• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿ
ಸಾರ್ವಜನಿಕರು ಸಂಚಾರಿ ನಿಯಮಗಳು ಮತ್ತು ಸೂಚನೆಗಳನ್ನು ಪಾಲಿಸಿದಲ್ಲಿ ಬಹಳಷ್ಟು ಅಪಘಾತಗಳನ್ನು ತಡೆಯಬಹುದೆಂದು ಗ್ರಾಮಾಂತರ ವೃತ್ತ ನಿರೀಕ್ಷಕ ಅರುಣ್ ಕುಮಾರ್ ತಿಳಿಸಿದರು. ಕಂಪ್ಯೂಟರ್ ಅಥವಾ ಮೊಬೈಲ್ ಫೋನ್ ಬಳಸಿಕೊಂಡು ತಪ್ಪೆಸಗುವುದೂ ಕೂಡ ಸೈಬರ್ ಕ್ರೈಮ್ ಅನ್ವಯ ಅಪರಾಧವಾಗುತ್ತದೆ. ಈಗ ಪೋಕ್ಸೋ ಕಾಯಿದೆ ಜಾರಿಗೆ ಬಂದಿದ್ದು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಯಾವುದೇ ವ್ಯಕ್ತಿಗೆ ಕಠಿಣ ಸಜೆಗೆ ಗುರಿ ಮಾಡಲಾಗುತ್ತದೆ. ಆದ್ದರಿಂದ ಹದಿಹರೆಯದ ವಯಸ್ಸಿನಲ್ಲಿರುವ ತಾವುಗಳು ಇಂತಹ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ ತಮ್ಮ ಉಜ್ವಲ ಭವಿಷ್ಯ ನಾಶವಾಗುತ್ತದೆಂದು ಎಚ್ಚರಿಸಿದರು.
ಹಾಸನ : ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಸಂಸದ ಶ್ರೇಯಸ್ ಎಂ. ಪಟೇಲ್ ತಿರುಗೇಟು

ಎರಡು ಮೂರು ಬಾರಿ ಸಚಿವರು, ಐದಾರು ಬಾರಿ ಶಾಸಕರಾಗಿರುವವರ ರೀತಿ ಮಾತನಾಡಿದ್ದಾರೆ. ಜೊತೆಗೆ ವಾಗ್ಮಿ, ದೊಡ್ಡ ಮೇಧಾವಿಗಳ ಥರ ಮಾತನಾಡಿದ್ದಾ   ಎಂದು ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಸಂಸದ ಶ್ರೇಯಸ್‌ ಪಟೇಲ್‌ ವಾಗ್ದಾಳಿ ನಡೆಸಿದ್ದಾರೆ.

ಹೆತ್ತವರನ್ನು ಗುರು ಹಿರಿಯರನ್ನು ವಿದ್ಯಾರ್ಥಿಗಳು ಗೌರವಿಸಿ
ತಂದೆ, ತಾಯಿ ಗುರು- ಹಿರಿಯರನ್ನು ಗೌರವಿಸಬೇಕು. ನಿಮ್ಮ ಮಕ್ಕಳಿಗೆ ಉತ್ತಮ ವಿಚಾರವನ್ನು ತಿಳಿಸಿಕೊಟ್ಟು ಗುಣಮಟ್ಟ ಶಿಕ್ಷಣ ನೀಡಿ ಎಂದು ಹಿರಿಯ ಶಿಕ್ಷಕ ವೀರಭದ್ರಪ್ಪ ಬಿ.ಪಿ ಹೇಳಿದರು. ಬಸವಾಪಟ್ಟಣ ಸಮೀಪದ ಕೇರಳಾಪುರ ಗ್ರಾಮದ ಶ್ರೀವಿದ್ಯಾಗಣಪತಿ ಪ್ರೌಢಶಾಲೆಯಲ್ಲಿ ೧೯೯೩-೯೪ನೇ ಸಾಲಿನ ಹಿರಿಯ ವಿದ್ಯಾರ್ಥಿಗಳಿಂದ ಬಿ.ಜಿ.ಎಸ್ ಕಲ್ಯಾಣ ಮಂಟಪದಲ್ಲಿ ಗುರು ನಮನ ಕಾರ್ಯಕ್ರಮ ನಡೆಯಿತು.
ಸುತ್ತೂರು ಜಾತ್ರಾ ಪ್ರಚಾರ ರಥಕ್ಕೆ ಬೇಲೂರಿನಲ್ಲಿ ಸ್ವಾಗತ
ಮೈಸೂರಿನ ಸುತ್ತೂರು ಕ್ಷೇತ್ರದ ಶಿವರಾತ್ರಿಶ್ವರ ಶಿವಯೋಗಿ ಜಾತ್ರಾ ಮಹೋತ್ಸವ ಜ ೨೬ ರಿಂದ ೩೧ರ ತನಕ ನಡೆಯಲಿದ್ದು, ನಾಡಿನ ಭಕ್ತರು ಭಾಗವಹಿಸಲಿ ಎಂಬ ಉದ್ದೇಶದಿಂದ ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರ ರಥ ವಿವಿಧ ಭಾಗದಲ್ಲಿ ಸಂಚರಿಸಿ, ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಇಲ್ಲಿನ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮಠದ ಅಭಿಮಾನಿಗಳು ಬರಮಾಡಿಕೊಂಡರು.
ಕಾಮಗಾರಿ ಚುರುಕುಗೊಳಿಸಲು ಡೀಸಿ ಸೂಚನೆ
ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಮಳೆಗಾಲದ ಸಮಯದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಸರ್ಕಾರದ ಮಾರ್ಗಸೂಚಿಯಂತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭೂ ಕುಸಿತ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದರು.
ಸಬ್‌ ರಿಜಿಸ್ಟ್ರಾರ್‌ನಲ್ಲಿ ಮದುವೆಯಾಗಿದೆ
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೋಟೆಲ್‌ ಮುಂದೆ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಭವಾನಿ ತನಗೂ ಮನುಕುಮಾರ್‌ಗೂ ವರ್ಷದ ಹಿಂದೆಯೇ ಮದುವೆಯಾಗಿದೆ. ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲೇ ನಾವು ಮದುವೆಯಾಗಿದ್ದೇವೆ ಎನ್ನುವ ಸತ್ಯವನ್ನು ಆರೋಪಿ ಹೊರಹಾಕಿದ್ದಾಳೆ. ಮನುಕುಮಾರ್‌ ಮತ್ತು ತನಗೂ 2023ರ ನವೆಂಬರ್‌ 1ರಂದೇ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಮದುವೆಯಾಗಿದೆ ಎಂದು ಬಹಿರಂಗಗೊಳಿಸಿದ್ದಾಳೆ.
ಹಾಸನ ಸಾಹಿತ್ಯೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಮನವಿ
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಜ.6 ಮತ್ತು 7ರಂದು ಆಯೋಜನೆಗೊಳ್ಳುತ್ತಿರುವ ಹಾಸನ ಸಾಹಿತ್ಯೋತ್ಸವ-೨೦೨೫ಕ್ಕೆ ಚನ್ನರಾಯಪಟ್ಟಣ ತಾಲೂಕಿನ ಪರಿಷತ್ತಿನ ಅಜೀವ ಸದಸ್ಯರು, ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಶಿಕ್ಷಕರು, ನೌಕರರು, ಸೇರಿದಂತೆ ಎಲ್ಲ ಕನ್ನಡ ಮನಸುಗಳು ಆಗಮಿಸಿ ಸಾಹಿತ್ಯೋತ್ಸವವನ್ನು ಯಶ್ವಸಿಗೊಳಿಸಬೇಕೆಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮನವಿ ಮಾಡಿದರು. ಎರಡು ದಿನಗಳು ಜಿಲ್ಲಾ ಕೇಂದ್ರದಲ್ಲಿ ನಡೆಯುವ ಸಾಹಿತ್ಯೋತ್ಸವವು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಇತಿಹಾಸವನ್ನು ಯಾರೂ ಮರೆಯಬಾರದು
207ನೇ ಭೀಮ ಕೋರೆಗಾಂವ್ ವಿಜಯ ದಿವಸವನ್ನು ಆಲೂರು ತಾಲೂಕು ಚಲವಾದಿ ಮಹಾಸಭದ ವತಿಯಿಂದ ತಾಲೂಕು ಕಚೇರಿ ಮುಂಭಾಗವಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ವಿಜಯೋತ್ಸವ ದಿನವನ್ನು ಆಚರಿಸಲಾಯಿತು. ಯಾರೂ ಸಹ ಇತಿಹಾಸವನ್ನು ಯಾರು ಸಹ ಮರೆಯಬಾರದು ಎಂದು ಅವರು ಪ್ರತಿಯೊಬ್ಬರೂ ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕೆಂದು ತಿಳಿಸಿದರು.
ಪುರಭವನ ಪೂರ್ಣಗೊಳಿಸಲು ಶೀಘ್ರ ಕ್ರಮ
ಪ್ರಗತಿ ಹಂತದಲ್ಲಿರುವ ಪುರಭವನ ನಿರ್ಮಾಣಕ್ಕೆ ಪುರಸಭೆಯಿಂದಲೇ ₹೩ ಕೋಟಿ ವಿನಿಯೋಗಿಸಿ ಈ ಅವಧಿಯಲ್ಲೇ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪುರಸಭೆ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಪುರಸಭೆ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಒಂದು ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು. ಕಳೆದ ಸಭೆಯಲ್ಲಿ ಪ್ರತಿ ವಾರ್ಡ್‌ಗೆ ನಿಗದಿಯಾಗಿದ್ದ ಕಾಮಗಾರಿಗಳಿಗೆ ಇನ್ನು ೧೫ ದಿನದಲ್ಲಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪುರಸಭೆ ವ್ಯಾಪ್ತಿಯಲ್ಲಿ ಎಲ್ಲಿ ಬೀದಿ ದೀಪಗಳ ಕೊರತೆ ಇದೆಯೋ ಅಲ್ಲಿ ಹೊಸ ದೀಪ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಆಲೂರು ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಅಕ್ರಮ
2025-2030ನೇ ಅವಧಿಯ ಆಲೂರು ಪಿ.ಎಲ್.ಡಿ ಬ್ಯಾಂಕ್ ಕಾರ್ಯಕಾರಿ ಮಂಡಳಿಯ ಚುನಾವಣೆಯಲ್ಲಿ ಬ್ಯಾಂಕಿನ ಷೇರುದಾರರಿಗೆ ಮತದಾನದ ಹಕ್ಕನ್ನು ನೀಡದೆ, ಅವೈಜ್ಞಾನಿಕವಾಗಿ ಮತದಾರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಯಾವುದೇ ಮಾಧ್ಯಮಗಳ ಮೂಲಕವಾಗಲಿ ಅಥವಾ ಕರಪತ್ರಗಳ ಮೂಲಕವಾಗಲಿ, ಚುನಾವಣೆಯ ಪ್ರಕಟಣೆಯನ್ನು ಹೊರಡಿಸದೆ ಗೌಪ್ಯವಾಗಿ ಚುನಾವಣಾ ಪ್ರಕ್ರಿಯೆಯನ್ನು ನಡೆಸುತ್ತಿರುವುದು ಕಾನೂನು ಬಾಹಿರವಾಗಿದೆ. ತಕ್ಷಣ ಈ ಚುನಾವಣೆಯ ಪ್ರಕ್ರಿಯೆಯನ್ನು ನಿಲ್ಲಿಸಿ ಕಾನೂನುಬದ್ಧವಾಗಿ ಚುನಾವಣೆಯನ್ನು ನಡೆಸುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹಿಸಿದೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved