• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಲೆಕಲ್ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ
ಜು. 7ರಂದು ಸೋಮವಾರ ಮಧ್ಯಾಹ್ನ ರಥೋತ್ಸವ ಜರುಗಲಿವೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾಗರಾಜ್‌ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು. ಆಶಾಢ ಮಾಸದಲ್ಲಿ ಸ್ವಾಮಿಯವರ ಜಾತ್ರಾ ಮಹೋತ್ಸವು ನಡೆಯುತ್ತಾ ಬಂದಿದ್ದು, ಪ್ರತಿದಿನ ಶ್ರೀದೇವಿ ಭೂದೇವಿ ಸಮೇತನಾದ ವೆಂಕಟರಮಣ ಸ್ವಾಮಿಗೆ ವಿಶೇಷ ಪೂಜೆಗಳು ಹಾಗೂ ನಾನಾ ಉತ್ಸವಗಳು ನಡೆಯುವುದು ಇಲ್ಲಿನ ವಿಶೇಷ. ಶುಚಿತ್ವ, ದೀಪಾಲಂಕಾರ, ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು.ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಯಾವುದೇ ತೊಂದರೆಯಾಗದಂತೆ .ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.
ಶಾಸಕ ಸ್ಥಾನದಿಂದ ರಮೇಶ್ ಬಂಡಿಸಿದ್ದೇಗೌಡ ಅನರ್ಹಕ್ಕೆ ಆಗ್ರಹ
ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರು ಮುಸ್ಲಿಂ ಸಮಾಜವನ್ನು ಅವಹೇಳನ ಮಾಡಿದ್ದು, ಕೂಡಲೇ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲು ಹಾಗೂ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಆಗ್ರಹಿಸಿ ಬುಧವಾರ ಜಿಲ್ಲಾ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯಿಂದ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ ರಾಜ್ಯಾದ್ಯಂತ ಪ್ರಜಾಸತ್ತಾತ್ಮಕವಾಗಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆಯನ್ನು ನೀಡಿದರು.
ಕೋಗಿಲೆಮನೆ ಗ್ರಾಪಂ ಅಧ್ಯಕ್ಷರಾಗಿ ಶಿವವೀರ ಸಂಗಪ್ಪ ಆಯ್ಕೆ
ಕೋಗಿಲೆಮನೆ ಗ್ರಾಪಂಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಶಿವಕುಮಾರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬುಧವಾರ ಚುನಾವಣೆ ಘೋಷಣೆಯಾಗಿತ್ತು. ೮ ಜನ ಸದಸ್ಯರ ಬಲವಿರುವ ಗ್ರಾಮ ಪಂಚಾಯ್ತಿಯಲ್ಲಿ ಹಾಡ್ಲಗೆರೆ ಗ್ರಾಮದ ಶಿವವೀರಪ್ಪ ಸಂಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ತಹಸೀಲ್ದಾರ್‌ ಎಂ ಮಮತಾ ಘೋಷಣೆ ಮಾಡಿದರು. ನಂತರ ನೂತನ ಅಧ್ಯಕ್ಷರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
ಪೂರ್ವಭಾವಿ ಸಭೆಗೆ ಇಲಾಖಾ ಅಧಿಕಾರಿಗಳ ನಿರಾಸಕ್ತಿ
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಮಹನೀಯರ ಜಯಂತಿ ಆಚರಣೆಗಳಲ್ಲಿ ಕೆಲವು ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಕಾರ್ಯಕ್ರಮಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ರಜಾದಿನವನ್ನು ಅನುಭವಿಸಲು ತೆರಳುತ್ತಾರೆ, ಇದರ ಬಗ್ಗೆ ಸಾಕಷ್ಟು ಭಾರಿ ಆಕ್ಷೇಪ ವ್ಯಕ್ತಪಡಿಸಲಾಗಿದೆ ಮತ್ತು ಪತ್ರಿಕೆಗಳಲ್ಲೂ ವರದಿಯಾಗಿದೆ. ಆದರೆ ಯಾವುದೇ ಅಧಿಕಾರಿ ಮೇಲೆ ಕ್ರಮಕೈಗೊಂಡ ನಿದರ್ಶನವಿಲ್ಲವೆಂದು ಯುವ ಮುಖಂಡ ಎಂ.ಎನ್. ಜೈಪ್ರಕಾಶ್ ಹೇಳಿದರು.
ಮಾಲೇಕಲ್ಲು ತಿರುಪತಿ ರಥೋತ್ಸವಕ್ಕೆ ಸಿದ್ಧತೆ
ರಾಜ್ಯದ ಬಹುಭಾಗಗಳ ಭಕ್ತರನ್ನು ಈ ಪುಣ್ಯಕ್ಷೇತ್ರ ನಗರದಿಂದ ಈಶಾನ್ಯ ಭಾಗದ ನಿಸರ್ಗ ವೈಭವಗಳೊಂದಿಗೆ ತಿರುಪತಿ ಗ್ರಾಮದಲ್ಲಿ ಗೋವಿಂದರಾಜಸ್ವಾಮಿ ಮಹಾಲಕ್ಷ್ಮೀ ನೆಲೆಸಿದ್ದಾರೆ. ಪ್ರತಿವರ್ಷದಂತೆ ಆಷಾಢ ದ್ವಾದಶಿ ದಿನದಂದು ಜು.7ರಂದು ವಿಜೃಂಭಣೆಯ ರಥೋತ್ಸವ ನಡೆಯಲಿದೆ. ರಾಜ್ಯದ ವಿವಿಧ ಭಾಗ ಭಾಗಳಿಂದ ೧ ಲಕ್ಷಕ್ಕೂ ಹೆಚ್ಚು ಜನ ಭಕ್ತರು ಆಗಮಿಸಲಿದ್ದು, ಅದರಲ್ಲೂ ನವ ವಧು-ವರರು ವಿಶೇಷವಾಗಿ ಜಾತ್ರೆಯಲ್ಲಿ ಭಾಗವಹಿಸಿ ದೇವರ ದರ್ಶನ ತಪ್ಪದೇ ಪಡೆದು ಕಡಿದಾದ ೧೨೦೦ ಮೆಟ್ಟಿಲುಗಳನ್ನು ಹೊಂದಿರುವ ಮಾಲೇಕಲ್ ತಿರುಪತಿ ಬೆಟ್ಟವನ್ನು ಹತ್ತಿ ಬೆಟ್ಟದ ಮೇಲಿರುವ ಶ್ರೀನಿವಾಸ-ಮಹಾಲಕ್ಷ್ಮೀ ದೇವರ ದರ್ಶನ ಪಡೆದರೆ ಅವರ ಜೀವನ ಸುಖಕರವಾಗುವುದೆಂಬ ಪ್ರತೀತಿ ಇದೆ.
ರೈತ ಭವನದಲ್ಲಿ ಖಾಝಿ ಮುಲಾಖಾತ್ ಕಾರ್ಯಕ್ರಮ
ಹಾಸನ ಜಿಲ್ಲಾ ಸಂಯುಕ್ತ ಜಮಾಅತ್‌ನ ಖಾಝಿ ಮಾಣಿ ಉಸ್ತಾದ್ ನೇತೃತ್ವದಲ್ಲಿ ರೈತ ಭವನದಲ್ಲಿ ಖಾಝಿ ಮುಲಾಖಾತ್ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು. ಧಾರ್ಮಿಕ ಪಂಡಿತ ಹುಸೇನ್ ಸೌದಿ ಕೆ.ಸಿ. ರೋಡ್ ಮಾತನಾಡಿ, ಬದುಕಿನಲ್ಲಿ ಶಾಂತಿ ಮತ್ತು ನೆಮ್ಮದಿ ತ್ಯಾಗ ಮತ್ತು ಸೇವೆಯಿಂದ ಸಿಗುತ್ತದೆ. ಧರ್ಮವನ್ನು ಉಳಿಸಿಕೊಳ್ಳುವುದು ಅವಶ್ಯ. ಜೀವನದಲ್ಲಿ ಸಮಾಧಾನ ಬಯಸುವವರೆಗೆ ಸ್ವಾರ್ಥವನ್ನು ತೊರೆಯಬೇಕು. ಐಶ್ವರ್ಯ ಸಿಕ್ಕರೆ ಎಲ್ಲವನ್ನು ಮರೆಯುವ ಸ್ಥಿತಿ ಬರುತ್ತದೆ. ದೇವನ ಭಯದಲ್ಲಿ ಬದುಕಬೇಕು. ಧಾರ್ಮಿಕ ಪಂಡಿತರು ಮತ್ತು ಸಮುದಾಯದ ನಾಯಕರು ಒಗ್ಗೂಡಿ ಧರ್ಮ ಉಳಿಸಲು ಸಮಾಲೋಚನೆ ನಡೆಸಬೇಕು ಎಂದು ಕರೆ ನೀಡಿದರು.
ಮಾದಕ ವ್ಯಸನದಿಂದ ಎಲ್ಲರ ನೆಮ್ಮದಿ ಹಾಳು
ಮಾದಕ ವ್ಯಸನಕ್ಕೆ ಬಲಿಯಾದ ವ್ಯಕ್ತಿಗಳು, ಹಣ ಸಿಗದಿದ್ದರೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ನಂತರ ಪೊಲೀಸರಿಗೆ ಸಿಕ್ಕಿಬಿದ್ದು, ಕಷ್ಟ, ಅವಮಾನ ಅನುಭವಿಸುವ ಜತೆಗೆ ಜೀವನವನ್ನೇ ನಾಶ ಮಾಡಿಕೊಳ್ಳುತ್ತಾರೆ. ಜತೆಗೆ ಕುಟುಂಬದ ನೆಮ್ಮದಿಯೂ ಹಾಳುಗುತ್ತದೆ. ಆದ್ದರಿಂದ ಎಲ್ಲರ ನೆಮ್ಮದಿಯ ಜೀವನಕ್ಕಾಗಿ ಮಾದಕ ವ್ಯಸನಕ್ಕೆ ಯಾರೂ ಬಲಿಯಾಗಬಾರದು ಎಂದು ಹೊಳೆನರಸೀಪುರ ಉಪ ವಿಭಾಗದ ಡಿವೈಎಸ್‌ಪಿ ಶಾಲೂ ಎಚ್ಚರಿಸಿದರು.
ನಾಳೆ ಕೊಣನೂರಿನಲ್ಲಿ ಶ್ರೀಧರಗೌಡ ಹುಟ್ಟುಹಬ್ಬ ಆಚರಣೆ
ಕಾಂಗ್ರೆಸ್ ಮುಖಂಡ ಎಚ್. ಪಿ. ಶ್ರೀಧರ್ ಗೌಡರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದ ವತಿಯಿಂದ ಜೂ.25ರಂದು ಕೊಣನೂರಿನಲ್ಲಿ ಆಚರಿಸಲಾಗುತ್ತಿದೆ ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ. ವಿ. ಗುರುಮೂರ್ತಿ ತಿಳಿಸಿದ್ದಾರೆ. ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ (ಮಹಿಳೆ ಮತ್ತು ಹೃದಯ ಸಂಬಂಧಿತ) ಶಿಬಿರದಲ್ಲಿ ಉಚಿತವಾಗಿ ಎಕೋ ಪರೀಕ್ಷೆ, ಇಸಿಜಿ, ರಕ್ತ ಪರಿಕ್ಷೆ ಮಾಡಲಾಗುವುದು ಹಾಗೂ ವೇದಿಕೆ ಕಾರ್ಯಕ್ರಮವು ಕೊಣನೂರಿನ ವಿನುತಾ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.
ಶಾಸಕ ಬಂಡೀಸಿದ್ದೇಗೌಡ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ
ಹಲವು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಸರ್ಕಾರಿ ಜಮೀನನ್ನು ಬಗರ್‌ಹುಕುಂ ಅಡಿ ಮುಸ್ಲಿಂರಿಗೆ ಮಂಜೂರು ಮಾಡುವ ಅಧಿಕಾರಿಯನ್ನು ನೇಣಿಗೇರಿಸುತ್ತೇನೆ ಎಂದು ಹೇಳಿರುವ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿಕೆ ಖಂಡಿಸಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಯುವಜನತೆ ದುಶ್ಚಟಗಳಿಂದ ಸಮಾಜಕ್ಕೂ ಮಾರಕವಾಗುತ್ತಿದ್ದಾರೆ
ಮಕ್ಕಳ ವಿದ್ಯಾಭ್ಯಾಸಕ್ಕೆ ತೋರುವ ಆಸಕ್ತಿಯನ್ನು ಅವರ ಚಲನವಲನಗಳನ್ನು ಗಮನಿಸುವತ್ತ ಪೋಷಕರು ಬೆಳಸಿಕೊಂಡರೆ ತಮ್ಮ ಮಕ್ಕಳು ತಪ್ಪು ದಾರಿಯಲ್ಲಿ ಹೋಗುವುದನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಪೋಷಕರು ಹಾಗೂ ಶಾಲಾ ಕಾಲೇಜುಗಳ ಆಡಳಿತ ಮಂಡಳಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕಿವಿಮಾತು ಹೇಳಿದರು. ಕುಟುಂಬಕ್ಕೆ ಆಧಾರವಾಗಿ, ಸಮಾಜಕ್ಕೆ ಆಸ್ತಿಯಾಗಬೇಕಾದ ಯುವಜನತೆ ದುಶ್ಚಟಗಳಿಗೆ ದಾಸರಾಗಿ ತಮ್ಮ ಕುಟುಂಬಕ್ಕೆ ಮಾತ್ರವಲ್ಲ ಸಮಾಜಕ್ಕೂ ಮಾರಕವಾಗುತ್ತಿರುವುದು ಕಳವಳದ ಸಂಗತಿ ಎಂದು ಡಿವೈಎಸ್‌ಪಿ ಬಿ. ಆರ್‌. ಗೋಪಿ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved