• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯಿಂದ ನೆರವೇರಿದ ನಾಗರ ನವಿಲೆ ಶ್ರೀ ಕೆಂಪಮ್ಮ ದೇವಿ ರಥೋತ್ಸವ
ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ರಥೋತ್ಸವಕ್ಕೂ ಮುನ್ನ ಗ್ರಾಮದ ರಾಜಬೀದಿಗಳಲ್ಲಿ ಮಂಗಳವಾದ್ಯದೊಂದಿಗೆ ಶ್ರೀ ಕೆಂಪಮ್ಮ ದೇವಿಯವರ ಉತ್ಸವ ನಡೆಯಿತು. ಸಂಪ್ರದಾಯದಂತೆ ರಥದ ಸುತ್ತ ದೇವರ ಪ್ರದಕ್ಷಿಣೆ ನಡೆಸಿ ನಂತರ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಲಾಯಿತು. ಪೂಜಾ ವಿಧಿವಿಧಾನಗಳು ನೆರವೇರಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ರಥಕ್ಕೆ ಹಣ್ಣು ದವನ ಎಸೆಯೋ ಮೂಲಕ ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಬದುಕುವ ಕೌಶಲ್ಯದ ಜೊತೆಗೆ ಬದುಕಿಸುವ ಕೌಶಲ್ಯ ಕಲಿಯಬೇಕು
ಜೀವ ರಕ್ಷಕ ಕಲೆಯ ಜ್ಞಾನ ಮತ್ತು ಮೌಲ್ಯಯುತ ಶಿಕ್ಷಣ ಕೊಡುವ ನೇರವಾದ ಏಕೈಕ ಸಂಸ್ಥೆ ಸ್ಕೌಟ್ಸ್ ಅಂಡ್ ಗೈಡ್ಸ್ ಎಂದು ಹಾಸನ ಜಿಲ್ಲಾ ರೋವರ್ ಮತ್ತು ರೇಂಜರ್ ವಿಭಾಗದ ಕೇಂದ್ರ ಸ್ಥಾನೀಯ ಆಯುಕ್ತರಾದ ಡಾ. ಜಿ.ಡಿ. ನಾರಾಯಣ ಅಭಿಪ್ರಾಯಪಟ್ಟರು. ಸ್ಕೌಟ್ಸ್‌ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್‌ಗಳಿಗೆ ಸೇವೆ ಎಂಬುದು ಪ್ರಧಾನವಾಗಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಎಲ್ಲ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಣದ ಜಾಗೃತಿ ಮತ್ತು ಮಹತ್ವ ಉಪಯೋಗವನ್ನು ತಿಳಿಸಿದರು.
ತಹಸೀಲ್ದಾರ್‌ ಭ್ರಷ್ಟಾಚಾರ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ
ಆಡಿಯೋ ಒಂದರಲ್ಲಿ ತಹಸೀಲ್ದಾರ್ ಅವರು ೧೦೦ ಕೋಟಿ ರು. ಹಣ ಮಾಡಿಕೊಂಡು ನಿವೃತ್ತಿ ಹೊಂದುವ ಬಗ್ಗೆ ಮಾತನಾಡಿದ್ದಾರೆ. ಇದು ನಮಗೆ ಆತಂಕ ತಂದಿದೆ. ತಾಲೂಕು ದಂಡಾಧಿಕಾರಿಗಳೇ ಈ ರೀತಿ ಹೇಳಿದರೆ ಹೇಗೆ? ಭ್ರಷ್ಟಾಚಾರದ ಆಳ, ಉದ್ದ ಅಳತೆ ಮಾಡಲಾಗುತ್ತಿಲ್ಲ, ನಮಗೆ ನ್ಯಾಯ ಸಿಗುವುದಾದರೂ ಹೇಗೆ, ಜಿಲ್ಲಾಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಂಡು ಇಲ್ಲಿಂದ ಎತ್ತಂಗಡಿ ಮಾಡಬೇಕು. ತಹಸೀಲ್ದಾರ್ ಹಠಾವು ಚನ್ನರಾಯಪಟ್ಟಣ ಬಚಾವೋ ಕಾರ್ಯಕ್ರಮ ನಮ್ಮದಾಗಿದೆ. ತಾಲೂಕು ಆಡಳಿತವನ್ನು ಸರಿದಾರಿಗೆ ತರುವುದು ಜನಪ್ರತಿನಿಧಿಗಳ ಕರ್ತವ್ಯ, ಈ ನಿಟ್ಟಿನಲ್ಲಿ ಅವರು ಸೋತಿದ್ದಾರೆ ಎಂಬ ಮಾತುಗಳನ್ನಾಡಿದರು.
ಉಳಿದ ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲಿರುವ ಚಂದ್ರೇಗೌಡ
ಅವಿಶ್ವಾಸ ನಿರ್ಣಯದ ವಿರುದ್ಧ ೧೩ ಸದಸ್ಯರ ಬೆಂಬಲ ಬೇಕಾಗಿದ್ದು, ಅವಿಶ್ವಾಸ ನಿರ್ಣಯದ ವಿರುದ್ಧ ಕಾಂಗ್ರೆಸ್ ಮತ್ತು ಬಿಜೆಪಿ ಒಟ್ಟಾಗಿ ೧೬ ಸದಸ್ಯರು ಬೆಂಬಲ ಸೂಚಿಸಿದ ಕಾರಣ ಅವಿಶ್ವಾಸ ನಿರ್ಣಯ ಅಸಿಂಧುವಾಗಿದೆ ಎಂದು ಆಯುಕ್ತ ರಮೇಶ್ ಪ್ರಕಟಣೆಯಲ್ಲಿ ಘೋಷಣೆ ಮಾಡಿದರು. ಅವಿಶ್ವಾಸ ನಿರ್ಣಯದ ನಂತರ ಹಾಲಿ ಅಧ್ಯಕ್ಷ ಚಂದ್ರೇಗೌಡ ಅವರು ಹಾಲಿ ಅಧ್ಯಕ್ಷರಾಗಿ ಮುಂದುವರಿದರು. ನಂತರ ಬಿಜೆಪಿ ಪಕ್ಷದ ನಗರಸಭೆ ಸದಸ್ಯರು ಮಾಜಿ ಶಾಸಕ ಪ್ರೀತಂ ಜೆ ಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ಪರ ಜೈಕಾರ ಘೋಷಣೆ ಕೂಗಿದರು. ಕೆಲ ಸದಸ್ಯರು ಟೇಬಲ್ ಬಡಿದರು.
ಬಳದರೆ ಸೊಸೈಟಿಗೆ ಅಧ್ಯಕ್ಷರಾಗಿ ಮಂಜೇಗೌಡ ಆಯ್ಕೆ
ದಂಡಿನಗಹಳ್ಳಿ ಹೋಬಳಿ ಬಳದರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಯು.ಎಸ್.ಮಂಜೇಗೌಡ, ಉಪಾಧ್ಯಕ್ಷೆಯಾಗಿ ಚಂದ್ರಮ್ಮ ಅವಿರೋಧವಾಗಿ ಆಯ್ಕೆಯಾದರು. ಬಳದರೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಮಂಜೇಗೌಡ ಮಾತನಾಡಿ, ಸಂಘವು ೧೦.೩೧ ಲಕ್ಷ ರು. ಆದಾಯದಲ್ಲಿದೆ, ಸಂಘದಲ್ಲಿ ೨೬೬೯ ಮಂದಿ ಷೇರುದಾರರಿದ್ದು ೧.೦೩ ಕೋಟಿ ಷೇರು ಬಂಡವಾಳವಿದೆ, ಸುಮಾರು ೧೯೭ ಮಂದಿ ಕೃಷಿಕರಿಗೆ ೮.೮೨ ಕೋಟಿ ಸಾಲ ನೀಡಲಾಗಿದೆ. ಸ್ತ್ರೀಶಕ್ತಿ ಸಂಘ ಸೇರಿದಂತೆ ಇತರೆ ಸಾಲವಾಗಿ ೧.೪೧ ಕೋಟಿ ನೀಡಲಾಗಿದೆ. ಕ್ಷೇತ್ರದ ಶಾಸಕರಾದ ರೇವಣ್ಣ ಹಾಗೂ ಎಂಎಲ್‌ಸಿ ಡಾ.ಸೂರಜ್ ರೇವಣ್ಣ ಅವರ ಸಹಕಾರದಲ್ಲಿ ಹೊಸದಾಗಿ ಸಾಲ ನೀಡಲಾಗುವುದು ಎಂದರು.
ತೂಕದಲ್ಲಿ ಮೋಸ ಮಾಡಿದರೆ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ
ರೈತರಿಗೆ ತೂಕದಲ್ಲಿ ಮೋಸ ಅಥವಾ ತೊಂದರೆ ಕೊಟ್ಟರೆ ಗುತ್ತಿಗೆದಾರ, ಹಮಾಲಿಗಳ ಮತ್ತು ನಿನ್ನ ಸೇರಿಸಿ, ಹಮಾಲಿಗಳ ಮೇಲೂ ಎಫ್‌ಐಆರ್‌ ದಾಖಲಿಸಲು ಸೂಚಿಸಬೇಕಾಗುತ್ತದೆ ಎಂದು ಶಾಸಕ ಎಚ್.ಡಿ.ರೇವಣ್ಣ ರಾಗಿ ಖರೀದಿ ಕೇಂದ್ರದ ಅಧಿಕಾರಿ ಶಾಮಿದ್ ಅಲಿಗೆ ಎಚ್ಚರಿಕೆ ನೀಡಿದರು. ಇಲ್ಲಿಯ ತನಕ ನೀವು ಏನು ಮಾಡಿದ್ದೀರೊ ಗೊತ್ತಿಲ್ಲ, ದೂರು ಬಂದಿದೆ, ತೊಂದರೆ ನೀಡುವ ಹಮಾಲಿಗಳನ್ನು ತೆಗೆದಾಕಿ ಮತ್ತು ಅಗತ್ಯ ಕ್ರಮಕೈಗೊಂಡು ರೈತರಿಗೆ ಅನ್ಯಾಯವಾಗದಂತೆ ಜಾಗ್ರತೆ ವಹಿಸಿ, ಪುನಃ ದೂರು ಬಂದರೆ ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದರು.
ನಮ್ಮೂರು ನಮ್ಮ ಕೆರೆ ಯೋಜನೆಯಡಿ ಶಿವನೇನಳ್ಳಿ ಕೆರೆ ಜೀರ್ಣೋದ್ಧಾರಕ್ಕೆ ಚಾಲನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧರ್ಮಸ್ಥಳ ಸಂಸ್ಥೆಯಿಂದ ಪುನಶ್ಚೇತನ ಮಾಡುತ್ತಿದ್ದು, ಬೇಲೂರು ತಾಲೂಕಿನಲ್ಲಿ ೮ ಕೆರೆಗಳ ಅಭಿವೃದ್ಧಿ ಮಾಡಿರುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ೨೦೧೬ರಿಂದ ರಾಜ್ಯಾದ್ಯಂತ ಕೆರೆ ಪುನಶ್ಚೇತನ ಕಾರ್ಯಕ್ರಮ ನಡೆದಿದೆ. ರಾಜ್ಯದ ಬಯಲು ಸೀಮೆಯ ಹಳ್ಳಿಗಳಿಂದ ಅನೇಕ ರೈತ ಕುಟುಂಬಗಳು ಧರ್ಮಸ್ಥಳಕ್ಕೆ ಬಂದು ಪೂಜ್ಯರಲ್ಲಿ ನೀರಿನ ಸಮಸ್ಯೆಯ ಮತ್ತು ಬರಗಾಲದ ಬಗ್ಗೆ ಅಳಲನ್ನು ತೊಡಿಕೊಂಡಿರುತ್ತಾರೆ ಎಂದರು.
ಪಹಲ್ಗಾಮ್‌ ಘಟನೆ ಖಂಡಿಸಿ ಬೇಲೂರಿನಲ್ಲಿ ವರ್ತಕರ ಸಂಘದಿಂದ ಪ್ರತಿಭಟನೆ
ಪಾಕಿಸ್ತಾನ ಒಂದು ನರಹಂತಕ ದೇಶವಾಗಿದ್ದು, ಭಯೋತ್ಪಾದಕರನ್ನು ತಯಾರು ಮಾಡುವ ಕಾರ್ಖಾನೆಯಾಗಿದೆ ಎಂದು ಔಷಧಿ ವ್ಯಾಪಾರಿಗಳ ಸಂಘದ ನಿರ್ದೇಶಕ ಮಲ್ಲಿಕಾರ್ಜುನ ಮೆಡಿಕಲ್ ಸುಬ್ರಹ್ಮಣ್ಯ ಹೇಳಿದರು. ಇಲ್ಲಿಯೇ ಹುಟ್ಟಿ ಇಲ್ಲಿ ಬೆಳೆದ ಕೆಲ ರಾಜಕಾರಣಿಗಳಿಗೆ ಆ ದೇಶವನ್ನು ಓಲೈಕೆ ಮಾಡುವವರಿಗೆ ನಾಚಿಕೆಯಾಗಬೇಕು. ನಮ್ಮ ರಾಜ್ಯದ ಮಂತ್ರಿಯೊಬ್ಬರು ಪಾಪಿಸ್ಥಾನ ಪಾಪ ಎನ್ನುವವರು ತಾಕತ್ತಿದ್ದರೆ ಅಲ್ಲೇ ಹೋಗಿ ನೆಲೆಸಲಿ. ಪಾಪಿಗಳನ್ನು ಬಗ್ಗು ಬಡಿಯಲು ಹೊರಟಿರುವ ಪ್ರಧಾನಿಯವರಿಗೆ ನಾವೆಲ್ಲರೂ ಬೆಂಬಲ ಸೂಚಿಸೋಣ ಎಂದರು.
ಪಹಲ್ಗಾಮ್‌ ದುರಂತದಲ್ಲಿ ಪಾರಾದ ಉದ್ಯಮಿ
ಪಟ್ಟಣದ ಖ್ಯಾತ ಉದ್ಯಮಿ ಅತ್ರಿ ಪ್ರಭಾಕರ್ ಅವರು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಹಿಂದೂಗಳ ಮಾರಣಹೋಮ ನಡೆದ ಸಂದರ್ಭದಿಂದ ಕೆಲ ನಿಮಿಷಗಳ ಹಿಂದೆ ಹೊರಟು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಮೇ 20 ರಂದು ದೇಶಪ್ರೇಮಿ ಮುಷ್ಕರ
ನಗರದ ಆರ್.ಸಿ ರಸ್ತೆಯ ಶ್ರಮ ಕಛೇರಿಯಲ್ಲಿ ಮೇ ೩೦ ರಂದು ಕಾರ್ಮಿಕರ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರದ ಸಿದ್ದಾತಾ ಸಭೆ ಭಾನುವಾರ ನಡೆಯಿತು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved