• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಲೆ ಏರುವ ಆಸೆಯಲ್ಲಿ ಕಾಫಿ ಇಟ್ಟು ಕೆಟ್ಟ ಬೆಳೆಗಾರ
ಕಾಫಿ ಮಾರಾಟ ಮಾಡದ ಬೆಳೆಗಾರರ ಸ್ಥಿತಿ ಈಗ ಬಾಣಲೆಯಿಂದ ಬೆಂಕಿಗೆಬಿದ್ದಂತಾಗಿದೆ. ಧಾರಣೆ ಇದ್ದ ಕಾಲದಲ್ಲಿ ಮಾರಾಟ ಮಾಡದೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದ ಬೆಳೆಗಾರರು ಈಗ ಬೆಲೆ ಇಳಿಕೆಯಿಂದ ಸೃಷ್ಟಿಯಾಗಿರುವ ನಷ್ಟದೊಂದಿಗೆ ಗುಣಮಟ್ಟದೊಂದಿಗೂ ರಾಜಿ ಮಾಡಿಕೊಳ್ಳಬೇಕಾದ ಕಡುಕಷ್ಟಕ್ಕೆ ಸಿಲುಕಿದ್ದಾರೆ. ನಿರಂತರ ಬೆಲೆ ಇಳಿಕೆಯಿಂದ ಬೆಳೆಗಾರರಿಗೆ ಭಾರಿ ನಷ್ಟ ಕಣ್ಮುಂದೆ ಕಾಣುತ್ತಿದ್ದರು. ಗುಣಮಟ್ಟ ಹಾಳಾಗುವುದರಿಂದ ಬೆಳೆಗಾರರು ಕಾಫಿ ಮಾರಾಟ ಮಾಡಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದ್ದಾರೆ.
ಸೇನೆಗೆ ಸೇರಿದ ಕೌಶಿಕ್‌ಗೆ ಹುಟ್ಟೂರಲ್ಲಿ ಸನ್ಮಾನ
ಕೌಶಿಕ್ ಅವರು ಪ್ರಾಥಮಿಕ ಶಿಕ್ಷಣವು ನಮ್ಮ ಗ್ರಾಮದಲ್ಲಿ ಮುಗಿಸಿ ಹೈಸ್ಕೂಲ್ ಹಾಗೂ ಉನ್ನತ ಶಿಕ್ಷಣವನ್ನು ಬೇಲೂರಿನಲ್ಲಿ ಮುಗಿಸಿದ್ದು ಅವರು ಮೊದಲಿಂದನೂ ಯೋಧನಾಗಬೇಕೆನ್ನುವ ಆಸೆಯನ್ನು ಇಟ್ಟುಕೊಂಡಿದ್ದರು. ಅದೇ ರೀತಿ ಯೋಧರಾಗಿದ್ದಾರೆ. ದೇಶ ಸೇವೆ ಮಾಡಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಈ ದಿನ ನಮ್ಮ ಗ್ರಾಮದ ಯುವಕನಿಗೆ ದೇಶ ಸೇವೆ ಮಾಡುವ ಭಾಗ್ಯ ಒಲಿದಿದೆ ಎಂದು ಸನ್ಮಾನಿಸಲಾಯಿತು.
ಯೋಗ ಕೂಟದಿಂದ ಯೋಗ ತರಬೇತಿ
ಪತಂಜಲಿ ಯೋಗ ಕೂಟದ ಅನೇಕರು ಅತ್ಯುತ್ತಮ ಯೋಗ ಪಟುಗಳಿದ್ದು ಅವರ ಜೊತೆಯಲ್ಲಿ ಹೊಸಬರಿಗೂ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ. ಯೋಗ ಶಿಕ್ಷಕ ಗಣೇಶ್ ಬಾಬು ಯೋಗಾಸನ ಹೇಳಿಕೊಡುವ ಜತೆಗೆ ಪ್ರತೀ ಆಸನ ಮಾಡುವಾಗಲೂ ಆ ಆಸನದಿಂದ ದೊರೆಯುವ ಪ್ರಯೋಜನಗಳ ಬಗ್ಗೆ ವಿವರಿಸುತ್ತಾರೆ. ಯೋಗಾಸನ ನಮ್ಮ ದೈಹಿಕ ಆರೋಗ್ಯ ಕಾಪಾಡಿ, ದೇಹವನ್ನು ರೋಗ ಮುಕ್ತವಾಗಿಸುತ್ತದೆ. ಪ್ರಾಣಾಯಾಮ ನಮ್ಮ ಶ್ವಾಸಕೋಶ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಧ್ಯಾನ ನಮ್ಮ ಮೆದುಳಿಗೆ ವಿಶ್ರಾಂತಿ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಯೋಗದ ಮಹತ್ಬ ತಿಳಿಸಿ, ಅರಿವು ಮೂಡಿಸುತ್ತಾರೆ.
ಜಿಲ್ಲೆಯಲ್ಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳು
ಜಿಲ್ಲೆಯಲ್ಲಿ ಯುವಕರು ಮತ್ತು ಮಕ್ಕಳಲ್ಲಿ, ಹೃದಯಾಘಾತ ಪ್ರಕರಣಗಳ ಆತಂಕಕಾರಿ ಏರಿಕೆಯ ಕುರಿತು ಸಂಸದ ಶ್ರೇಯಸ್ ಎಂ. ಪಟೇಲ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರು ತಕ್ಷಣದ ಮತ್ತು ಸಮನ್ವಯದ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಕರೆ ನೀಡಿದ್ದಾರೆ. ವೈದ್ಯಕೀಯ ತಂತ್ರಜ್ಞರಿಗೆ ವಿಶೇಷ ತರಬೇತಿ ಕಾರ್ಯಕ್ರಮವು ಈ ವಾರದಿಂದ ಪ್ರಾರಂಭವಾಗಲಿದೆ. ವೈದ್ಯಕೀಯ ಸಲಹೆಗಳ ಅನುಷ್ಠಾನದ ಬಗ್ಗೆ ಸಭೆಯಲ್ಲಿ ವೈದ್ಯಕೀಯ ವೃತ್ತಿಪರರು ನೀಡಿದ ಸಲಹೆಗಳನ್ನು ಜಾರಿಗೆ ತರಲು ಆಡಳಿತವು ಆದ್ಯತೆ ನೀಡಲಿದೆ.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಸ್ವರೂಪ್ ದಿಢೀರ್ ಭೇಟಿ
ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳಿಗೆ ವ್ಯವಸ್ಥಿತವಾಗಿ ನಿಲುಗಡೆಗೆ ಸೂಚನೆ ನೀಡಬೇಕು ಹಾಗೂ ಖಾಸಗಿ ವಾಹನಗಳು ಬಸ್ ನಿಲ್ದಾಣದ ಒಳಗೆ ಬಾರದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬಸ್ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆಯಿಂದ ದುರ್ವಾಸನೆ ಬರುತ್ತಿದ್ದು ಇದರಿಂದ ಪ್ರಯಾಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ರಾಜಕಾಲುವೆ ಮೇಲೆ ಸ್ಲ್ಯಾಬ್ ಅಳವಡಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಲು ನಗರಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಹೇಳಿದರು.
ಮಳೆಗೆ ಕುಸಿದು ಬಿದ್ದ ಅರೇಹಳ್ಳಿ ಶಾಲೆ ಕಾಂಪೌಂಡ್‌
ಮಲೆನಾಡು ಭಾಗವಾದ ಅರೇಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಮುಂಗಾರುಮಳೆ ಚುರುಕುಗೊಂಡಿದ್ದು ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಸರ್ಕಾರಿ ಶಾಲೆಯ ಕಾಂಪೌಂಡ್ ಕುಸಿದುಬಿದ್ದಿದೆ. ಗಾಳಿ, ಮಳೆ, ಬಿರುಗಾಳಿಯಿಂದ ಗೋಡೆಯ ಸಾಮರ್ಥ್ಯ ಕಡಿಮೆಯಾಗಿದ್ದಲ್ಲದೆ ಕೆಲವೊಮ್ಮೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸುವಾಗ ಸರಿಯಾದ ಗುಣಮಟ್ಟದ ವಸ್ತುಗಳನ್ನು ಬಳಸದೆ ಇರುವುದು ಅಥವಾ ಸೂಕ್ತ ಎಂಜಿನಿಯರಿಂಗ್ ಮಾನದಂಡಗಳನ್ನು ಪಾಲಿಸದಿರುವುದೇ ಇದಕ್ಕೆ ಕಾರಣವಾಗಿರಬಹುದು. ಮಣ್ಣು ಸಡಿಲವಾಗಿದ್ದಾಗ ಅಥವಾ ಅಡಿಪಾಯವನ್ನು ಸರಿಯಾಗಿ ವಿನ್ಯಾಸಗೊಳಿಸಲಿದ್ದಾಗ ಭಾರಿ ಮಳೆಯಿಂದಾಗಿ ದೊಡ್ಡ ಕುಸಿತಕ್ಕೆ ಕಾರಣವಾಗಿದೆ.
ಕೆಂಪೇಗೌಡ ಜಯಂತಿಯ ಅದ್ಧೂರಿ ಆಚರಣೆಗೆ ಸಹಕಾರ ಕೊಡಿ

ಈ ಬಾರಿಯ ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಸಮಾಜದ ಮುಖಂಡರು ಸಹಕಾರ ನೀಡಬೇಕೆಂದು ಶಾಸಕ ಎಚ್ ಕೆ ಸುರೇಶ್ ಮನವಿ ಮಾಡಿದರು.

ಬೈಪಾಸ್‌ ಆದರೂ ಸಕಲೇಶಪುರದಲ್ಲಿ ತಗ್ಗದ ವಾಹನ ದಟ್ಟಣೆ
ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಆರಂಭಕ್ಕೂ ಮುನ್ನ ಪಟ್ಟಣದ ಹೃದಯ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಾವಿರಾರು ವಾಹನಗಳು ನಿತ್ಯ ಸಂಚರಿಸುತ್ತಿದ್ದವು. ಇದರಿಂದಾಗಿ ಪಟ್ಟಣ ವ್ಯಾಪ್ತಿಯಲ್ಲಿ ನಿತ್ಯ ವಾಹನ ದಟ್ಟಣೆ ಅತಿಯಾಗಿತ್ತು. ಬೈಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ನಂತರ ವಾಹನ ದಟ್ಟಣೆ ನಿಯಂತ್ರಣಕ್ಕೆ ಬರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ವಾರದಲ್ಲಿ ಒಂದೆರಡು ದಿನಗಳನ್ನು ಹೊರತುಪಡಿಸಿದರೆ ಪಟ್ಟಣದಲ್ಲಿ ಎಂದಿನಂತೆ ವಾಹನ ದಟ್ಟಣೆ ಅತಿಯಾಗಿದೆ.
ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿಸುವಲ್ಲಿ ಸರ್ಕಾರಿ ಕಾಲೇಜು ಯಶಸ್ವಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತನ್ನ 18 ವರ್ಷಗಳ ಸಾರ್ಥಕ ಸೇವೆಯೊಂದಿಗೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ, ನೈತಿಕತೆ, ಕಲೆ, ಸಾಹಿತ್ಯ ವಿಜ್ಞಾನ ಕ್ರೀಡೆ ಹಾಗೂ ಕಂಪ್ಯೂಟರ್‌ ಜ್ಞಾನ ಸೇರಿದಂತೆ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ರೂಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎ. ಗೀತಾ ತಿಳಿಸಿದರು.
ಎರಡೂವರೆ ತಿಂಗಳಲ್ಲಿ ಜಲಜೀವನ್‌ ನಳದಲ್ಲಿ ನೀರು ಬರಬೇಕು
ಸಭೆಯಲ್ಲಿ ಜೆಜೆಎಂ ಎಂಜಿನಿಯರ್‌ಗಳು, ಎಲ್ಲಾ ಗ್ರಾಪಂಗಳ ಪಿಡಿಒಗಳು ಮತ್ತು ತಾಪಂ ಇಒ, ಜೆಜೆಎಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಮತ್ತು ಗುತ್ತಿಗೆದಾರರು ಭಾಗವಹಿಸಿದ್ದೀರಿ. ಅಲ್ಲದೆ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂಬ ಮಾಹಿತಿಯನ್ನು ಸಭೆಗೆ ನೀಡಿದ್ದೀರಿ. ಈ ಅಂಶಗಳನ್ನು ಮನಗಂಡು ಮುಂದಿನ ಎರಡೂವರೆ ತಿಂಗಳ ಅವಧಿಯೊಳಗೆ ನೀರು ಒದಗಿಸುವ ಭರವಸೆಯನ್ನು ನೀಡಿದ್ದೀರಿ. ಇದು ಹುಸಿಯಾದರೇ ಅಧಿಕಾರಿಗಳನ್ನೆ ಹೊಣೆಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved