• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ
ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ, ಏಕೆಂದರೆ ದೇಶದ ಅನ್ನದಾತರೆನಿಸಿದ ಬಹತೇಕ ರೈತರ ಮಕ್ಕಳು ಇಂದಿಗೂ ಓದುತ್ತಿರುವುದು ಸರ್ಕಾರಿ ಶಾಲೆಗಳಲ್ಲಿ. ಇವರ ಅಭ್ಯುದಯವಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಆಲೂರು ಸಾರ್ವಜನಿಕ ಗ್ರಂಥಾಲಯದ ಗ್ರಂಥಪಾಲಕ ಟಿ.ಕೆ. ನಾಗರಾಜ್ ಅಭಿಪ್ರಾಯಪಟ್ಟರು. ಪ್ರಸಕ್ತ ಕಾಲಮಾನದಲ್ಲಿ ಅತಿಯಾದ ಹಾಗೂ ಅಜಾಗರೂಕತೆಯ ಮೊಬೈಲ್ ಬಳಕೆಯಿಂದ ಮಕ್ಕಳು ಬದುಕಿನಲ್ಲಿ ಪ್ರಬುದ್ಧತೆಯನ್ನು ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬದಲು ಪುಸ್ತಕಗಳನ್ನು ಹಿಡಿಯಬೇಕು, ಅಂದಾಗ ಮಾತ್ರ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯ ಎಂದರು.
ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರೂ ಶ್ರಮಿಸಬೇಕು
ಇಂದಿನ ವ್ಯವಸ್ಥೆಯಲ್ಲಿ ಪ್ರತಿಯೊಂದು ಮಗುವಿಗೆ ಉಚಿತ ಶಿಕ್ಷಣ ದೊರೆಯುವ ಕಾರಣದಿಂದ ಬಾಲಕಾರ್ಮಿಕ ಪದ್ಧತಿ ತೊಲಗಿಸುವ ನಿಟ್ಟಿನಲ್ಲಿ ಬಾಲ ಕಾರ್ಮಿಕರನ್ನು ಕಂಡಾಗ ಪ್ರಾಧಿಕಾರಕ್ಕೆ ತಿಳಿಸುವುದು ಹಾಗೂ ಪೋಷಕರಿಗೆ ಶಿಕ್ಷಣದ ವ್ಯವಸ್ಥೆ ಜತೆಗೆ ಅಗತ್ಯ ಅರಿವನ್ನು ಮೂಡಿಸುವುದು ಅಗತ್ಯವಾಗಿದೆ ಎಂದರು. ತಂದೆ ತಾಯಿಗೆ ಸಹಾಯ ಮಾಡುವುದು ಬಾಲಕಾರ್ಮಿಕ ಪದ್ಧತಿಯಡಿ ಬರುವುದಿಲ್ಲ, ಆದರೆ ಶಾಲೆ ಬಿಟ್ಟು, ನಿರಂತರವಾಗಿ ಕರ್ತವ್ಯ ನಿರ್ವಹಿಸುವುದು ಬಾಲಕಾರ್ಮಿಕ ಚೌಕಟ್ಟಿನಲ್ಲಿ ಬರುತ್ತದೆ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಚೇತನಾ ಹೇಳಿದರು.
ಭಕ್ತರ ನಿಷ್ಕಲ್ಮ ಶ ಭಕ್ತಿಗೆ ರಾಯರು ಒಲಿಯುತ್ತಾರೆ
ಆಸ್ಪತ್ರೆ, ಪೊಲೀಸ್ ಠಾಣೆ ನಿರ್ಮಾಣ ಮಾಡಿದಾಗ ಶಾಂತಿ ನೆಲೆಸುವುದಿಲ್ಲ ಇದರಿಂದ ಸಮಾಜಕ್ಕೆ ಹೆಚ್ಚು ಅಪಾಯಕಾರಿ. ದೇವಾಲಯದಿಂದ ಸಮಾಜದಲ್ಲಿ ಶಾಂತಿ ನೆಲೆಸಲಿದೆ ಎಂದು ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಯಾವ ವ್ಯಕ್ತಿ ನಿಷ್ಕಲ್ಮ ಶವಾಗಿ ದೇವರ ಧ್ಯಾನವನ್ನು ಮಾಡುತ್ತಾರೆ ಅಂತವರಿಗೆ ಅಂತರಂಗದಲ್ಲಿ ದೇವರನ್ನು ಕಾಣಬಹುದು, ಸಾಕಷ್ಟು ಮಂದಿ ರಾಘವೇಂದ್ರ ಸ್ವಾಮಿಯನ್ನು ಕಂಡಿದ್ದಾರೆ. ಭಕ್ತರ ನಿಷ್ಕಲ್ಮ ಶ ಭಕ್ತಿಗೆ ರಾಯರು ಒಲಿಯುತ್ತಾರೆ ಎಂದರು.
ಚನ್ನಕೇಶವ ಸ್ವಾಮಿ ದೇಗುಲದ ರಸ್ತೆಯ ಚರಂಡಿಗಳಲ್ಲಿ ಕಸದ ರಾಶಿ
ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಸ್ತೆಯ ಎರಡು ಬದಿಯ ಚರಂಡಿಗಳು ಕಸ ಮತ್ತು ಕೊಳೆತ ಹಣ್ಣು ತರಕಾರಿಗಳಿಂದ ತುಂಬಿ ಗಬ್ಬು ನಾರುತ್ತಿದೆ. ಬಸ್ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ಬದಿಯಲ್ಲಿ ಹಣ್ಣು ತರಕಾರಿ ವ್ಯಾಪಾರ ಮಾಡುವ ಫೂಟ್ಪಾತ್‌ ವ್ಯಾಪಾರಿಗಳು ಕೊಳೆತ ತರಕಾರಿಯ ಉಳಿದ ತರಕಾರಿಗಳನ್ನು ಚರಂಡಿ ಒಳಗೆ ಹಾಕುತ್ತಿದ್ದು ಚರಂಡಿಯಲ್ಲಿ ಕೊಳೆತು ದುರ್ನಾತ ಬೀರುತ್ತದೆ. ಇನ್ನು ಮಳೆ ಬಂದ ಸಂದರ್ಭದಲ್ಲಿ ನೀರು ಹರಿದು ತ್ಯಾಜ್ಯದ ವಸ್ತುಗಳು ಕೊಚ್ಚಿಕೊಂಡು ಹೋಗದೆ ಅಲ್ಲಿಯೇ ಕಟ್ಟಿ ಹರಿಯುವ ತ್ಯಾಜ್ಯದ ನೀರು ಕೂಡ ರಸ್ತೆಗೆ ಬರುತ್ತಿದೆ. ದುರ್ವಾಸನೆಯಿಂದ ಪ್ರವಾಸಿಗರು, ಭಕ್ತರು, ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ.
ಐವರು ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರಿನಲ್ಲಿ ಈಚೆಗೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆದ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ, ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಪಟ್ಟಣದ ಕೆ. ಆರ್‌. ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರೇ ಕಾರಣಕರ್ತರಾಗಿದ್ದಾರೆ. ಆದರೆ ಕಣ್ಣೊರೆಸುವ ತಂತ್ರವಾಗಿ ಆಮಾಯಕ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ ಎಂದು ಆರೋಪಿಸಿದರು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಜಿ. ಪರಮೇಶ್ವರ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು. ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ವಾದ ಪ್ರತಿವಾದದಿಂದಲೇ ಹೆಚ್ಚು ಸುದ್ದಿಯಾದ ಅರಸೀಕೆರೆ ನಗರಸಭೆ
ಅಭಿವೃದ್ಧಿ ಕೆಲಸ ಕಾರ್ಯಗಳಿಂದ ನಗರದ ಜನತೆಯ ಗಮನಸೆಳೆಯಬೇಕಿದ್ದ ನಗರಸಭೆ ಪ್ರಸ್ತುತ ಅವಧಿಯುವುದಕ್ಕೂ ಜಿಲ್ಲಾಧಿಕಾರಿಗಳ ನ್ಯಾಯಾಲಯ ಅಷ್ಟೇ ಅಲ್ಲದೆ ಹೈಕೋರ್ಟ್ ಸುಪ್ರೀಂ ಕೋರ್ಟ್‌ ಅಂಗಳದಲ್ಲಿ ನಡೆದ ವಾದ, ಪ್ರತಿವಾದ ದಿಂದಲೇ ಸುದ್ದಿಯಾಗಿದ್ದು ಹೆಚ್ಚು. ಕ್ಷೇತ್ರ ರಾಜಕಾರಣದಲ್ಲಿ ಬಹಳಷ್ಟು ಬದಲಾವಣೆಗಳಗಿದವು ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರೆ ಮತ್ತೊಂದೆಡೆ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿದ್ದರಿಂದ ನಗರಸಭೆ ಒಳಗೆ ಮತ್ತು ಹೊರಗೆ ಮತ್ತೊಂದು ರೀತಿಯ ನಾಟಕೀಯ ಬೆಳವಣಿಗೆಗಳಿಗೆ ವೇದಿಕೆಯಾಯಿತು.
ಏಳು ತಿಂಗಳಿನಿಂದ ಸಂಬಳ ಕೊಡದ ಕಾರ್ಖಾನೆ
ಕಳೆದ ಏಳು ತಿಂಗಳುಗಳಿಂದ ಕಾರ್ಮಿಕರಿಗೆ ವೇತನ ನೀಡಿಲ್ಲ, ತಕ್ಷಣ ಸಂಪೂರ್ಣ ಸಂಬಳ ನೀಡುವಂತೆ ಆಗ್ರಹಿಸಿ ನಗರದ ಸಮೀಪ ಹನುಮಂತಪುರ ಬಳಿ ಕೈಗಾರಿಕಾ ಪ್ರದೇಶದಲ್ಲಿರುವ ನ್ಯೂ ಮಿನರ್ವ್ ಮಿಲ್ ಬಟ್ಟೆ ಫ್ಯಾಕ್ಟರಿ ಮುಂದೆ ಕೆಲಸ ಮಾಡುವ ಕಾರ್ಮಿಕರು ಎಐಟಿಯುಸಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು. ಈ ವಿಚಾರಗಳ ಕುರಿತು ಮ್ಯಾನೇಜ್‌ಮೆಂಟ್ ಗಮನವನ್ನು ಸೆಳೆದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಸಮಸ್ಯೆ ಕುರಿತು ಈ ವಿಚಾರಗಳನ್ನು ಮುಂದಿಟ್ಟುಕೊಂಡು ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಮುಂದೆ ಕಾರ್ಮಿಕರು ಸೇರಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.
ಅರಸೀಕೆರೆ ತಾಲೂಕಲ್ಲಿ ಹೆಚ್ಚು ಶುದ್ಧ ಕುಡಿಯುವ ನೀರು ಘಟಕ
ಮನುಷ್ಯನಿಗೆ ಬಹಳ ಮುಖ್ಯವಾದದ್ದು ಆರೋಗ್ಯ. ಅದಕ್ಕೆ ಶುದ್ಧ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ನಿರ್ದೇಶಕ ಸುರೇಶ್ ಮೊಲಿ ಹೇಳಿದರು. ಧರ್ಮಸ್ಥಳ ಕ್ಷೇತ್ರ ನಿರ್ವಹಣೆ ಮಾಡುತ್ತಿರುವ ಈ ಘಟಕಗಳು ನೈರ್ಮಲ್ಯದಿಂದ ಇರುವಂತೆ ಗಮನ ಕೊಡಿ ಪ್ರಾಮಾಣಿಕ ಸೇವೆಯಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ ನಾನು ಸಹ ಒಬ್ಬ ಪ್ರೇರಕನಾಗಿದ್ದೆ 30 ವರ್ಷಗಳ ಹಿಂದೆ, ಇಂದು ನಿರ್ದೇಶಕನಾಗಿದ್ದೇನೆ ನಮ್ಮ ಕರ್ತವ್ಯ ನಿಷ್ಠೆ ನಮ್ಮನ್ನು ಬೆಳೆಸುತ್ತದೆ ಎಂದು ಕಿವಿಮಾತು ಹೇಳಿದರು.
ಮಳೆ ನಿಂತ ಹಿನ್ನೆಲೆ ಬೆಳೆಗಳ ಆರೈಕೆಯಲ್ಲಿ ರೈತರು
ಮುಂಗಾರು ಪೂರ್ವ ಮಳೆಗೆ ತತ್ತರಿಸಿದ್ದ ಇಳೆಗೆ ಇದೀಗ ಒಣ ಹವೆ ಸೃಷ್ಟಿಯಾಗಿದ್ದು ರೈತರು ಬಿತ್ತಿದ ಬೆಳೆಗಳನ್ನು ಉಳಿಸಿಕೊಳ್ಳಲು ಮಗ್ನರಾಗಿದ್ದಾರೆ. ಕೆಲ ದಿನಗಳಿಂದ ಮಳೆ ಇಲ್ಲದ ಕಾರಣ ರೈತರು ಜಮೀನುಗಳತ್ತ ಮುಖ ಮಾಡಿದ್ದು ಹೊಗೆಸೊಪ್ಪು ಗಿಡಗಳಿಗೆ ರಸಗೊಬ್ಬರ ನೀಡಿ ಕಳೆ ತೆಗೆಯುತ್ತಿದ್ದಾರೆ. ಕೆಲವು ಕಡೆ ಮಳೆಯಿಂದಾಗಿ ಗಿಡಗಳಿಗೆ ಸೊರಗು ರೋಗ ಕಾಣಿಸಿಕೊಂಡಿದೆ. ಔಷಧಿ ಸಿಂಪಡಣೆ ಮಾಡಿ ರೈತರು ಬೆಳೆ ರಕ್ಷಣೆ ಮಾಡಿಕೊಳ್ಳಲು ನಿರತರಾಗಿದ್ದಾರೆ. ಆಲೂಗಡ್ಡೆಯನ್ನು ಮಳೆ ಕಾರಣ ಸದ್ಯಕ್ಕೆ 350 ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಲಾಗಿದೆ. ಭಾರಿ ಮಳೆ ಪರಿಣಾಮ ಆಲೂಗಡ್ಡೆ ಬಿತ್ತನೆಗೆ ಹಿನ್ನಡೆಯಾಗಿದೆ.
ಮನುಷ್ಯ ತನ್ನ ಕಷ್ಟಗಳಿಗೆ ಪರಿಹಾರ ಹುಡುಕಲು ಮುಂದಾಗಲಿ
ಮನುಷ್ಯನನ್ನು ಅಂಧ ಶ್ರದ್ಧೆಯಿಂದ, ಶ್ರದ್ಧೆಯೆಡೆಗೆ ಕರೆದೊಯ್ಯುವ ಮಾರ್ಗದರ್ಶನ ಕಾರ್ಯಕ್ರಮವು ಪಟ್ಟಣದ ಸಾವಿತ್ರಮ್ಮ ಕರಿಯಪ್ಪಗೌಡ ಕಲ್ಯಾಣ ಮಂಟಪದಲ್ಲಿ ತಾಲೂಕಿನ ಸಾವಿರಾರು ಜನರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಮಹಾರಾಷ್ಟ್ರದ ಅನಂತ ಶ್ರೀ ವಿಭೂಷಿತ್ ಜಗದ್ಗುರು ರಾಮಾನಂದಾಚಾರ್ಯ ಶ್ರೀಸ್ವಾಮಿ ನರೇಂದ್ರಾಚಾರ್ಯಜೀ ಮಹಾರಾಜ ಸ್ವಾಮೀಜಿಗಳು ನೆರೆದಿದ್ದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿದರು. , ಬದುಕಿನಲ್ಲಿ ಎಲ್ಲರಿಗೂ ಸಂಕಷ್ಟಗಳಿವೆ. ಅವುಗಳ ಪರಿಹಾರಕ್ಕೆ ಮುಂದಾಗುವ ದಾರಿಯನ್ನು ಅವರೇ ಕಂಡುಕೊಳ್ಳಬೇಕು. ಆಧ್ಯಾತ್ಮವನ್ನು ಅರಿತು ಗುರುವರ್ಯರಲ್ಲಿ ನಂಬಿಕೆಯಿಟ್ಟಾಗ ಸಮಸ್ಯೆಗಳು ದೂರವಾಗುತ್ತವೆ ಎಂದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved