• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರೀಕ್ಷೆ ಮುಗಿದು ಕಾಲೇಜು ಪ್ರವೇಶಾತಿ ಆರಂಭವಾದರೂ ಮೂಲ ಸೌಕರ್ಯವಿಲ್ಲ
ಈಗಾಗಲೇ ಕಾಲೇಜುಗಳ ಪರೀಕ್ಷೆ ಮುಗಿದು ಪ್ರವೇಶಾತಿ ಆರಂಭವಾದರೂ ಇನ್ನೂ ಕಾಲೇಜಿಗೆ ಮೂಲಭೂತ ಸೌಕರ್ಯವೇ ಇಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದರು. ಪಾರ್ಟ್‌ ಟೈಂ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬಹುದಿತ್ತು. ಯಾವುದೂ ಇಲ್ಲ. ಹಾಗಾದರೇ ಇವರು ಖಾಸಗಿ ಕಾಲೇಜು ಜೊತೆ ಶಾಮೀಲಾಗಿದ್ದಾರಾ ಎನುವ ಅನುಮಾನ ನನಗಿದೆ ಎಂದು ಮಾರ್ಮಿಕವಾಗಿ ಹೇಳಿದರು. ಯಾವ ಹೊಸ ಕೋರ್ಸ್ ಬೇಕು ಕೊಡಬೇಕು. ಅಧಿಕಾರಿಗಳು, ಮಂತ್ರಿಗಳು ಈ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಮೂಲಭೂತ ಸೌಕರ್ಯ ಕೂಡ ಇಲ್ಲ ಇಂತಹ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮುಖಭಂಗ ನಂಗಲ್ಲ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಎಂದ ರೇವಣ್ಣ
ನಗರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮುಖಭಂಗ ಹೊರತು ನನಗಲ್ಲ. ಜಿಲ್ಲೆಯಲ್ಲಿ ಬಿಜೆಪಿನಾ ಕಾಂಗ್ರೆಸ್‌ಗೆ ಅಡ ಇಟ್ಟಿದ್ದಾರೆ. ನಗರಸಭೆ ಅಧ್ಯಕ್ಷರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಗುಡುಗಿದರು. ನಾನು ಮೂವತ್ತು ವರ್ಷ ರಾಜಕೀಯ ಮಾಡಿದ್ದೀನಿ, ಇಂತಹದ್ದನ್ನೆಲ್ಲಾ ನೋಡಿದ್ದೀನಿ, ನನಗೆ ರಾಜಕೀಯ ಹಿನ್ನಡೆಯಲ್ಲ ಇದು ಬುನಾದಿ. ಆ ಅಧ್ಯಕ್ಷನಿಗೆ ಮಾನ, ಮರ್ಯಾದೆ, ಗೌರವ ಇದೆಯಾ! ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೆದರಲ್ಲ ಎಂದು ಗುಡುಗಿದರು.
ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಹಿರಿಯ ಪತ್ರಕರ್ತರಾದ ಎಸ್.ಕೆ.ಶ್ಯಾಮಸುಂದರ್, ಎಸ್.ಎನ್.ಅಶೋಕ ಕುಮಾರ್ ಮತ್ತು ಉಡುಪಿ ಸಂದೀಪ್ ಕುಮಾರ್ ಅವರಿಗೆ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪ್ರಜಾವಾಣಿ ನಿವೃತ್ತ ಸಂಪಾದಕರಾದ ಪದ್ಮರಾಜ ದಂಡವತಿ, ಹಿರಿಯ ಪತ್ರಕರ್ತರುಗಳಾದ ಎಸ್.ಕೆ.ಶೇಷಚಂದ್ರಿಕಾ, ಅನಂತ ಚಿನಿವಾರ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಖಜಾಂಚಿ ವಾಸುದೇವಹೊಳ್ಳ, ಐಎಫ್‌ಡಬ್ಲ್ಯೂಜೆ ಅಧ್ಯಕ್ಷರಾದ ಬಿ.ವಿ. ಮಲ್ಲಿಕಾರ್ಜುನಯ್ಯ ಇದ್ದರು.
ಎಎನ್‌ಎಂ ತರಬೇತಿ ರದ್ದು ನಿರ್ಧಾರ ಹಿಂಪಡೆಯಲು ಆಗ್ರಹ
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರಗಳ (ಎ.ಎನ್.ಎಂ) ತರಬೇತಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು. ಅವರ ಶಿಕ್ಷಣ ಮತ್ತು ಉದ್ಯೋಗವಕಾಶವನ್ನು ಕಸಿದುಕೊಳ್ಳುವ ಕ್ರಮವಾಗಿದೆ ಎಂದು ದೂರಿದರು.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮ
ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಹೇಳಿದರು. ಗೃಹಲಕ್ಷ್ಮಿ ಯೋಜನೆಗೆ ಶೇ.99ರಷ್ಟು ಮಹಿಳೆಯರು ಹೆಸರು ನೋಂದಣಿ ಮಾಡಿಸಿದ್ದಾರೆ. ಎರಡು ತಿಂಗಳ ಕಂತು ಶೀಘ್ರದಲ್ಲೇ ಖಾತೆಗೆ ಜಮೆಯಾಗಲಿದೆ. ವಿದ್ಯಾನಿಧಿ ಹಾಗೂ ಗೃಹಜ್ಯೋತಿಯ ವಿಷಯದಲ್ಲಿ ಯಾವುದೇ ತೊಂದರೆ ಎದುರಾಗಿಲ್ಲ ಎಂದು ವಿವರ ನೀಡಿದರು.
ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ
ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಸಕ ಸಿಮೆಂಟ್ ಮಂಜು ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈಶ್ವರ್ ಕಂಡ್ರೆ ಅವರನ್ನು ಭೇಟಿ ಮಾಡಿ ಕಾಡಾನೆಗಳ ಸ್ಥಳಾಂತರ, ಕಾಡಾನೆ ಮಾನವ ಸಂಘರ್ಷವನ್ನು ತಡೆಗಟ್ಟಲು ಕ್ರಮಗಳನ್ನು ಕುರಿತು ಚರ್ಚಿಸಿದ್ದು ಸ್ಥಳೀಯ ರೈತರು, ಬೆಳೆಗಾರರು ಹಾಗೂ ಸಾರ್ವಜನಿಕರೊಂದಿಗೆ ಮುಖ್ಯಮಂತ್ರಿಗಳ‌ ನೇತೃತ್ವದಲ್ಲಿ ಸಭೆಯನ್ನು ಆಯೋಜಿಸುವಂತೆ ಮನವಿ ಸಲ್ಲಿಸಿರುವುದಾಗಿ ಅವರು ತಿಳಿಸಿದರು.
ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಸರ್ಕಾರದಿಂದ ಅನುದಾನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಸರ್ಕಾರ 75 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ತಾಲೂಕಿನ ಕೆಲವು ಗ್ರಾಮಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಸಮುದಾಯದ ಜನರ ಸ್ಥಿತಿಗತಿ ಕುರಿತು ಖುದ್ದಾಗಿ ಆಯಾ ಗ್ರಾಮಗಳಿಗೆ ಭೇಟಿ ನೀಡಲು ಆಗಮಿಸಿದ್ದ ಸಂದರ್ಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ವಸತಿ ಮತ್ತು ನಿವೇಶನ ರಹಿತ ಅಲೆಮಾರಿಸಮುದಾಯದವರಿಗೆ ಸವಲತ್ತುಗಳನ್ನು ಒದಗಿಸಿಕೊಡಲು ವಿಶೇಷವಾಗಿ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಬೇಡಿಕೆ ಈಡೇರಿಕೆಗೆ ಪೌರ ನೌಕರರ ಪ್ರತಿಭಟನೆ
ಸಮಸ್ತ ಪೌರ ನೌಕರರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ತಮಟೆ ಚಳವಳಿ ಜೊತೆಗೆ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರಮುಖವಾದ ನ್ಯಾಯಸಮ್ಮತ ಬೇಡಿಕೆಗಳೆಂದರೆ, ರಾಜ್ಯ, ನಗರ, ಸ್ಥಳೀಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಕೆ ಜಿಐಡಿ, ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನಮಗೂ ವಿಸ್ತರಿಸಬೇಕು ಎಂದರು.
ಜೆಡಿಎಸ್‌ನವರು ಮೊದಲು ಮೈತ್ರಿಧರ್ಮವನ್ನು ಪಾಲಿಸುವುದನ್ನು ಕಲಿಯಲಿ
ಜೆಡಿಎಸ್‌ನವರು ಮೊದಲು ಮೈತ್ರಿಧರ್ಮವನ್ನು ಪಾಲಿಸುವುದನ್ನು ಕಲಿಯಲಿ ಆನಂತರ ಬಿಜೆಪಿ ಪಕ್ಷದ ಬಗ್ಗೆ ಮಾತನಾಡಲಿ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬೇಹಳ್ಳಿ ಗಿರೀಶ್ ತಿಳಿಸಿದರು. ಆನೇಕೆರೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಇದೇ ನಿಮ್ಮ ಜೆಡಿಎಸ್‌ನವರು ಕಾಂಗ್ರೆಸ್‌ಪಕ್ಷದವರ ಜೊತೆಗೂಡಿ ಬಿಜೆಪಿ ಪಕ್ಷವನ್ನು ಸೋಲಿಸಿದ್ದು ಸರಿಯೇ, ನೀವು ಬೇಕಾದರೆ ಯಾವ ಪಕ್ಷದ ಜೊತೆ ಹೋದರು ಸರಿಯನ್ನಬೇಕು ಇದು ಯಾವ ನ್ಯಾಯ. ಮೊದಲು ನಿಮ್ಮ ಪಕ್ಷ ನಿಷ್ಠೆಯನ್ನು ಕಾಪಾಡಿಕೊಳ್ಳಿ ಎಂದು ಸೂರಜ್‌ರೇವಣ್ಣ ಅವರಿಗೆ ಆಗ್ರಹಿಸಿದರು.
ಉಚಿತ ಕುಡಿಯುವ ನೀರಿನ ಘಟಕಕ್ಕೆ ಚಾಲನೆ
ಬೇಸಿಗೆ ಕಾಲದ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಉಚಿತ ಕುಡಿಯುವ ನೀರನ್ನು ಒದಗಿಸಲು ನೀರಿನ ಘಟಕಕ್ಕೆ ನಗರದ ಸಂತೇಪೇಟೆ ವೃತ್ತದಲ್ಲಿ ಸಫಾ ಬೈತಲ್ ಮಾಲ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪೊಲೀಸ್ ಅಧಿಕಾರಿ ಕೃಷ್ಣ ನಾಯಕ್ ಬೆಳಿಗ್ಗೆ ಚಾಲನೆ ನೀಡಿದರು. ಮೆಡಿಕಲ್ ಕ್ಯಾಂಪ್ ಮಾಡುವುದು ಸೇರಿದಂತೆ ಹಲವಾರು ಸೇವಾ ಚಟುವಟಿಕೆಗಳನ್ನು ಯಾವ ಜಾತಿ ಬೇಧ ನೋಡದೇ ಜನಸೇವೆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಹೇಳಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved