• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಕಲಾಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ
ಶುಕ್ರವಾರ ನಾಡಪ್ರಭು ಕೆಂಪೇಗೌಡರ ಅದ್ಧೂರಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗರ ಸಂಘದ ರಘುಗೌಡ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಲ್. ಮಲ್ಲೇಶಗೌಡ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಬೆಳಗ್ಗೆ ೧೦ ಗಂಟೆಗೆ ಹೊರಡುವ ಕೆಂಪೇಗೌಡರ ಭಾವಚಿತ್ರ ಮೆರವಣಿಗೆಗೆ ಡಿಸಿ ಅವರು ಚಾಲನೆ ನೀಡಲಿದ್ದಾರೆ. ಎಲ್ಲ ಸಮುದಾಯದವರ ಜೊತೆಗೆ ಸುಮಾರು ೧೨ ವಿವಿಧ ಕಲಾ ತಂಡಗಳು ಭಾಗಿಯಾಗಲಿವೆ ಎಂದು ಹೇಳಿದರು. ಬೆಳಗ್ಗೆ ೧೧ ಗಂಟೆಗೆ ಹಾಸನಾಂಬ ಕಲಾಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು ಎಂದರು.
ರಸ್ತೆ ಮೇಲೆ ಗುಡ್ಡ ಕುಸಿತ ಹಿನ್ನೆಲೆ ಶಿರಾಡಿ ಬಂದ್
ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಾಲೂಕಿನ ಶಿರಾಡಿಘಾಟಿ ಅಸ್ತವ್ಯಸ್ತಗೊಂಡಿದ್ದು, ಹೆದ್ದಾರಿ ಅಗಲೀಕರಣದ ನೆಪದಲ್ಲಿ ಗುಡ್ಡಗಳನ್ನು ಕಡಿದಾಗಿ ಕತ್ತರಿಸಿರುವ ಪರಿಣಾಮ ಇದೀಗ ಗುಡ್ಡಗಳು ಹೆದ್ದಾರಿ ಮೇಲೆ ಕುಸಿಯುತ್ತಿವೆ. ಬುಧವಾರ ರಾತ್ರಿ ಕೂಡ ದೋಣಿಗಾಲ್‌ ಬಳಿ ರಸ್ತೆ ಮೇಲೆ ಗುಡ್ಡ ಕುಸಿದಿದ್ದರಿಂದ ನೂರಾರು ವಾಹನಗಳು ಘಾಟಿಯಲ್ಲಿ ಸಿಲುಕಿದವು. ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿರಾಟಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ವಿದ್ಯುತ್‌ ತಂತಿ ತಗುಲಿ ಕಾರ್ಮಿಕ ಗಂಭೀರ
ವಿದ್ಯುತ್ ಲೈನ್ ಸ್ಪರ್ಶಿಸಿ ಸೆಂಟ್ರಿಂಗ್ ಕೆಲಸಗಾರ ಭರತವಳ್ಳಿ ಗ್ರಾಮದ ನಾಸಿರ್ ಪಾಷ (ಲಾಲು) ಎಂಬುವವರು ಭಾಗಶಃ ಸುಟ್ಟಿರುವ ಘಟನೆ ಬೈರಾಪುರ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ನಾಸಿರ್ ಪಾಷ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಟ್ಟಡದ ಮೊದಲನೇ ಹಂತದ ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ಕಟ್ಟಡಕ್ಕೆ ಅತೀ ಸಮೀಪದಲ್ಲಿರುವ ವಿದ್ಯುತ್ ತಂತಿ ತಗುಲಿ ದೇಹ ಅರ್ಧ ಭಾಗ ಸುಟ್ಟು ಹೋಗಿದೆ.
ಭೂ ಹೋರಾಟಗಾರರ ಬಿಡುಗಡೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ದೇವನಹಳ್ಳಿಯಲ್ಲಿ ಬಲವಂತದ ಭೂಸ್ವಾಧೀನ ವಿರೋಧಿಸಿದ ಹೋರಾಟಗಾರರನ್ನು ಬಂಧಿಸಿದ ಪೊಲೀಸರ ದೌರ್ಜನ್ಯ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಹಾಗೂ ಕಾರ್ಪೋರೇಟ್ ಬಂಡವಾಳಶಾಹಿಗಳ ಪರವಾದ ನೀತಿಯನ್ನು ಖಂಡಿಸಿ ಹಾಗೂ ತಕ್ಷಣ ಭೂ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ನಗರದ ಮಹಾವೀರ ವೃತ್ತದಲ್ಲಿ ಸಿಐಟಿಯು ನೇತೃತ್ವದಲ್ಲಿ ಗುರುವಾರ ಪ್ರತಿಭಟಿಸಿ ಸಭೆ ನಡೆಸಿದರು. ಸರ್ಕಾರ ಅವರ ಇಷ್ಟು ದಿನಗಳ ಹೋರಾಟಕ್ಕೆ ಒತ್ತಾಯಕ್ಕೆ ಕಿವಿಕೊಡದೇ ಭೂ ಸ್ವಾಧೀನ ಪ್ರಕ್ರಿಯೆಯ ಅಂತಿಮ ಘಟ್ಟಕ್ಕೆ ಕೈ ಹಾಕಿದ ಹಿನ್ನೆಲೆಯಲ್ಲಿ ಜೂನ್ ೨೫ರಂದು ಈ ಹೋರಾಟ ಬೆಂಬಲಿಸಿ ರಾಜ್ಯದ ಮೂಲೆ ಮೂಲೆಗಳಿಂದ ರೈತ, ಕಾರ್ಮಿಕ, ದಲಿತ, ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಎಂದರು.
ಶ್ರವಣಬೆಳಗೊಳಕ್ಕೆ ಮುನಿಗಳ ತಂಡ ಆಗಮನ
ಶ್ರವಣಬೆಳಗೊಳ ಕ್ಷೇತ್ರಕ್ಕೆ ಆಗಮಿಸಿದ ಆಚಾರ್ಯಶ್ರೀ 108 ವರ್ಧಮಾನ ಸಾಗರ ಮಹಾರಾಜರು ಮತ್ತು ಮುನಿಶ್ರೀ 108 ವಿದ್ಯಾಸಾಗರ ಮಹಾರಾಜರು ಹಾಗೂ ಸಂಘಸ್ಥ ತ್ಯಾಗಿ ವೃಂದದವರನ್ನು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಗುರುವಾರ ಮೆರವಣಿಗೆ ಮೂಲಕ ಭಕ್ತಿಪೂರ್ವಕವಾಗಿ ಸ್ವಾಗತಿಸಲಾಯಿತು. ಪೂರ್ಣಕುಂಭ, ಮಂಗಳ ಕಲಶ, ನಾದಸ್ವರ, ಚಂಡೆವಾದ್ಯ, ನಗಾರಿ, ಚಿಟ್ಟಿಮೇಳ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಧರ್ಮಧ್ವಜ ಹಿಡಿದ ನೂರಾರು ಶ್ರಾವಕ-ಶ್ರಾವಕಿಯರು ಚಂದ್ರಗಿರಿ ಹಾಗೂ ವಿಂಧ್ಯಗಿರಿ ಮಹಾದ್ವಾರದ ಮೂಲಕ ಶ್ರೀಮಠದ ವರೆಗೆ ಜೈಕಾರದೊಂದಿಗೆ ಮೆರವಣಿಗೆ ನಡೆಸಿದರು.
ಅರಣ್ಯ ಇಲಾಖೆ ಬೇಜವಾಬ್ದಾರಿತನಕ್ಕೆ ರೋಟರಿ ಅಸಮಾಧಾನ
ರೋಟರಿ ಕ್ಲಬ್ ಬಳಿ ಇರುವ ಸರ್ಕಾರಿ ಶಾಲೆಯ ಪಕ್ಕದ ಕಾಂಪೌಡ್ ಬಳಿ ಇದ್ದ ಹಳೆಯ ಮರದ ಕೊಂಬೆಗಳನ್ನು ಅರಣ್ಯ ಇಲಾಖೆ ಕತ್ತರಿಸಿ ಹಾಗೇ ಬಿಟ್ಟಿದ್ದು ಮಳೆಯಿಂದ ಕೊಳೆತು ನಾರುತ್ತಿದ್ದು ಸಾಂಕ್ರಾಮಿಕ ರೋಗ ಹಬ್ಬಲು ಕಾರಣವಾಗಿದೆ ಎಂದು ರೋಟರಿ ಸಂಸ್ಥೆಯವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ‌. ಈ ರಸ್ತೆಗಳಲ್ಲಿ ಸಾವು-ನೋವು ಸಂಭವಿಸುವ ಮೊದಲು ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಭೆ ಅನುಮೋದನೆ ನೀಡಿದೆಯೆಂದು ಅಧಿಕಾರಿಗಳಿಂದಲೇ ಷರಾ
ಸಾಮಾನ್ಯ ಸಭೆಯಲ್ಲಿ ಅನುಮೋದನೆ ದೊರೆಯದ ಕೆಲಸಗಳಿಗೂ ಪುರಸಭೆ ಅಧಿಕಾರಿಗಳು ಸರ್ವ ಸಭೆ ಒಪ್ಪಿಗೆ ದೊರೆತಿದೆ ಎಂಬ ಷರ ಬರೆದಿದ್ದಾರೆಂದು ಪುರಸಭೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದ ಕಾಮಗಾರಿ ಹಾಗೂ ನಿವೇಶನ ಅಭಿವೃದ್ಧಿಗಳಿಗೆಲ್ಲ ಅಧಿಕಾರಿಗಳು ಸಭೆಯ ಒಪ್ಪಿಗೆ ದೊರೆತಿದೆ ಎಂಬ ಷರಾ ಬರೆದಿರುವುದು ಅಕ್ಷಮ್ಯ. ಈ ನಡವಳಿಗಳನ್ನೆಲ್ಲ ಮತ್ತೊಮ್ಮೆ ಪರಿಶೀಲಿಸಿ ಷರಾ ಬರೆಯಬೇಕು ಎಂದು ಆಗ್ರಹಿಸಿದರು.
ಸಾಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ
ರೌಡಿ ಶೀಟರ್‌ಗಳು ಯಾವುದೇ ಕಾರಣಕ್ಕೂ ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡಬಾರದು. ತಪ್ಪು ಮಾಡಿದ್ದು ಕಂಡುಬಂದರೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಆರ್‌. ಎಂ. ಮೋಹನ್ ಎಚ್ಚರಿಕೆ ನೀಡಿದರು. ಆಲೂರು ತಾಲೂಕಿನಲ್ಲಿ 78 ಜನ ರೌಡಿ ಶೀಟರ್‌ಗಳಿದ್ದಾರೆ. ಪಟ್ಟಿಯಲ್ಲಿ ಕೆಲವು ವಯಸ್ಸಾದವರಿದ್ದಾರೆ. ಅಂತಹವರನ್ನು ಗುರುತಿಸಿ ಮಾನವೀಯತೆ ಆಧಾರದಲ್ಲಿ ರೌಡಿ ಪಟ್ಟಿಯಿಂದ ಕೈ ಬಿಡಲು ಶಿಫಾರಸು ಮಾಡಲಾಗುವುದು ಎಂದರು.
ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ
ಸರ್ಕಾರ ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ತಿಳಿಸಿದ್ದಾರೆ. ಅರಕಲಗೂಡು ತಾಲೂಕಿನಲ್ಲಿ ಶೇ. ೯೯ರಷ್ಟು ಗುರಿ ಸಾಧಿಸಿರುವುದಕ್ಕೆ ಅಧಿಕಾರಿಗಳಿಗೆ ಮತ್ತು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಿಗೆ ಅಭಿನಂದನೆಯನ್ನು ತಿಳಿಸಿದರು.
ಆಗಾಗ ಕುಸಿಯುವ ಶಿರಾಡಿ ಹೆದ್ದಾರಿಗೆ ಡಿಸಿ ಭೇಟಿ
ಮಳೆಗಾಲದಲ್ಲಿ ಭೂಕುಸಿತ ಸಂಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿರುವುದರಿಂದ ಹೆದ್ದಾರಿಯ ಸಾಕಷ್ಟು ಭಾಗದಲ್ಲಿ ಭೂಕುಸಿತ ಸಂಭವಿಸುತ್ತಿದೆ. ಸದ್ಯ ಮಳೆಯಾಗುತ್ತಿರುವುದರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದರೆ, ಸಂಭಾವ್ಯ ಅವಘಡ ಸಂಭವಿಸಬಹುದಾದ ಸ್ಥಳಗಳಲ್ಲಿ ಅಧಿಕಾರಿಗಳ ಪಡೆ ಸರ್ವ ಸನ್ನದ್ಧವಾಗಿರುವಂತೆ ಸೂಚನೆ ನೀಡಲಾಗಿದೆ ಎಂದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 550
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved