ಮಾಲೆಕಲ್ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಜು. 7ರಂದು ಸೋಮವಾರ ಮಧ್ಯಾಹ್ನ ರಥೋತ್ಸವ ಜರುಗಲಿವೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾಗರಾಜ್ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು. ಆಶಾಢ ಮಾಸದಲ್ಲಿ ಸ್ವಾಮಿಯವರ ಜಾತ್ರಾ ಮಹೋತ್ಸವು ನಡೆಯುತ್ತಾ ಬಂದಿದ್ದು, ಪ್ರತಿದಿನ ಶ್ರೀದೇವಿ ಭೂದೇವಿ ಸಮೇತನಾದ ವೆಂಕಟರಮಣ ಸ್ವಾಮಿಗೆ ವಿಶೇಷ ಪೂಜೆಗಳು ಹಾಗೂ ನಾನಾ ಉತ್ಸವಗಳು ನಡೆಯುವುದು ಇಲ್ಲಿನ ವಿಶೇಷ. ಶುಚಿತ್ವ, ದೀಪಾಲಂಕಾರ, ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು.ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಯಾವುದೇ ತೊಂದರೆಯಾಗದಂತೆ .ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.