• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲಂಗೆರೆ ದೇವಸ್ಥಾನದಲ್ಲಿ ಚಂಡಿಕಾ ಹೋಮ
ಶ್ರೀ ಲಕ್ಷ್ಮಿ ನಾರಾಯಣ ಸ್ವಾಮಿ ಶ್ರೀ ಮಹಿಷಾಸುರ ಮರ್ದಿನಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ ಅರ್ಚನೆ ಬಣ್ಣ ಬಣ್ಣದ ಹೂವು ತೋಮಾಲೆಗಳಿಂದ ವಿಶೇಷವಾಗಿ ಅಲಂಕಾರಮಾಡಿದರು. ಅರಸೀಕೆರೆ ತಾಲೂಕಿನ ಕಸಬಾ ಹೋಬಳಿ ಕೆಲ್ಲಂಗೆರೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮಿನಾರಾಯಣ ಸ್ವಾಮಿ ದೇವಾಲಯದಲ್ಲಿ ಅಶ್ವಯುಜ ಮಾಸದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಇಂದು ಚಂಡಿಕಾ ಹೋಮ ವೈಭವದಿಂದ ನಡೆಯಿತು.
ಸ್ರೇಸನ್ ಫಾರ್ಮಾ ಮಾಲೀಕನಿಗೆ ಕಠಿಣ ಶಿಕ್ಷೆಯಾಗಲಿ
ಮಧ್ಯಪ್ರದೇಶದಲ್ಲಿ ವಿಷಯುಕ್ತ ರಾಸಾಯನಿಕ ಬೆರೆತಿರುವ ಕೋಲ್ಡ್ ರಿಪ್ ಕೆಮ್ಮಿನ ಸಿರಪ್ ಸೇವಿಸಿ 22 ಮಕ್ಕಳ ಸಾವಿಗೆ ಕಾರಣವಾಗಿರುವ ಸ್ರೇಸನ್ ಫಾರ್ಮ ಕಂಪನಿಯ ಮಾಲೀಕನಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಆಗ್ರಹಿಸಿದರು. ಮಹಾರಾಷ್ಟ್ರ ಹಾಗೂ ನಾಗಪುರದ ಆಸ್ಪತ್ರೆಗಳಲ್ಲಿ 5 ವರ್ಷದ ಒಳಗಿನ ಮಕ್ಕಳು ಸಾವಿಗೆ ತುತ್ತಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಸಣ್ಣ ಮಕ್ಕಳ ಆರೋಗ್ಯದ ವಿಚಾರದಲ್ಲಿ ಮಕ್ಕಳ ತಜ್ಞ ವೈದ್ಯರ ಭೇಟಿ ಸಲಹೆ ಸೂಚನೆ ಮೇರೆಗೆ ಔಷಧಿ ಮಾತ್ರೆಗಳನ್ನು ತೆಗೆದುಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.
ಪೊದೆಯಲ್ಲಿ ಹೊಳೆನರಸೀಪುರದ ಯುವಕನ ದೇಹ ಪತ್ತೆ
ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಸಮೀಪದ ಹೆದ್ದಾರಿ ಪಕ್ಕದಲ್ಲಿ ದ್ವಿಚಕ್ರ ವಾಹನ ಹಾಗೂ ಯುವಕನೊಬ್ಬನ ಮೃತದೇಹವನ್ನು ಗಿಡಗಂಟಿಗಳಿಂದ ಮುಚ್ಚಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಅಪಘಾತವೋ ಎಂದು ಪೊಲೀಸರ ತನಿಖೆಯಿಂದ ಪತ್ತೆಯಾಗಬೇಕಿದೆ. ಆದರೆ ಮೃತದೇಹ ಮೇಲಿನ ಗಾಯದ ಗುರುತು ಕಂಡ ಪ್ರತ್ಯಕ್ಷದರ್ಶಿಗಳು ಇದು ಭೀಕರ ಕೊಲೆ ಎಂದು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಡಿವೈಎಸ್ಪಿ ಶಾಲು, ವೃತ್ತ ನಿರೀಕ್ಷಕ ಪ್ರದೀಪ್ ಹಾಗೂ ಪಿಎಸ್ಸೈಗಳಾದ ರಮೇಶ್ ಹಾಗೂ ನವ್ಯ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನಕ್ಕೆ ಕಳುಹಿಸಲಾಯಿತು. ಸುದೀಪ್‌ಗೆ ತಂದೆ, ತಾಯಿ, ಹಿರಿಯ ಸಹೋದರ, ಸಹೋದರಿ ಇದ್ದಾರೆ.
ಅರಸೀಕೆರೆಯಲ್ಲಿ ಆಕರ್ಷಿಸಿದ ಆರ್‌ಎಸ್‌ಎಸ್ ಪಥಸಂಚಲನ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ನಗರದ ವಿವಿಧ ಮಾರ್ಗಗಳಲ್ಲಿ ಆಯೋಜಿಸಲಾದ ಭವ್ಯ ಪಥಸಂಚಲನವು ನೂರಾರು ಗಣವೇಷಧಾರಿ ಸ್ವಯಂಸೇವಕರ ಹೆಜ್ಜೆಗುರುತುಗಳೊಂದಿಗೆ ಸಾಗಿತು. ಭಗವಧ್ವಜದೊಂದಿಗೆ ಸಾಗಿದ ಭಾರತಮಾತೆಯ ವೇಷಧಾರಿಣಿಯ ತ್ರಿವರ್ಣ ಧ್ವಜ ಪ್ರದರ್ಶನ ವಿಶೇಷ ಆಕರ್ಷಣೆಯಾಗಿ ಪರಿಣಮಿಸಿತು. ಪಥಸಂಚಲನದ ವೇಳೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಒದಗಿಸಿತ್ತು. ಭಾಗವಹಿಸಿದ ಸ್ವಯಂಸೇವಕರಿಗೆ ತಂಪುಪಾನೀಯ ಮತ್ತು ಹಣ್ಣುಗಳನ್ನು ವಿತರಿಸಲಾಯಿತು.
ದರ್ಶನದ ವ್ಯವಸ್ಥೆಗೆ ಸಂಸದ ಸುನೀಲ್ ಬೋಸ್ ಮೆಚ್ಚುಗೆ
ಸಂಸದ ಸುನೀಲ್ ಬೋಸ್ ಅವರು ಕುಟುಂಬ ಸಮೇತರಾಗಿ ದೇವಿಯ ದರ್ಶನ ಪಡೆದರು. ದೇವಾಲಯದ ಒಳಗೆ ಮತ್ತು ಹೊರಗಿನ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳ ಅಚ್ಚುಕಟ್ಟಾದ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಕ್ತರು ಯಾವುದೇ ತೊಂದರೆ ಇಲ್ಲದೆ, ಸುಗಮವಾಗಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದೇವಾಲಯದ ಆಡಳಿತ ಮಂಡಳಿಯ ಶ್ರಮ ಪ್ರಶಂಸನೀಯ ಎಂದರು. ಹಾಸನಾಂಬೆ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಕ್ತರ ಭಕ್ತಿ ಪರವಶದ ವಾತಾವರಣ ನಿರ್ಮಾಣವಾಗಿದ್ದು, ಸಾವಿರಾರು ಮಂದಿ ದಿನವೂ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ಸಂಸದರು ದೇವಾಲಯದ ಒಳಭಾಗದಲ್ಲಿ ದೇವಿಯ ಪಾದಪೂಜೆ ಸಲ್ಲಿಸಿ, ತಮ್ಮ ಕುಟುಂಬದವರೊಂದಿಗೆ ವಿಶೇಷ ಪೂಜೆ ನೆರವೇರಿಸಿದರು.
ಚನ್ನರಾಯಪಟ್ಟಣದಲ್ಲಿ ಮಹಿಳೆ ಮೇಲೆ ಕಾಡುಕೋಣ ದಾಳಿ
ವಿದ್ಯಾನಗರದಲ್ಲಿ ಕಾಣಿಸಿಕೊಂಡ ಕಾಡುಕೋಣ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. 54 ವರ್ಷದ ಶಾಂತಮ್ಮ ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದು, ಶನಿವಾರ ಬೆಳಗ್ಗೆ 8 ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ. ಶಾಂತಮ್ಮ ಎಂದಿನಂತೆ ಹಂದಿ ಮೇಯಿಸಲು ಬಂದಿದ್ದರು. ಇದೇ ವೇಳೆ ಹಂದಿಗಳಿರುವ ಜಾಗಕ್ಕೆ ಕಾಡುಕೋಣವೊಂದು ಬಂದಿದೆ. ಆದರೆ ಶಾಂತಮ್ಮ, ಎಮ್ಮೆ ಎಂದು ತಿಳಿದು, ಅದನ್ನು ಓಡಿಸಲು ಮುಂದಾದಾಗ ಆಕೆಯ ಮೇಲೆ ದಾಳಿ ನಡೆಸಿದ್ದು, ದಾಳಿಯಿಂದ ಶಾಂತಮ್ಮ ಅವರ ಎಡಗೈ ಮುರಿದಿದೆ. ಅಲ್ಲದೇ ಜೋರಾಗಿ ನೆಲಕ್ಕೆ ಬಿದ್ದ ಪರಿಣಾಮ ಹೊಟ್ಟೆ ಹಾಗೂ ಕೈ ಕಾಲಿಗೆ ಗಾಯವಾಗಿದೆ.
ಮೊಗಳ್ಳಿ ಗಣೇಶ್‌ಗೆ ಮರಣೋತ್ತರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ
ಡಾ.ಮೊಗಳ್ಳಿ ಗಣೇಶ್ ಅವರು ಅಕ್ಷರವನ್ನೇ ತಮ್ಮ ಅಸ್ತ್ರವಾಗಿಸಿಕೊಂಡು ಕಥೆ, ಕಾದಂಬರಿ, ಪ್ರಬಂಧ, ಸಂಶೋಧನ ಕೃತಿ, ಬೀದಿನಾಟಕ, ಕಾವ್ಯ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿಯನ್ನು ಮಾಡಿ ಪ್ರಖ್ಯಾತಿಯನ್ನು ಗಳಿಸಿದ್ದು ಇವರ ಸಾಹಿತ್ಯ ರಾಜ್ಯ , ರಾಷ್ಟ್ರ, ಅಂತಾರಾಷ್ಟ್ರಮಟ್ಟದಲ್ಲಿ ಮನ್ನಣೆಯನ್ನು ಪಡೆದಿದೆ.ಇವರ ಸಾಹಿತ್ಯ ಸೇವೆ ನಾಡಿಗೆ ಆಗಾಧವಾಗಿದೆ ಸದಾ ಸಮಾಜ ಜಾತಿ ಧರ್ಮ ವರ್ಣ ವ್ಯವಸ್ಥೆಯ ವಿರುದ್ಧ ಬೇಸರಗೊಂಡಿದ್ದರು. ಕುವೆಂಪು, ಪೂರ್ಣಚಂದ್ರತೇಜಸ್ವಿ, ಪಿ.ಲಂಕೇಶ್, ದೇವನೂರು ಮಹಾದೇವ, ಸಿದ್ದಲಿಂಗಯ್ಯ ಅವರ ಬರಹಗಳ ಬಗ್ಗೆ ಅಪಾರವಾದ ಪ್ರೀತಿ ಇತ್ತು. ಇವರು ಸ್ವಾಭಿಮಾನಿ, ಮಾತು ಮೆದುವಾದರೂ ಬಹಳ ಅರ್ಥಗರ್ಭಿತವಾಗಿರುತ್ತಿತ್ತು ಎಂದರು.
ಹಾಸನಾಂಬೆಯ ಸುಗಮ ದರ್ಶನಕ್ಕೆ ಭಕ್ತರ ಮೆಚ್ಚುಗೆ
ಕಳೆದ ವರ್ಷ ಅದ್ವಾನಗಳ ಆಗರವಾಗಿ ತಳ್ಳಾಟ ನೂಕಾಟ, ಲಾಠಿ ಚಾರ್ಜ್‌, ಹೀಗೆ ಹತ್ತು ಹಲವು ಗೊಂದಲಗಳ ಗೂಡಾಗಿದ್ದ ಹಾಸನಾಂಬೆ ದರ್ಶನೋತ್ಸವ ಈ ಬಾರಿ ಸುಸೂತ್ರವಾಗಿ ನಡೆಯುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ವಿಐಪಿ ಹಾಗೂ ವಿವಿಐಪಿ ಪಾಸ್‌ಗಳನ್ನು ರದ್ಧು ಮಾಡುವುದರ ಜತೆಗೆ ದರ್ಶನಕ್ಕೆ ಬರುವ ವಿಐಪಿಗಳಿಗೆ ಜಿಲ್ಲಾಡಳಿತವೇ ಪ್ರತ್ಯೇಕ ವ್ಯವಸ್ಥೆ ಮಾಡಿರುವುದು. ಇದರ ಮಾಸ್ಟರ್‌ ಮೈಂಡ್‌ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ. ಹಾಗಾಗಿ ಈ ಬಾರಿ ಸಾಮಾನ್ಯ ಜನರಿಗೂ ಹಾಸನಾಂಬೆ ದರ್ಶನ ಸುಸೂತ್ರವಾಗಿ ನಡೆಯುತ್ತಿದ್ದು, ದರ್ಶನ ಪಡೆದ ಭಕ್ತರೆಲ್ಲಾ ಈ ಬಾರಿಯ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಹಾಸನಾಂಬೆಯ ದರ್ಶನ ಪಡೆದ ಶಾಸಕ ಅರವಿಂದ್ ಬೆಲ್ಲದ್
ಶಾಸಕ ಅರವಿಂದ್ ಬೆಲ್ಲದ್ ಅವರು ಶನಿವಾರ ತಮ್ಮ ಕುಟುಂಬ ಸಮೇತರಾಗಿ ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆದರು. ದರ್ಶನದ ಬಳಿಕ ಮಾತನಾಡಿದ ಅವರು, ಹಾಸನಾಂಬೆಯ ಜಾತ್ರಾ ಉತ್ಸವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಾರಿ ಜಿಲ್ಲಾಡಳಿತ ವಿವೇಕದಿಂದ ಕಾರ್ಯನಿರ್ವಹಿಸಿ, ವಿವಿಐಪಿಗಳಿಗೆ ಸರ್ಕಾರಿ ವಾಹನ ವ್ಯವಸ್ಥೆ ಮಾಡಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು. ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿಯ ದರ್ಶನ ಪಡೆದು ನಾವು ಪುನೀತರಾಗಿದ್ದೇವೆ ಎಂದು ಅವರು ಭಕ್ತಿಭಾವದಿಂದ ಹೇಳಿದರು.
ಜಿಲ್ಲಾ ಪತ್ರಕರ್ತರ ಸಂಘ ಚುನಾವಣೆಗೆ ಚುನಾವಣಾಧಿಕಾರಿಯಾಗಿ ರಾಜೇಶ್ ನೇಮಕ
ನವೆಂಬರ್ ತಿಂಗಳಲ್ಲಿ ನಡೆಯಲಿರುವ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಜಿಲ್ಲಾ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತರಾದ ಜ್ಞಾನದೀಪ ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ. ಎಚ್. ವೇಣುಕುಮಾರ್ ಅವರು ಆದೇಶದ ಪ್ರತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇಣುಕುಮಾರ್ ಅವರು, ಈ ಬಾರಿ ನಡೆಯಲಿರುವ ಸಂಘದ ಚುನಾವಣೆ ಸಂಪೂರ್ಣ ನಿಷ್ಪಕ್ಷಪಾತವಾಗಿ, ಯಾವುದೇ ಬಾಹ್ಯ ಪ್ರಭಾವ ಅಥವಾ ಒತ್ತಡಗಳಿಲ್ಲದೇ, ಶಿಸ್ತಿನಿಂದ ಸಾಗುವಂತೆ ವಿನಂತಿಸುತ್ತೇನೆ ಎಂದು ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved