• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಸವಲತ್ತನ್ನು ಕಾರ್ಮಿಕರಿಗೆ ತಲುಪಿಸಿ
ಕಾರ್ಮಿಕ ವರ್ಗದವರಿಗೆ ಸರ್ಕಾರದ ಸವಲತ್ತುಗಳು ವಿಫುಲವಾಗಿದ್ದು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಎ. ಮಂಜು ತಾಕೀತು ಮಾಡಿದರು. ಪಟ್ಟಣದ ದೇವರಾಜ ಅರಸು ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವರ್ಗದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ‌ ಭದ್ರತೆ ಯೋಜನೆಗಳ ಹಾಗೂ ಕಾರ್ಮಿಕ ಕಾಯ್ದೆಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಿರುವರೆಗೂ ಕನ್ನಡ ಭಾಷೆಗೆ ಆಪತ್ತಿಲ್ಲ
ಸರ್ಕಾರಿ ಶಾಲೆಗಳು ಎಲ್ಲಿಯವರೆಗೆ ಇರುತ್ತವೋ, ಅಲ್ಲಿಯವರೆಗೆ ಕನ್ನಡ ಭಾಷೆಗೆ ಆಪತ್ತು ಬರುವುದಿಲ್ಲ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಮತ್ತು ಮುಂದಿನ ವರ್ಷದೊಳಗೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.
ವಿಕಲಚೇತನರೊಂದಿಗೆ ಹೊಸ ವರ್ಷಾಚರಣೆ
ಚನ್ನರಾಯಪಟ್ಟಣ ರೋಟರಿ ಕ್ಲಬ್ ವಿಷನ್ ವತಿಯಿಂದ ಪಟ್ಟಣದ ಸಮೀಪದ ಬರಗೂರು ಹ್ಯಾಂಡ್‌ಪೋಸ್ಟ್ ಬಳಿ ಇರುವ ವಿಕಲಚೇತನ ಮಕ್ಕಳ ಪಾಠಶಾಲೆಯಲ್ಲಿ ಮಕ್ಕಳ ಜೊತೆ ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಹೊಸ ವರ್ಷಾಚರಣೆ ಮಾಡಲಾಯಿತು. ಕ್ಲಬ್‌ನ ವತಿಯಿಂದ ೫೦ ಜನ ವಿಕಲಚೇತನ ಮಕ್ಕಳಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಲಾಯಿತು. ಇಂಥ ಮಕ್ಕಳ ಜೊತೆಯಲ್ಲಿ ಹೊಸ ವರ್ಷವನ್ನು ಆಚರಣೆ ಮಾಡಿದಲ್ಲಿ ವಿಕಲಚೇತನ ಮಕ್ಕಳು ಸಹ ಹೊಸ ವರ್ಷದ ಸಂತೋಷವನ್ನು ಅನುಭವಿಸಬಹುದು ಎಂದರು.
ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ ಹಾಗೂ ಅಧೀಕ್ಷಕ
ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಉಪನಿರ್ದೇಶಕರಾದ ಪಾಂಡು ಆದೇಶದ ಮೇರೆಗೆ ಹಣ ಪಡೆಯುತ್ತಿರುವುದಾಗಿ ಹೇಳಿಕೆ ನೀಡಿದ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ಪಾಂಡು ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ತಂದೆಯನ್ನೇ ಹೊಡೆದು ಕೊಂದ ಮಗ
ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಶಿಧರ (58 ವರ್ಷ) ಎಂಬುವವರನ್ನ ಮಗನೇ ಹತ್ಯೆ ಮಾಡಿದ್ದು, ನಂತರ ಹೃದಯಾಘಾತದಿಂದ ಪಟ್ಟಿದ್ದಾರೆ ಎಂದು ನಂಬಿಸಲು ಮುಂದಾಗಿ ತಾಯಿ ಹಾಗೂ ಗ್ರಾಮಸ್ಥರ ಹೇಳಿಕೆಯಿಂದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲು ಮಾಡಿದ್ದಾರೆ.
ಹುಟ್ಟೂರು ಕಾಳೇನಹಳ್ಳಿಹಟ್ಟಿ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡುತ್ತಿರುವ ನಟ ಡಾಲಿ ಧನಂಜಯ್

ಡಾಲಿ ಧನಂಜಯ್ ಇದೀಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ತನ್ನೂರಿನ ಶಾಲೆಗೆ ಕೊಡುಗೆ ನೀಡಲು ಮುಂದಾಗಿರುವ ಡಾಲಿ, ತನ್ನ ಊರಾದ ಕಾಳೇನಹಳ್ಳಿ ಹಟ್ಟಿಯ ಸರ್ಕಾರಿ ಶಾಲೆಯನ್ನು ಸುಮಾರು ಹತ್ತು ಲಕ್ಷ ರು. ವೆಚ್ಚದಲ್ಲಿ ಹೈಟೆಕ್‌ ಶಾಲೆ ಮಾಡುತ್ತಿದ್ದಾರೆ.

ಅರಕಲಗೂಡಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ
ಶ್ರೀ ಧರ್ಮಸ್ಥಳ ಪಾದಯಾತ್ರೆ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಶಾಸಕ ಎ. ಮಂಜು ಜನರಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಿದರು. ಇದಕ್ಕೂ ಮುನ್ನ ದೊಡ್ಡಮ್ಮ ದೇವಸ್ಥಾನ ಆವರಣದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿ, ಜನರಿಗೆ ಅನ್ನದಾನ ಮಾಡಿ ಪಾದಯಾತ್ರೆ ಹೊರಟು ದೇವರಿಗೆ ಭಕ್ತಿ- ಭಾವ ಅರ್ಪಿಸುವುದು ಪುಣ್ಯದ ಕಾಯಕವಾಗಿದೆ ಎಂದರು.
ಇಂದಿನ ಮಹಿಳೆಯ ಎಲ್ಲಾ ಸಾಧನೆಗೆ ಸ್ಫೂರ್ತಿ ಸಾವಿತ್ರಿಬಾಯಿ ಫುಲೆ: ಉಪನ್ಯಾಸಕಿ ಸುಧಾ
ಈ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ನಗರದ ಪೆಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಆಚರಿಸಿತು. ಮಹಿಳೆಯರಿಗೆ ಇಷ್ಟು ಕಟ್ಟುಪಾಡುಗಳು ಕೇವಲ ಶತಮಾನದ ಹಿಂದೆ ಇತ್ತೇ ಎಂಬುದು ಆಶ್ಚರ್ಯ ಆಗುತ್ತದೆ. ಆಂಗ್ಲ ಆಳ್ವಿಕೆಯಲ್ಲಿ ಬಹಳ ನಿರ್ಲಕ್ಷ್ಯದಿಂದ ನಮ್ಮ ಶೈಕ್ಷಣಿಕ ಪರಿಸ್ಥಿತಿಯನ್ನು ಅವಹೇಳನ ಮಾಡುತ್ತಿದ್ದರು ಎಂದು ಸುಧಾ ಹೇಳಿದರು.
ಬೇಲೂರು ಬಸ್‌ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಶಾಸಕ ಕಿಡಿ
ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಅವ್ಯವಸ್ಥೆಯ ತಾಣವಾಗಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಎಚ್. ಕೆ. ಸುರೇಶ್ ಭೇಟಿ ನೀಡಿ ಡಿಪೋ ವ್ಯವಸ್ಥಾಪಕರನ್ನು ತರಾಟೆ ತೆಗೆದುಕೊಂಡರು. ಇಷ್ಟೆಲ್ಲಾ ಅವ್ಯವಸ್ಥೆಗೆ ಕಾರಣವಾಗಿರುವ ಅಧಿಕಾರಿಗಳ ತಲೆದಂಡ ಮಾಡಲು ಹಾಗೂ ಸಾರ್ವಜನಿಕರ ಜೊತೆ ಸ್ಪಂದಿಸದ ಡಿಪೋ ಮ್ಯಾನೇಜರ್ ಅವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗುವುದು ಎಂದರು.
ಶಾಸಕರಿಂದ ಹೆದ್ದಾರಿ ಕಾಮಗಾರಿ ಪರಿಶೀಲನೆ
ರಾಮನಾಥಪುರ- ಹೋಬಳಿ ಕೇರಳಾಪುರ ಗಡಿಯಿಂದ ಕೇರಳಾಪುರ, ಕಾಳೇನಹಳ್ಳಿ, ಬಸವಾಪಟ್ಟಣ, ರಾಮನಾಥಪುರ, ಕೊಣನೂರು, ಮಾರ್ಗ ಸೋಮವಾರಪೇಟೆಗೆ ಹೋಗುವ ರಸ್ತೆಯ ಬದಿಯಲ್ಲಿದ್ದ ದೇವಸ್ಥಾನಗಳ ಅಭಿವೃದ್ಧಿ ಹಾಗೂ ಬಸ್ ನಿಲ್ದಾಣಗಳು, ಉಳಿದಿರುವ, ರಾಮನಾಥಪುರ ಬಸವೇಶ್ವರ ಸರ್ಕಲ್‌ನಿಂದ ಅರಣ್ಯ ಗೇಟ್ ಭಾಗದವರೆಗೆ ಬಸವಾಪಟ್ಟಣ ಗ್ರಾಮದ ಮಧ್ಯ ಉಳಿದಿರುವ ಎಲ್ಲಾ ಕಾಮಗಾರಿಯ ಬಗ್ಗೆ ತುರ್ತಾಗಿ ಚರಂಡಿ ನಿರ್ಮಾಣದ ಬಗ್ಗೆ ಕೆಶಿಪ್ ಅಧಿಕಾರಿಗಳಿಗೆ ಶಾಸಕ ಮಂಜು ಸೂಚನೆ ನೀಡಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved