• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾವಿನಕೆರೆಯ ವೆಂಕಟರಮಣಸ್ವಾಮಿಗೆ ಏಕಾದಶಿ ಪೂಜೆ
ಮಾವಿನಕೆರೆ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನ, ಪಟ್ಟಣದ ಶ್ರೀ ದೇವಾಂಗ ಶ್ರೀ ರಾಮಮಂದಿರ, ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ, ದಾಸಗೌಡರ ಬೀದಿಯ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಹಾಗೂ ರಾಯರಾವುತ್ತರ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಶುಕ್ರವಾರ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಪ್ರಾಕಾರೋತ್ಸವ ನಂತರ ದೇವಾಲಯ ಪ್ರಾಂಗಣದಲ್ಲಿ ನಿರ್ಮಿಸಿರುವ ವೈಕುಂಠದ್ವಾರದ ಮೇಲೆ ಶ್ರೀಸ್ವಾಮಿ ಉತ್ಸವ ಮೂರ್ತಿಯನ್ನಿಟ್ಟು, ವಿಶೇಷವಾಗಿ ಅಲಂಕರಿಸಿ, ಮಹಾ ಮಂಗಳಾರತಿ ನೆರವೇರಿಸಿ, ಭಕ್ತರು ವೈಕುಂಠದ್ವಾರದಲ್ಲಿ ಸಾಗಲು ಅವಕಾಶ ಕಲ್ಪಿಸಲಾಯಿತು.
ವೈಕುಂಠ ದ್ವಾರ ಪ್ರವೇಶಿಸಿದ ಶಾಸಕ ಸ್ವರೂಪ್
ವೈಕುಂಠ ಏಕಾದಶಿಯ ಅಂಗವಾಗಿ ನಗರದ ಮಹಾರಾಜ ಪಾರ್ಕ್ ಬಳಿ ಇರುವ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಶುಕ್ರವಾರ ಬೆಳಗಿನಿಂದಲೇ ದೇವರಿಗೆ ವಿಶೇಷ ಪೂಜೆ-ಪುನಸ್ಕಾರ ನಡೆದು ಸಾವಿರಾರು ಭಕ್ತಾದಿಗಳು ಆಗಮಿಸಿ ಸ್ವರ್ಗದ ಬಾಗಿಲ ಒಳಗೆ ನುಸುಳಿ ಶ್ರೀ ಲಕ್ಷ್ಮೀವೆಂಕಟರಮಣನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ಇದೇ ವೇಳೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಕೂಡ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಸ್ವರ್ಗದ ಬಾಗಿಲ ಮೂಲಕ ಹಾದುಹೋದರು.
ಕಿಡಿಗೇಡಿಗಳಿಂದ ಭತ್ತದ ಮೆದೆಗೆ ಬೆಂಕಿ
ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿಯಲ್ಲಿ ಕಿಡಿಗೇಡಿಗಳು ಭತ್ತದ ಕಣಕ್ಕೆ ಬೆಂಕಿ ಹಾಕಿದ್ದು, ಸುಮಾರು ೪ ಲಕ್ಷ ರು. ಮೌಲ್ಯದ ಭತ್ತದ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ರೋಸಿ ಹೋಗಿದ್ದ ರೈತರು ತಮ್ಮ ಬೆಳೆಗಳನ್ನು ರಾತ್ರಿ ಕಾದು ತಮ್ಮ ಬೆಳೆಯನ್ನು ರಕ್ಷಿಸಿಕೊಂಡಿದ್ದರು. ಎರಡು ದಿನಗಳ ಹಿಂದಷ್ಟೇ ಭತ್ತ ಕಟಾವು ಮಾಡಿ ಒಕ್ಕಣೆ ಮಾಡಲು ಒಣವೆ ಹಾಕಿದ್ದರು. ಆದರೆ ಭತ್ತದ ಬಣವೆಗೆ ಬೆಂಕಿ ಹಾಕಿದ ಕಾರಣ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಹಿಂದೂಗಳು ಒಂದಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ
ಧರ್ಮದ ಬಗ್ಗೆ ಜಾಗೃತಿ ಅಗತ್ಯ. ಒಡಕು ಧರ್ಮದ ಅವನತಿಗೆ ಕಾರಣ ಇದನ್ನು ಇತಿಹಾಸದಲ್ಲಿ ನಾವು ಕಂಡು, ಕೇಳಿದ್ದೇವೆ. ಆದ್ದರಿಂದ ಎಂದಿಗೂ ಜಾತಿ ಆಧಾರದ ಮೇಲೆ ಹಿಂದೂಗಳನ್ನು ವಿಭಜನೆ ಮಾಡಬೇಡಿ. ಸನ್ಯಾಸಿಗಳು ಸಹ ಧರ್ಮಕ್ಕೆ ದಕ್ಕೆ ಬಂದಾಗ ಶಸ್ತ್ರ ಹಿಡಿದಿರುವುದು ಇತಿಹಾಸದಲ್ಲಿ ದಾಖಲಾಗಿದೆ. ಆದ್ದರಿಂದ ತೋರಿಕೆ ಹಿಂದೂಗಳಾಗದೆ ನಿಜವಾದ ಹಿಂದೂಗಳಾಗಿ ಧರ್ಮಕ್ಕೆ ದಕ್ಕೆ ಬಂದಾಗಲೆಲ್ಲ ತೀವ್ರವಾಗಿ ಪ್ರತಿಭಟಿಸಿ ಎಂದು ಸದಾಶಿವಶಿವಾಚಾರ್ಯ ಸ್ವಾಮೀಜಿ ಎಚ್ಚರಿಸಿದರು.
ಮಾಲೇಕಲ್‌ ತಿರುಪತಿಯಲ್ಲಿ ವೈಭವದ ವೈಕುಂಠ ಏಕಾದಶಿ
ಮಾಲೇಕಲ್ ಅಮರಗಿರಿ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ದೇವಾಲಯಕ್ಕೆ ಮುಂಜಾನೆಯಿಂದಲೇ ಆಗಮಿಸಿದ ಭಕ್ತರು, ಸರದಿ ಸಾಲಿನಲ್ಲಿ ನಿಂತು ಗಜೇಂದ್ರ ಮೋಕ್ಷ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಗೋವಿಂದರಾಜ ಸ್ವಾಮಿಯ ದರ್ಶನ ಮಾಡಿದರು. ನಂತರ ಸ್ವಾಮಿಯ ಪಾದದ ದಿಕ್ಕಿನಲ್ಲಿ ಬರುವ ವೈಕುಂಠ ದ್ವಾರದ ಮೂಲಕ ನಿರ್ಗಮಿಸಿದರೆ ಮನದ ಇಷ್ಟಾರ್ಥ ಮಾತ್ರವಲ್ಲ, ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆ ಭಕ್ತರಲ್ಲಿ ಇರುವುದರಿಂದ ವೈಕುಂಠ ದ್ವಾರದ ಮೂಲಕ ನಿರ್ಗಮಿಸಿ ಧನ್ಯತಾ ಭಾವ ಅನುಭವಿಸಿದರು.
ಆಲೂರಿನ ದೇಗುಲಗಳಲ್ಲಿ ವೈಕುಂಠ ಏಕಾದಶಿ ಪೂಜೆ
ಆಲೂರು ತಾಲೂಕಿನ ಗಂಜಿಗೆರೆ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ, ಅಡಿಬೈಲು ರಂಗನ ಬೆಟ್ಟದ ಲಕ್ಷ್ಮೀ ರಂಗನಾಥ ಸ್ವಾಮಿ, ಕುಂದೂರಿನ ಲಕ್ಷ್ಮೀನಾರಾಯಣ ಸ್ವಾಮಿ ಗಂಗರದ ಲಕ್ಷ್ಮೀನಾರಾಯಣ ಸ್ವಾಮಿ, ಕರಿಗೌಡನಹಳ್ಳಿಯ ಲಕ್ಷ್ಮೀ ಶ್ರೀನಿವಾಸ ಸ್ವಾಮಿ, ಹಳೆಪಾಳ್ಯದ ಲಕ್ಷ್ಮಿ ಜನಾರ್ಧನ ಸ್ವಾಮಿ, ಬೆಟ್ಟದಳ್ಳಿಯ ಗುಹೇಗುಡ್ಡದ ಉದ್ಧಾರ ರಂಗನಾಥಸ್ವಾಮಿ, ಮರಸು ತಿರುಮಲ ರಂಗನಾಥ ಸ್ವಾಮಿ ದೇಗುಲಗಳಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ ನಡೆಯಿತು.
ರೈತರು ಆರೋಗ್ಯ ಬಗ್ಗೆ ಹೆಚ್ಚು ಗಮನ ನೀಡಬೇಕು
ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ೩-೬ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಅಗತ್ಯವಿದ್ದು, ಈ ಶಿಬಿರದ ಪ್ರಯೋಜನವನ್ನು ಸಂಪೂರ್ಣವಾಗಿ ಬಳಸಿಕೊಳ್ಳಿ ಎಂದು ಮಹಾಲಕ್ಷ್ಮಿ ಮಂಜಪ್ಪ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉಮೇಶ್ ತಿಳಿಸಿದರು. ರೈತರು ನಿಮ್ಮ ಆರೋಗ್ಯ ಬಗ್ಗೆ ಹೆಚ್ಚು ಗಮನ ನೀಡಬೇಕು. ಸಾಮಾನ್ಯವಾಗಿ ರಕ್ತದೊತ್ತಡ, ಮಧುಮೇಹ, ಇಸಿಜಿ, ಕಣ್ಣಿನ ಪರೀಕ್ಷೆ ಸೇರಿದಂತೆ ವಿವಿಧ ತಪಾಸಣೆಗಳನ್ನು ಮಾಡಿಸಿಕೊಂಡರೆ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.
ಆರ್‌ಟಿಇ ಅನುದಾನ ನೀಡದ ಗುಮಾಸ್ತನಿಗೆ ತರಾಟೆ
ಆರ್.ಟಿ.ಇ ಅನುದಾನ ಬಿಡುಗಡೆ ಮಾಡಿ ಮತ್ತು ಆರು, ಏಳು, ಎಂಟನೇ ತರಗತಿ ಪ್ರಾರಂಭ ಮಾಡಲು ನಮಗೆ ಅನುಮತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕನಿಗೆ ೫೦ ಸಾವಿರ ಲಂಚ ನೀಡಿದ್ದರೂ ಅನುಮತಿ ಕೊಡುತ್ತಿಲ್ಲ ಎಂದು ಆರೋಪಿಸಿ ಕರ್ತವ್ಯದ ವೇಳೆ ಅಧಿಕಾರಿ ವಿರುದ್ಧ ಜೋರಾಗಿಯೇ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆದಿದೆ.
ನಗರಸಭೆ ಆಯುಕ್ತ, ಎಂಜಿನಿಯರ್‌ ಲೋಕಾಯುಕ್ತ ಬಲೆಗೆ
ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ನೀಡಿದ್ದ ಸ್ವಚ್ಛತಾ ಟೆಂಡರ್‌ ಬಿಲ್ ಪಾಸ್‌ ಮಾಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ನಗರಸಭೆ ಆಯುಕ್ತ ನರಸಿಂಹಮೂರ್ತಿ ಮತ್ತು ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್‌. ವೆಂಕಟೇಶ್ ಗುರುವಾರ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಆದರೆ ಇದೇ ವೇಳೆ ನಗರಸಭೆ ಆಯುಕ್ತರನ್ನ ಬಂಧಿಸಿ, ಎ.ಆರ್‌. ವೆಂಕಟೇಶ್ ಅವರನ್ನು ಬಿಟ್ಟು ಬಿಡಿ ಎಂದು ನಗರಸಭೆ ಸದಸ್ಯರು ಲೋಕಾಯುಕ್ತರಲ್ಲಿ ಮನವಿ ಮಾಡಿದ ವಿಲಕ್ಷಣ ಘಟನೆಯೂ ನಡೆದಿದೆ.
ಶಿಕ್ಷಣದ ಜತೆ ಗುರುಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಗುರು ಹಿರಿಯರನ್ನು ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಖ್ಯಾತ ವಿಮರ್ಶಕ ಹಾಗೂ ಸಂಸ್ಕೃತ ಚಿಂತಕ ಡಾ. ಎಚ್.ಎಸ್.ಸತ್ಯನಾರಾಯಣ ಹೇಳಿದರು. ಮಕ್ಕಳ ಮೇಲೆ ಶಿಕ್ಷಕರು ಪೋಷಕರು ಬೆದರಿಸುವ ಬದಲು ತಿಳಿಹೇಳಬೇಕು. ಶಾಲೆಗಳಲ್ಲಿ ಪಠ್ಯದ ಜೊತೆಗೆ ಸಂಸ್ಕಾರ ಬಿತ್ತುವ ಕೆಲಸವನ್ನು ಗುರುಕುಲ ಎಜುಕೇಶನ್ ಟ್ರಸ್ಟ್ ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆ ಮಾಡುತ್ತಿದೆ ಎಂದು ಶ್ಲಾಘಿಸಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved