• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮಿತ್‌ ಶಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಸನದ ಬೂವನಹಳ್ಳಿ ಬೈಪಾಸ್ ಬಳಿ ಬುಧವಾರ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು. ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಅಮಿತ್‌ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಬಸ್ ದರ ಏರಿಕೆ ಖಂಡಿಸಿ ನಾಳೆ ಜೆಡಿಎಸ್ ಪ್ರತಿಭಟನೆ
ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಜನವರಿ ೧೦ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತದೆ. ತಮ್ಮ ಘೋಷಣೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆಯನ್ನು ಕಾಂಗ್ರೆಸ್ ಸರ್ಕಾರ ಹೆಚ್ಚು ಮಾಡುತ್ತಿದೆ. ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಬಸ್ ಪ್ರಯಾಣದ ಹೆಚ್ಚಿಸಿರುವುದು ಬಡ ಹಾಗೂ ಸಾಮಾನ್ಯ ವರ್ಗದ ಜನರಿಗೆ ಆರ್ಥಿಕ ಹೊರೆಯಾಗಿದೆ ಎಂದರು.
ಚೆಸ್ಕಾಂ ವಿರುದ್ಧ ಗ್ರಾಮಸ್ಥರ ಆಕ್ರೋಶ
ಹೊಳೆನರಸೀಪುರ ತಾಲೂಕಿನ ಬನಶೆಟ್ಟಿಹಳ್ಳಿಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ ಕೆಟ್ಟು ೧೫ ದಿನ ಕಳೆದರೂ ರಿಪೇರಿಯಾಗದ ಕಾರಣದಿಂದ ಗ್ರಾಮಸ್ಥರು ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಕಲ್ಪಿಸುವ ಸಲುವಾಗಿ ಜಮೀನುಗಳಿಗೆ ಅಂತರ್‌ಜಲ ವ್ಯವಸ್ಥೆ ಮಾಡುವ ವಿದ್ಯುತ್ ಕಂಬದಿಂದ ವಿದ್ಯುತ್ ವ್ಯವಸ್ಥೆ ಮಾಡಿದ್ದಾರೆ, ಆದರೆ ಮೂರು ಫೇಸ್ ವಿದ್ಯುತ್ ಸ್ಥಗಿತಗೊಂಡ ನಂತರ ಮನೆಗಳಲ್ಲಿ ಸಿಂಗಲ್ ಲೈನ್(ಪ್ಯೂಸ್)ನಿಂದಾಗಿ ಯಾವುದೇ ಉಪಯೋಗವಿಲ್ಲದೇ ಪ್ರತಿನಿತ್ಯ ಸಮಸ್ಯೆಗೆ ಸಿಲುಕಿದ್ದಾರೆ.
ಗ್ಯಾರಂಟಿಗಳಿಂದ ಅಭಿವೃದ್ಧಿ ಶೂನ್ಯ ಎಂದ ಸೂರಜ್‌ ರೇವಣ್ಣ
ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು. ಜನರು ಯಾವುದೇ ಭಾಗ್ಯಗಳನ್ನು ಕೇಳದಿದ್ದರೂ ಸಹ ಓಟ್ ಬ್ಯಾಂಕ್‌ಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಕೇವಲ ಅನ್ನಭಾಗ್ಯ ಮಾತ್ರ ಅವಶ್ಯಕತೆಯಿತ್ತು. ಏಕೆಂದರೆ ಇದು ಕೂಲಿ ಕಾರ್ಮಿಕರಿಗೆ, ಬಡವರಿಗೆ ಅನುಕೂಲವಾಗುತ್ತದೆ. ಅನುದಾನಗಳ ಅಭಾವ ತುಂಬಾ ಇದ್ದು ಈ ಹಿನ್ನೆಲೆಯಲ್ಲಿ ನಾನು ಅಭಿವೃದ್ಧಿ ಕಾರ್ಯಗಳಿಗೆ ಹಣ ಕೊಡುತ್ತೇನೆ ಎಂದು ಹೇಳುವುದಿಲ್ಲ ಎಂದರು.
ಪ್ರಕೃತಿ ಏರುಪೇರಿನ ಬಗ್ಗೆ ಸಾಹಿತ್ಯ ಕ್ಷೇತ್ರವೂ ಗಮನಹರಿಸುತ್ತಿಲ್ಲ
ನಾಳಿನ ಆತಂಕಗಳ ಬಗ್ಗೆ ಅತಿವೃಷ್ಟಿ, ಸುಂಟರಗಾಳಿ, ಕಾಳ್ಗಿಚ್ಚು, ಹಿಮ ಕುಸಿತ, ಬರಗಾಲ ರೂಪದಲ್ಲಿ ಭೂಮಿಯೇ ಮಾತನಾಡುತ್ತಿದ್ದರೂ, ಕೇಳಿಸಿಕೊಳ್ಳುವ ವ್ಯವಧಾನ ಯಾರಿಗೂ ಇಲ್ಲವಾಗಿದೆ ಎಂದು ಹಿರಿಯ ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಕಳವಳ ವ್ಯಕ್ತಪಡಿಸಿದರು. ಸಾಹಿತ್ಯ ವಲಯವೂ ಈ ಬಗ್ಗೆ ಚಿತ್ತ ಹರಿಸಿಲ್ಲ. ವಾತಾವರಣ ಬದಲು, ಹವಾಗುಣದ ಬಗ್ಗೆ ಕತೆ, ಕಾದಂಬರಿ ಬರೆದಿಲ್ಲ. ಗ್ರಾಮೀಣ, ನಗರ ಹೀಗೆ ಎರಡು ಕತ್ತಲೆ ಮಧ್ಯೆ ಬದುಕುತ್ತಿರುವ ನಾವು ಎಚ್ಚೆತ್ತುಕೊಳ್ಳಬೇಕಿದೆ. ಮತ್ತೊಂದು ವಿಪರ್ಯಾಸ ಎಂದರೆ, ಭೂಮಿ ಇಷ್ಟೊಂದು ಸಂಕಟ ಪಡುತ್ತಿದ್ದರೂ, ಅಧಿಕಾರಿಗಳಾಗಲೀ, ರಾಜಕಾರಣಿಗಳಾಗಲೀ ಮಾತನಾಡುತ್ತಿಲ್ಲ ಎಂದು ಬೇಸರ ಹೊರಹಾಕಿದರು.
ಹಳ್ಳಿಗಳಲ್ಲು ಗುಣಮಟ್ಟದ ರಸ್ತೆ ನಿರ್ಮಾಣವಾಗಬೇಕು
ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸಿ ಸಂಚಾರ ಸುಗಮವಾಗಿಸಲು ಈ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಕೇವಲ ನಗರ, ಪಟ್ಟಣ ಪ್ರದೇಶಗಳ ಜನರಿಗೆ ಮಾತ್ರವಲ್ಲದೆ ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ರಸ್ತೆ ಬಳಕೆಗೆ ಸಿಗಬೇಕು ಹಾಗೂ ಇದರಿಂದ ಅಪಾರ ಮಂದಿಗೆ ಅನುಕೂಲ ಆಗಬೇಕು ಎಂಬ ಹಿತದೃಷ್ಟಿಯಿಂದ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಹೊಸ ತಲೆಮಾರಿನ ಬರಹಗಾರರ ಓದಿನಲ್ಲೂ ರಾಜಕೀಯ
ಹೊಸ ತಲೆಮಾರಿನ ಕವಿಗಳು, ಬರಹಗಾರರು ಹಾಗೂ ಕತೆಗಾರರ ಕೃತಿಗಳನ್ನು ಓದುವ ವಿಚಾರದಲ್ಲಿಯೇ ರಾಜಕೀಯ ನಡೆಯುತ್ತಿದೆ ಎಂಬ ಅನುಮಾನ ಇದೆ ಎಂದು ಯುವ ಕಾದಂಬರಿಕಾರ ಗುರುಪ್ರಸಾದ್ ಕಂಟಲಗೆರೆ ಅಭಿಪ್ರಾಯಪಟ್ಟರು. ಇದಕ್ಕೆ ಯುವ ಬರಹಗಾರ ಸಚಿನ್ ತೀರ್ಥಹಳ್ಳಿ ದನಿಗೂಡಿಸಿ ಬೆಂಬಲಿಸಿದರು. ಹೌದು; ಹೆಚ್ಚು ಪರಿಚಿತರು, ಜನಪ್ರಿಯ ಆದವರ ಸಾಹಿತ್ಯವನ್ನೇ ಓದಬೇಕು ಅನ್ನೋ ಮನಸ್ಥಿತಿ ಇದೆ ಎನಿಸುತ್ತದೆ ಎಂದರು. ಆದರೆ ಅಂಕಣಕಾರ್ತಿ ಕುಸುಮಾ ಆಯರಹಳ್ಳಿ ಅಲ್ಲಗಳೆದರು.
ಹೊಳೆನರಸೀಪುರದ 23 ವಾರ್ಡ್‌ಗಳಲ್ಲೂ ಬೀದಿನಾಯಿಗಳ ಹಾವಳಿ
ಹೊಳೆನರಸೀಪುರ ಪಟ್ಟಣದ ೨೩ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಕ್ಕಳು, ವಯೋವೃದ್ಧರು ವಾಯುವಿಹಾರಕ್ಕೆ ತೆರಳುವ ನಾಗರಿಕರು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು, ಧನುರ್ಮಾಸ ವ್ರತಾಚಾರಣೆ ಮಾಡುವ ಭಕ್ತರು, ಸಾರ್ವಜನಿಕರು ತಿರುಗಾಡಲು ಹಾಗೂ ದ್ವಿಚಕ್ರ ವಾಹನಗಳ ಸವಾರರು ಜೀವ ಭಯದ ಸಂಕಷ್ಟದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸೂರನಹಳ್ಳಿಯಲ್ಲಿ ಬಾಲಾಜಿ ಎಂಬುವರ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕೊಂದು ಹಾಕಿದೆ ಮತ್ತು ಆಶ್ರಯ ಬಡಾವಣೆಯಲ್ಲಿ ಬಾಲಕನೋರ್ವನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದ ಸಂದರ್ಭದಲ್ಲಿ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಾಲಕ ರಕ್ಷಣೆ ಮಾಡಲಾಗಿತ್ತು.
ಯಗಚಿ ನದಿ ದಂಡೆಯ ಅಯ್ಯಪ್ಪನ ದೇಗುಲದಲ್ಲಿ ಪಡಿಪೂಜೆ
ಯಗಚಿ ನದಿಯ ದಡದ ಮೇಲಿರುವ ಹರಿಹರ ಸುಪುತ್ರ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಏಳನೇ ವರ್ಷರ ವಾರ್ಷಿಕೋತ್ಸವ ಮತ್ತು ಪಡಿಪೂಜೆ ನಡೆಸಲಾಯಿತು. ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ನಿಷ್ಠೆ ಮತ್ತು ನಿರ್ಮಲಭಕ್ತಿ ಇದ್ದರೆ ಮಾತ್ರ ಅಯ್ಯಪ್ಪನ ಪೂಜೆಯಲ್ಲಿ ಗರುಡ ದರ್ಶನವಾಗುತ್ತದೆ. ಅಯ್ಯಪ್ಪಸ್ವಾಮಿ ಮಾಲೆ ಹಾಕಿದ ಬಳಿಕ ನಮ್ಮಲ್ಲಿ ದುಶ್ಚಟಗಳನ್ನು ತೊರೆದು ಆಸೆ ಅಮಿಷಗಳಿಂದ ಹೊರಬಂದರೆ ನಿಮ್ಮ ಯಾತ್ರೆ ಸಂಪನ್ನವಾಗುತ್ತದೆ ಎಂದು ಡಾ. ವಿದ್ಯಾವಾಚಸ್ವತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಹೇಳಿದರು.
ಮಕ್ಕಳಿಗೆ ನೈತಿಕ ಶಿಕ್ಷಣದ ಅಗತ್ಯವಿದೆ
ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರವನ್ನು ಬಾಲ್ಯದಲ್ಲಿಯೇ ತಿಳಿಸಿಕೊಡಬೇಕು. ಶಿಕ್ಷಣವನ್ನು ಶಾಲೆಯಲ್ಲಿ ಪಡೆಯುತ್ತಾರೆ. ನೈತಿಕ ಶಿಕ್ಷಣದ ಅಗತ್ಯವಿದೆ. ರಾಷ್ಟ್ರೀಯ ಭಾವೈಕ್ಯತೆ ಜೊತೆಗೆ ಸೋದರತ್ವ ಮೈಗೂಡಿಸಿಕೊಳ್ಳಬೇಕು ಎಂದು ಆರ್ಷ ವಿದ್ಯಾಕೇಂದ್ರ ಸಂಸ್ಥಾಪಕರಾದ ಸ್ವಾಮಿ ಚಿದ್ರೂಪಾನಂದ ಸರಸ್ವತಿ ಕರೆ ನೀಡಿದರು. ಇಂದು ಜಾತಿ, ಜಾತಿಗಳ ನಡುವೆ ಭಿನ್ನತೆಗಳು ತಲೆ ಎತ್ತುತ್ತಿವೆ. ಇಂಥಹ ಹೊತ್ತಿನಲ್ಲಿ ಸಹೋದರತ್ವ ಬಹಳ ಮುಖ್ಯ ಎಂದು ಅವರು ಅಭಿಪ್ರಾಯಪಟ್ಟರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved