• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆರವಿಗೆ ಆಗ್ರಹಿಸಿ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ
ಕಬ್ಬಿಣದ ರಕ್ಷಣಾ ಬೇಲಿಗಳು ಮರದ ಬುಡ ಕಾಂಡದ ಒಳಗೆ ಸೇರಿಕೊಂಡಿದ್ದು ಮರದ ಬೆಳವಣಿಗೆಗೆ ತೊಂದರೆಯಾಗುತ್ತಿದೆ. ಈ ತಡೆ ರಿಂಗುಗಳನ್ನು ತೆರವು ಮಾಡಬೇಕೆಂದು ಆಗ್ರಹಿಸಿ ಮಲೆನಾಡು ರಕ್ಷಣಾ ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ನಗರದ ಸಂತೇಪೇಟೆ ವೃತ್ತದ ಬಳಿ ಇರುವ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈಗ ಆ ಮರಗಳು ಈಗ ಹೆಮ್ಮರವಾಗಿ ಬೆಳೆದಿದ್ದು, ಆ ರಕ್ಷಣೆ ಬೇಲಿಗಳು ಮರದ ಬುಡ ಕಾಂಡದ ಒಳಗೆ ಸೇರಿಕೊಂಡಿದ್ದು, ಮರದ ಬೆಳವಣಿಗೆಗೆ ತೊಂದರೆಯಾಗುತ್ತಿದ್ದು, ಈ ಒಂದು ತಡೆ ರಿಂಗುಗಳನ್ನು ತೆರವು ಮಾಡಿಕೊಡಬೇಕೆಂದು ಹಾಸನ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ದೇವನಹಳ್ಳಿ ಚಲೋಗೆ ಬಡಗಲಪುರ ನಾಗೇಂದ್ರ ಕರೆ
ಅನ್ಯಾಯದ ಭೂಸ್ವಾಧೀನ ವಿರೋಧಿಸಿ ಜೂನ್ ೨೫ರಂದು ದೇವನಹಳ್ಳಿ ಚಲೋ ಕರೆ ಕೊಟ್ಟಿರುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಮಾತಿಗೆ ತಪ್ಪಿದ ಸರ್ಕಾರದ ನೀತಿಯನ್ನು ಖಂಡಿಸಿ, ಭೂ ಸ್ವಾಧೀನವನ್ನು ಕೈ ಬಿಡಲೇಬೇಕೆಂದು ಆಗ್ರಹಿಸಿ ೨೫ರಂದು ಹಮ್ಮಿಕೊಂಡಿರುವ "ದೇವನಹಳ್ಳಿ ಚಲೋ " ಕಾರ್ಯಕ್ರಮದಲ್ಲಿ ರೈತ, ದಲಿತ, ಕಾರ್ಮಿಕ, ಮಹಿಳಾ, ಯುವಜನ ವಿದ್ಯಾರ್ಥಿ ಚಳವಳಿಗಾರರು ಅಲ್ಲದೇ ಪ್ರಗತಿಪರ ಹೋರಾಟಗಾರರು, ಸಾಹಿತಿ, ಕಲಾವಿದರು ರಾಜ್ಯದ ಮೂಲೆಮೂಲೆಗಳಿಂದಲೂ ದೇವನಹಳ್ಳಿಗೆ ಬಂದು ತಹಸೀಲ್ದಾರ್ ಕಚೇರಿಯ ಮುಂದೆ ಪ್ರತಿಭಟಿಸಲಿದ್ದಾರೆ ಎಂದರು.
ನವೀಕರಣಗೊಂಡ ಆರ್‌ಟಿಒ ಕಚೇರಿ ಉದ್ಘಾಟನೆ
ಸುಮಾರು ೬೩ ಲಕ್ಷ ರು. ವೆಚ್ಚದಲ್ಲಿ ನವೀಕರಣಗೊಂಡ ಕಟ್ಟಡ ಹಾಗೂ ದುರಸ್ತಿಗೊಂಡ ಆರ್‌.ಟಿ.ಒ. ಕಚೇರಿಯನ್ನು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಟೇಪ್ ಕತ್ತರಿಸಿ ಪೂಜೆ ಸಲ್ಲಿಸುವುದರ ಮೂಲಕ ಉದ್ಘಾಟಿಸಿದರು. ಆರ್‌.ಟಿ.ಒ ಕಚೇರಿ ದುರಸ್ತಿಯಲ್ಲಿತ್ತು. ಬಹಳ ಹಳೆಯದಾದ ಕಟ್ಟಡ. ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರನ್ನು ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಕೃಷ್ಣೇಗೌಡ ಮತ್ತು ಸಾರಿಗೆ ಅಧಿಕಾರಿ ರಾಜಕುಮಾರ್‌ ಅವರು ಸೇರಿದಂತೆ ಎಲ್ಲಾರೂ ಕೂಡ ಮನವಿ ಮಾಡಲಾಯಿತು. ನಂತರದಲ್ಲಿ ೬೩ ಲಕ್ಷ ರು. ಗಳ ಅನುದಾನ ಬಿಡುಗಡೆ ಮಾಡಿದರು. ಆರ್‌ಟಿಒ ಇಲಾಖೆ ದುರಸ್ತಿ ಮತ್ತು ಗುಣಮಟ್ಟದ ಹೊಸ ಕೊಠಡಿಯನ್ನು ಕೂಡ ನಿರ್ಮಿಸಿ ಉದ್ಘಾಟಿಸಲಾಗಿದೆ ಎಂದರು.
ಅವನತಿಯತ್ತ ಮಂಜರಾಬಾದ್‌ ತಾಲೂಕು ಕಚೇರಿ ಕಟ್ಟಡ
ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಹಳೆ ತಾಲೂಕು ಕಚೇರಿ ಕಟ್ಟಡದ ಮರಮುಟ್ಟುಗಳು ಪ್ರಕೃತಿಯ ಹೊಡೆತಕ್ಕೆ ಸಿಲುಕಿ ನಾಶವಾಗುತ್ತಿವೆ. ಹರಾಜು ವೇಳೆ ವ್ಯಕ್ತಿಯೊಬ್ಬರು ಮೂರು ಲಕ್ಷ ರು. ಗಳಿಗೆ ಈ ಮರಮುಟ್ಟುಗಳನ್ನು ಹರಾಜು ಕೂಗಿದ್ದರು. ಆದರೆ, ಮತ್ತಷ್ಟು ಹೆಚ್ಚಿನ ದರಕ್ಕೆ ಮರಮುಟ್ಟುಗಳು ಹರಾಜಾಗಲಿದೆ ಎಂದು ಅಂದಿನ ಕಂದಾಯ ಇಲಾಖೆ ಅಧಿಕಾರಿಗಳು ಈ ಹರಾಜನ್ನು ರದ್ದುಗೊಳಿಸಿದರು. ಆದರೆ, ಮತ್ತೊಮ್ಮೆ ಮರಮುಟ್ಟುಗಳನ್ನು ಹರಾಜು ನಡೆಸಲು ಇಚ್ಛಾಶಕ್ತಿ ತೊರದ ಅಧಿಕಾರಿಗಳು ನೆಲಂತಸ್ತಿಗೆ ಮತ್ತೆ ಈ ಮರಮುಟ್ಟುಗಳನ್ನು ಸಾಗಿಸಲು ನಿರ್ಲಕ್ಷ್ಯ ವಹಿಸಿದರು. ಪರಿಣಾಮ ಅಂದಿನಿಂದ ಬಿಸಿಲು, ಮಳೆಯಲ್ಲಿ ಈ ಮರಮುಟ್ಟುಗಳು ನೆನೆದು ಒಣಗಿ ಹಾಳಾಗುತ್ತಿದ್ದು ಸದ್ಯದ ಮಳೆಗೆ ಕೊಳೆತು ಹೋಗುತ್ತಿವೆ.
ತಾಯಿಯ ಹೆಸರಿನಲ್ಲಿ ಗಿಡ ನೆಡಿ
ಪ್ರತಿಯೊಬ್ಬರು ತಮ್ಮ ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವುದರಿಂದ ವಿಶ್ವಸಂಸ್ಥೆ ಘೋಷಣೆ ಹಾಗೂ ಕೇಂದ್ರ ಸರ್ಕಾರದ ಆದೇಶದಂತೆ 2025ನ್ನು ಅಂತಾರಾಷ್ಟ್ರೀಯ ರಾಷ್ಟ್ರೀಯ ಸಹಕಾರ ವರ್ಷದ ಕಾರ್ಯಕ್ರಮಗಳನ್ನು ಯಶಸ್ವಿ ಗೊಳಿಸಬೇಕು ಎಂದು ಕಾಮಧೇನು ಸಹಕಾರಿ ವಿದ್ಯಾಶ್ರಮದ ಅಧ್ಯಕ್ಷ ಮಾಧವ ಶೆಣೈ ತಿಳಿಸಿದರು. ಪರಿಸರ ಸಂರಕ್ಷಣೆ ಎಲ್ಲರ ಹೊಣೆ ಮುಂದಿನ ಪೀಳಿಗೆಗಾಗಿ ಪರಿಸರ ರಕ್ಷಣೆ ಮಾಡಬೇಕು, ಪ್ರಕೃತಿದತ್ತವಾಗಿ ಬಂದ ಎಲ್ಲಾ ವಸ್ತುಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡು ಉಳಿಸುವ ಕೆಲಸ ಮಾಡಬೇಕು ಎಂದರು.
ಬಾರ್‌ ಕ್ಯಾಷಿಯರ್‌ ಮೇಲೆ ಹಲ್ಲೆ: ದೂರು ದಾಖಲು
ಮದ್ಯಪಾನ ಮಾಡಿದ ಮೇಲೆ ಹಣ ನೀಡಿ ಸುಮ್ಮನೆ ಗಲಾಟೆ ಮಾಡಬೇಡಿ, ಬೇರೆ ಗ್ರಾಹಕರಿಗೆ ತೊಂದರೆಯಾಗುತ್ತದೆ ಎಂದು ನಾನು ಅವರಿಗೆ ಹೇಳಿದಾಗ ಏಕಾಏಕಿ ಕೌಂಟರ್ ನಲ್ಲಿ ಇದ್ದ ಬಾಟಲಿಯಿಂದ ನನ್ನ ಮುಖಕ್ಕೆ ಹಲ್ಲೆ ಮಾಡಿ ನಂತರ ದೊಣ್ಣೆಯಿಂದ ಹೊಡೆದರು. ಬಲವಾದ ಪೆಟ್ಟು ಬಿದ್ದ ಕಾರಣ ಮುಖದಲ್ಲಿ ದೊಡ್ಡ ಗಾಯವಾಗಿದ್ದು, ತುಟಿಗೆ ಬಲವಾದ ಪೆಟ್ಟು ಬಿದ್ದಿದೆ.
ಏಕಾಂಗಿ ಹೋರಾಟಗಾರ ತೀರ್ಥಪ್ಪ ಹೃದಯಾಘಾತದಿಂದ ಸಾವು
ಪ್ರತಿ ಊರುಗಳಲ್ಲಿ ಏಕಾಂಗಿ ಹೋರಾಟಗಾರ ತೀರ್ಥಪ್ಪನಂಥವರು ಇದ್ದರೆ ಆ ಊರು ಮತ್ತು ಪಂಚಾಯಿತಿಗಳು ಅಭಿವೃದ್ಧಿ ಆಗುತ್ತವೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಂ. ಮಂಜಪ್ಪ ತಿಳಿಸಿದರು. ಹೃದಯಾಘಾತದಿಂದ ನಿಧನರಾದ ತೀರ್ಥಪ್ಪನವರಿಗೆ ಹಳೇಬೀಡು ಪ್ರವಾಸ ಮಂದಿರದಲ್ಲಿ ನುಡಿನಮನಗಳನ್ನು ಸಲ್ಲಿಸುತ್ತಾ ಇಂಥ ವ್ಯಕ್ತಿಗಳು ಪ್ರತಿ ಊರು, ತಾಲೂಕು, ಜಿಲ್ಲೆಯಲ್ಲಿದ್ದರೆ ಅಭಿವೃದ್ಧಿ ಕಾಣುತ್ತವೆ. ತಾಲೂಕು ಕೇಂದ್ರ, ಜಿಲ್ಲಾ- ರಾಜ್ಯ ಕೇಂದ್ರಗಳಲ್ಲಿ ತಮ್ಮ ಮೌನ ಹೋರಾಟದಿಂದ ಹಲವಾರು ಸಾಧನೆ ಮಾಡಿರುವ ಏಕೈಕ ವ್ಯಕ್ತಿ ತೀರ್ಥಪ್ಪ. ಇವರಿಗೆ ನಮ್ಮ ನಮನ ಸದಾ ಇರಬೇಕೆಂದು ತಿಳಿಸಿದರು.
ಮರಸು ಕಾಲೋನಿ ಮುಖ್ಯ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ
ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ನಿರ್ವಹಿಸಬೇಕು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಸಲಹೆ ನೀಡಿದರು. ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಅಂತಹ ರಸ್ತೆಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ತಿಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅತಿ ಅವಶ್ಯಕವಿರುವ ರಸ್ತೆಗಳನ್ನು ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುವುದು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ: ಪ್ರವೀಣ್ ಗೌಡ
ಪ್ರಸ್ತುತ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳು ಬದುಕಿನಲ್ಲಿ ಪ್ರಬುದ್ಧತೆ ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬದಲು ಪುಸ್ತಕಗಳನ್ನು ಹಿಡಿಯಬೇಕು, ಜ್ಞಾನ ಸಂಪಾದಿಸಿ ಉತ್ತಮ ಭವಿಷ್ಯ ರೂಪಿಸಿಕೊಂಡು ದೇಶದ ಆಸ್ತಿಯಾಗಬೇಕು.
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣೆ
ಖಾಸಗಿ ಶಾಲೆಗಳ ಪೈಪೋಟಿ ನಡುವೆ ಮಕ್ಕಳ ಕೊರತೆಯಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಹೋಬಳಿಯ ಅಂಗಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿಯಿಂದ ೭ನೇ ತರಗತಿವರೆಗೂ ಇರುವ ಸುಮಾರು ೧೯೪ ವಿದ್ಯಾರ್ಥಿಗಳಿದ್ದು ಅದರಲ್ಲಿ ಎಲ್‌ಕೆಜಿ ಮತ್ತು ಯುಕೆಜಿಗೆ ಸುಮಾರು ೩೦ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಶಾಲೆಗೆ ಒಂದು ಚಾರ್ಜಬಲ್ ಸ್ಪೀಕರ್‌ ಹಾಗೂ ಒಂದು ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡುವುದಾಗಿ ಶಿವಕುಮಾರ ತಿಳಿಸಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved