದೆ. ಹೊಲದಲ್ಲಿ ಬೆಳೆದಿರುವ ಬೆಳೆಗಳು ನಾಶವಾಗುವ ಪರಿಸ್ಥಿತಿ ಬಂದಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಆನೆಗಳನ್ನು ಹಿಮ್ಮೆಟ್ಟಿಸದಿದ್ದರೆ ಗ್ರಾಮಸ್ಥರಿಗೆ ಬದುಕು ಕಷ್ಟವಾಗುತ್ತದೆ ಎಂದು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಆಯ್ಕೆ
ಅರಕಲಗೂಡು ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಲ್ಲಾಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಪಿ.ಮಲ್ಲಿಕಾರ್ಜುನ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಸಭೆಯಲ್ಲಿ ನಿರ್ದೇಶಕರಾದ ಸರಸ್ವತಿ, ಮಂಜೇಗೌಡ, ನಾಗಮ್ಮ, ಸುಮಿತ್ರಾ, ಮಮತಾ ಮುಂತಾದವರು ಹಾಜರಿದ್ದರು. ನನಗೆ ಕಡಿಮೆ ಅವಧಿಯ ಅಧ್ಯಕ್ಷ ಹುದ್ದೆ ದೊರೆತಿರಬಹುದು. ತಾಲೂಕಿನ ಶಿಕ್ಷಕರ ಸಮಸ್ಯೆ ನಿವಾರಣೆ ಮತ್ತು ಆಗಬೇಕಿರುವ ಕಾರ್ಯಗಳನ್ನು ನಿರ್ವಹಿಸಲಾಗುವುದು. ಎಲ್ಲಾ ನಿರ್ದೇಶಕರು, ಶಿಕ್ಷಕರ ಸಹಕಾರ ಪಡೆಯಲಾಗುವುದು ಎಂದು ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.
ವೈದ್ಯಕೀಯ ಅರೆ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಅವಶ್ಯವಿದೆ
ಪ್ರಸ್ತುತ ಕಾಲಘಟ್ಟದಲ್ಲಿ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಅತ್ಯಂತ ಅಗತ್ಯವಾಗಿ ಬೇಕಾಗಿದೆ. ಇಂತಹ ಸೂಕ್ತವಾದ ಸಂದರ್ಭದಲ್ಲಿ ಸ್ವಾಮೀಜಿಯವರು ತಮ್ಮ ದೂರದೃಷ್ಟಿಯಿಂದ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಆರಂಭಿಸಿರುವುದು ಶ್ಲಾಘನೀಯವಾದುದು ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದರು. ನಮ್ಮ ರಾಜ್ಯದಲ್ಲಿ ಕ್ಯಾನ್ಸರ್ ಕಾಯಿಲೆ ಬಹುಬೇಗ ಹರಡುತ್ತಿರುವ ರೋಗವಾಗಿದ್ದು, ಇದಕ್ಕೆ ನಮ್ಮ ಆಹಾರ ಪದ್ಧತಿಯೇ ಬಹುಮುಖ್ಯ ಕಾರಣವಾಗಿದೆ. ಇದು ಹೀಗೆ ಮುಂದುವರಿದರೆ ತಾಲೂಕಿಗೆ ಒಂದು ಕ್ಯಾನ್ಸರ್ ಆಸ್ಪತ್ರೆ ತೆರೆಯಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ವಿದ್ಯಾವಂತರಲ್ಲೇ ಆತ್ಮಹತ್ಯೆ ಹೆಚ್ಚಾಗುತ್ತಿದೆ
ನಮ್ಮ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ದಿನೇ ದಿನೇ ಹೆಚ್ಚುತ್ತಿದೆ ಹಾಗೂ ಅದರಲ್ಲೂ ವಿದ್ಯಾವಂತರಲ್ಲೇ ಆತ್ಮಹತ್ಯೆ ಹೆಚ್ಚಾಗುತ್ತಿದೆ. ದಡ್ಡರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ಆದಿಚುಂಚನಗಿರಿ ಕಾಲೇಜಿನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನಃಶಾಸ್ತ್ರಜ್ಞ ಪ್ರೊ. ಡಾ. ವಿಜಯಕುಮಾರ್ ತಿಳಿಸಿದರು. ಕೀಳರಿಮೆ ಮತ್ತು ನಿರುತ್ಸಾಹ, ನಕಾರಾತ್ಮಕ ಯೋಚನೆಗಳು ಮಾನಸಿಕ ಅನಾರೋಗ್ಯ ಎಂದು ಗುರುತಿಸುತ್ತಿಲ್ಲ. ಮಾನಸಿನ ಕಾಯಿಲೆಗಳಿಗೂ ಚಿಕಿತ್ಸೆ ಇದ್ದು ಚಿಕಿತ್ಸೆ ಪಡೆದುಕೊಂಡರೆ ಆತ್ಮಹತ್ಯೆಯ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಮೊಸಳೆ ಹೊಸಳ್ಳಿ ದುರಂತಕ್ಕೆ ಅಭಿನವ ಚಾರುಕೀರ್ತಿ ಭಟ್ಟಾಕರ ಸ್ವಾಮೀಜಿ ಸಂತಾಪ
ಹಾಸನದ ಮೊಸಳೆಹೊಸಳ್ಳಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಶ್ರೀಕ್ಷೇತ್ರ ಶ್ರವಣಬೆಳಗೊಳ ಶ್ರೀ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದ 9 ಜನ ಮೃತಪಟ್ಟ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ. ಇದೊಂದು ಹೃದಯ ವಿದ್ರಾವಕ ಘಟನೆ ಎಂದಿದ್ದಾರೆ.
ವಸತಿ ಯೋಜನೆ ಅವ್ಯವಹಾರದ ಕಿಂಗ್‌ಪಿನ್ ಬಂಧನ
ಪ್ರಧಾನ ಮಂತ್ರಿ ಆವಾಸ್ ವಸತಿ ಯೋಜನೆ ಅವ್ಯವಹಾರದ ಪ್ರಮುಖ ಆರೋಪಿ ರಾಜೇಶ್‌ರನ್ನು ಪೊಲೀಸರು ನಗರದ ಖಾಸಗಿ ಲಾಡ್ಜ್‌ನಲ್ಲಿ ಬಂಧಿಸಿದ್ದಾರೆ. ತಾಪಂ ಇ.ಒ ಸೇರಿದಂತೆ ಉನ್ನತ ಅಧಿಕಾರಿಗಳ ಪಾಸ್‌ವರ್ಡ್‌ಗಳನ್ನು ದುರುಪಯೋಗ ಮಾಡಿಕೊಂಡು ಸಕಲೇಶಪುರ ಸೇರಿದಂತೆ 347 ಜನರ ಖಾತೆಗೆ ತಲಾ 30 ಸಾವಿರ ರು. ಹಣ ವರ್ಗಾಯಿಸಿದ್ದ ಆರೋಪ ಈತನ ಮೇಲೆ ಇದೆ. ಜೊತೆಗೆ, ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಕುಮಾರಸ್ವಾಮಿ ಜತೆಗೂಡಿ ಫಲಾನುಭವಿಗಳನ್ನು ವಂಚಿಸಿ ಹಣ ಲಪಟಾಯಿಸಿದ್ದ ಪ್ರಕರಣವು ಸಕಲೇಶಪುರ ಠಾಣೆಯಲ್ಲಿ ದಾಖಲಾಗಿತ್ತು. ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ರಾಜೇಶ್ ಸಿಕ್ಕಿಬಿದ್ದಿದ್ದಾನೆ.
ಬಾಣಾವರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ
ಬಾಣಾವರ ಸರ್ಕಾರಿ ಆಸ್ಪತ್ರೆ, ಮಕ್ಕಳ ಮನೆ ಶಾಲೆ ಹಾಗೂ ಉಪ-ನೋಂದಣಾಧಿಕಾರಿ ಕಚೇರಿಗೆ ಸಂಪರ್ಕಿಸುವ ಮುಖ್ಯರಸ್ತೆಯಾಗಿ ಈ ರಸ್ತೆಯು ಬಳಕೆಯಾಗುತ್ತಿದ್ದು, ಪ್ರತಿದಿನ ನೂರಾರು ವಾಹನಗಳು ಹಾಗೂ ಪಾದಚಾರಿ ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ರಸ್ತೆ ಮಧ್ಯೆ ಬಿದ್ದಿದ್ದ ದೊಡ್ಡ ಗುಂಡಿ ದ್ವಿಚಕ್ರ ವಾಹನ ಸವಾರರಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು, ಇಮ್ರಾನ್ ಮತ್ತು ಅವರ ಸ್ನೇಹಿತರು ಯಾವುದೇ ಸರ್ಕಾರಿ ನೆರವಿಲ್ಲದೆ, ತಮ್ಮ ಹೊರತೊಂದರೆಯಿಂದ ಗುಂಡಿಯನ್ನು ಮುಚ್ಚಿದ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 514
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved