• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರಲ್ಲಿ ಗಾಣಿಗರ ಸಂಘದಿಂದ ಗ್ರಾಮ ದೇವತೆಗಳ ಮೆರವಣಿಗೆ
ಗಾಣಿಗರ ಸಂಘದಿಂದ ಗ್ರಾಮ ದೇವತೆಗಳ ಮೆರವಣಿಗೆ ಹಾಗೂ ಉತ್ಸವ ಕಾರ್ಯಕ್ರಮಗಳನ್ನು ಸಾವಿರಾರು ಭಕ್ತರ ನಡುವೆ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಗಾಣಿಗರ ಬೀದಿಯಲ್ಲಿ ನಿರ್ಮಾಣ ಮಾಡಿದ್ದ ಬೃಹತ್ ವೇದಿಕೆ ಮೇಲೆ ಗುರುವಾರದಿಂದ ಆರಂಭವಾದ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸಂಜೆ ೭ ಗಂಟೆಯಿಂದ ಬೀದಿಯಲ್ಲಿ ದೇವತೆಗಳ ಮೆರವಣಿಗೆ ನಡೆಸಲಾಯಿತು.ಈ ವೇಳೆ ವಿದ್ಯುತ್ ದೀಪ, ಹಸಿರು ತೋರಣಗಳಿಂದ ಬೀದಿಯನ್ನು ಸಿಂಗರಿಸಲಾಗಿದ್ದು, ಬರುವ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಕಸಾಪ ಸಂಘಟನಾ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ
ಚನ್ನರಾಯಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ಜಬೀಉಲ್ಲಾಬೇಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪಟ್ಟಣದ ಬಾಗೂರು ರಸ್ತೆಯ ಟಿಪ್ಪು ವೃತ್ತದ ಬಳಿ ಸಂಜೆ ೬ ಗಂಟೆಯ ಸಮಯದಲ್ಲಿ ಅಬ್ದುಲ್‌ಹಕ್, ಅಬ್ದುಲ್ ಹಸನ್, ಫಹಾದ್, ಸಾದಿಕ್, ಶಮಿ, ಸಾಕಿಬ್ ಮತ್ತಿತರ ಸುಮಾರು ೧೦ಕ್ಕೂ ಹೆಚ್ಚು ಜನ ಗೂಂಡಾಗಳು ಏಕಾಏಕಿ ಸುತ್ತುವರೆದು ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಜಬೀಉಲ್ಲಾಬೇಗ್ ಆರೋಪಿಸಿದ್ದಾರೆ.
ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿ
ಜಿಲ್ಲಾ ಕ್ರೀಡಾಂಗಣ, ಯೂತ್ ಹಾಸ್ಟೆಲ್ ಬಳಿ ಇರುವ ಮೈದಾನದಲ್ಲಿ ಕರ್ನಾಟಕ ರಾಜ್ಯ ಹಾಗೂ ಜಿಲ್ಲಾ ಹ್ಯಾಂಡ್‌ಬಾಲ್ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೧೯ನೇ ರಾಜ್ಯ ಮಟ್ಟದ ಹೊನಲು ಬೆಳಕಿನ ೨೦ ವರ್ಷ ವಯೋಮಿತಿಯ ಪುರುಷರು ಮತ್ತು ಮಹಿಳೆಯರ ಹ್ಯಾಂಡ್‌ಬಾಲ್ ಪಂದ್ಯಾವಳಿಗೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಚಾಲನೆ ನೀಡಿದರು.
ವೀರಶೈವ ಎನ್ನುವುದು ಜಾತಿಯಲ್ಲ, ಅದೊಂದು ವಿಶ್ವಧರ್ಮ
ವೀರಶೈವ ಎನ್ನುವುದು ಜಾತಿಯಲ್ಲ, ಅದೊಂದು ಪರಿಪೂರ್ಣ ವಿಶ್ವಧರ್ಮ ಎಂದು ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಎಲ್ಲಾ ಗುರು ವಿರಕ್ತರು ಒಂದಾಗಿ ಧರ್ಮವನ್ನು ರಕ್ಷಣೆ ಮಾಡಿದರೆ ಅದು ನಮ್ಮನ್ನು ರಕ್ಷಿಸುತ್ತದೆ, ಹಿಂದೂ ಧರ್ಮಕ್ಕೆ ವೀರಶೈವ ಧರ್ಮವೇ ಆಧಾರಸ್ತಂಭವಾಗಿದೆ. ಪ್ರಾಚೀನ ಪರಂಪರೆ ಮಾನವ ಕಲ್ಯಾಣ ಬಯಸುವ ವೀರಶೈವ ಧರ್ಮವನ್ನು ಮತ್ತೆ ಒಗ್ಗೂಡಿಸುವ ಕೆಲಸಕ್ಕೆ ಎಲ್ಲರು ಕೈಜೋಡಿಸಬೇಕು ಎಂದು ಹೇಳಿದರು.
ಒತ್ತುವರಿ ಭೂಮಿ ಗುತ್ತಿಗೆಗಾಗಿ ಬೆಳೆಗಾರರ ಆಸಕ್ತಿ
ಒತ್ತುವರಿ ಭೂಮಿ ಗುತ್ತಿಗೆ ನೀಡುವ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಬೆಳೆಗಾರರ ಪರವಾದ ನಿಲುವನ್ನು ಪ್ರಕಟಿಸಿ ಯೋಜನೆ ಕಾರ್ಯಗತಕ್ಕೆ ಅಂದಿನ ಕಂದಾಯ ಸಚಿವ ಆರ್. ಅಶೋಕ್‌ ಸಾಕಷ್ಟು ಚರ್ಚೆ ನಡೆಸಿದ್ದರು. ಯೋಜನೆ ಜಾರಿಯ ವೇಳೆಗೆ ಸರ್ಕಾರ ವಿಸರ್ಜನೆಯಾದ ಹಿನ್ನೆಲೆಯಲ್ಲಿ ಯೋಜನೆಗೆ ಗ್ರಹಣ ಹಿಡಿದಿತ್ತು. ಆದರೆ, ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕಾಫಿ ಬೆಳೆಗಾರರ ಸಂಘಟನೆಗಳ ಮುಖಂಡರ ನಿರಂತರ ಒತ್ತಡದ ಪರಿಣಾಮ ರಾಜ್ಯ ಸರ್ಕಾರ ಕೊನೆಗೂ ಯೋಜನೆಗೆ ಅಸ್ತು ಎಂದಿದೆ.
ಎಐಡಿಎಸ್‌ಒ ೭೦ನೇ ಸಂಸ್ಥಾಪನ ದಿನಾಚರಣೆ
ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯು ಕಳೆದ ೭೦ ವರ್ಷಗಳಿಂದ ಸಾರ್ವಜನಿಕ ಶಿಕ್ಷಣ ಉಳಿಸಲು ನಿರಂತರವಾಗಿ ವಿದ್ಯಾರ್ಥಿಗಳ ಸಮಸ್ಯೆಗಳ ವಿರುದ್ಧ ರಾಜಿರಹಿತ ಹೋರಾಟವನ್ನು ಸಂಘಟಿಸುತ್ತಾ ಬಂದಿದೆ. ವಿದ್ಯಾರ್ಥಿಗಳ ಹೋರಾಟದಿಂದಾಗಿ ಹಲವಾರು ನ್ಯಾಯಯುತ ಬೇಡಿಕೆಗಳು ಈಡೇರಿದೆ ಎಂದು ಎ.ಐ.ಡಿ.ಎಸ್.ಒ. ರಾಜ್ಯ ಖಜಾಂಚಿ ಸುಭಾಷ್ ಹೇಳಿದರು. ಈ ದೇಶದಲ್ಲಿ ಹುಟ್ಟಿದ ಪ್ರತಿಯೊಂದು ಮಗುವಿಗೂ ಯಾವುದೇ ತಾರತಮ್ಯವಿಲ್ಲದೆ ಶಿಕ್ಷಣ ದೊರೆಯಬೇಕು ಎಂದರು.
ರುದ್ರಪಟ್ಟಣದಲ್ಲಿ ಸಂಗೀತೋತ್ಸವ ಸಮಿತಿಯಿಂದ ಪಂಚರತ್ನ ಕೃತಿ ಗಾಯನ
ಸಂಗೀತ ಹಾಗೂ ಸಾಹಿತ್ಯ ಎರಡು ಒಂದೇ. ಶಾಸ್ತ್ರೀಯ ಸಂಗೀತ, ಹಾಗೂ ಸಾಹಿತ್ಯ ಪ್ರಪಂಚದ ಐತಿಹಾಸಿಕ ಕ್ಷೇತ್ರವಾಗಿದೆ. ಪ್ರಪಂಚದ ಮೂಲೆಮೂಲೆಗಳಲ್ಲಿ ಸ್ಥಳೀಯ ಶಾಸ್ತ್ರೀಯ ಸಂಗೀತ ಸಂಸ್ಕೃತಿಯೊಂದಿಗೆ ಬೆರೆತು ಆತ್ಮೀಯವಾಗಿ ಹಿಡಿಯಬಲ್ಲ ಸಂಗೀತ ಸಾಧನ ಎಂದು ಗಾನಕಲಾ ಭೂಷಣ ವಿದ್ವಾನ್ ಡಾ. ಆರ್‌.ಕೆ. ಪದ್ಮನಾಭ ಅವರು ತಿಳಿಸಿದರು. ಪ್ರತಿವರ್ಷ ಕಾರ್ಯಕ್ರಮ ನಡೆಸಲು ಸಹಕಾರ ನೀಡಿ ಎಂದು ಆರ್.ಕೆ. ಪದ್ಮನಾಭ ಎಂದು ಮನವಿ ಮಾಡಿದರು.
ಜಾತ್ಯತೀತ ತತ್ವದ ನೆಲೆಗಟ್ಟಿನಲ್ಲಿ ಸುತ್ತೂರು ಕ್ಷೇತ್ರ ಮುನ್ನಡೆದಿದೆ
ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಬಸವಾದಿ ಶರಣರ ಆಶಯದಂತೆ ಜಾತ್ಯತೀತ ತತ್ವದ ನೆಲೆಗಟ್ಟಿನಲ್ಲಿ ಸುತ್ತೂರು ಶ್ರೀಕ್ಷೇತ್ರ ಮುನ್ನಡೆಯುವ ಮೂಲಕ ನಾಡಿನ ಕಲ್ಯಾಣ ಕಾರ್ಯಕ್ರಮಗಳಿಗೆ ಮೇಲ್ಪಂಕ್ತಿ ಹಾಕೊಟ್ಟಿದೆ ಎಂದು ಮಾಜಿ ಶಾಸಕ ಜಿ.ಎಸ್.ಪರಮೇಶ್ವರಪ್ಪ ಬಣ್ಣಿಸಿದರು. ಹನ್ನೆರಡನೇ ಶತಮಾನದ ಬಸವಾದಿ ಶಿವಶರಣರ ಆಶಯದಂತೆ ಹಸಿದವರಿಗೆ ಅನ್ನ, ಅಕ್ಷರ, ಅರಿವೆ, ಅರಿವು ನೀಡುವ ಮೂಲಕ ಅಜ್ಞಾನದ ಕತ್ತಲು ಕಳೆದು ಸುಜ್ಞಾನದ ಬೀಜ ಬಿತ್ತುತ್ತಿರುವುದು ಪ್ರಶಂಸನೀಯ ಎಂದರು.
ಕುವೆಂಪು ಅವರ ಒಂದೊಂದು ಹೇಳಿಕೆಯೂ ಮಹಾಕಾವ್ಯ
"ಜೈ ಭಾರತ ಜನನಿಯ ತನುಜಾತೆ " ಎನ್ನುವ ಶೀರ್ಷಿಕೆಯ ನಾಡಗೀತೆ ಶ್ರೇಷ್ಟವಾಗಿದ್ದು, ಅದಕ್ಕೆ ಇನ್ನೊಂದು ಶಬ್ಧ ಸೇರಿಸಲು ಯಾರಿಂದಲೂ ಸಾಧ್ಯವಿಲ್ಲ. ಹಾಗೆಯೇ ಆ ಗೀತೆಯಿಂದ ಒಂದು ಶಬ್ಧ ತೆಗೆದು ಹಾಕಲು ಆಗುವುದಿಲ್ಲ. ಅವರ ಒಂದೊಂದು ಹೇಳಿಕೆ ಜಗತ್ತಿಗೆ ಮಹಾಕಾವ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ ಬಣ್ಣಿಸಿದರು.
ಸಮಾನ ಬೆಲೆ ಕಾಯ್ದುಕೊಂಡ ಕಾಫಿ
ಕಾಫಿ ಮಾರುಕಟ್ಟೆ ಇತಿಹಾಸದಲ್ಲೇ ಪ್ರಸಕ್ತ ವರ್ಷದ ಬೆಲೆ ಅತ್ಯಧಿಕವಾಗಿದ್ದು ಕಾಫಿ ಬೆಲೆ ಕಂಡು ಬೆಳಗಾರರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ೫೦ ಕೆಜಿ ರೋಬಸ್ಟ್ ಚರ್ರಿ ಕಾಫಿ ಧಾರಣೆ ೧೧ ಸಾವಿರ ರು.ಗಳಿದ್ದರೆ ಓಟಿ ಆಧಾರದಲ್ಲಿ ಮತ್ತಷ್ಟು ದರ ಇದಕ್ಕೆ ಕೂಡಿಕೆಯಾಗುವುದರಿಂದ ಪ್ರತಿ ಧಾರಣೆ ೧೩ ಸಾವಿರ ರು.ವರೆಗೆ ತಲುಪಿದೆ. ರೋಬಸ್ಟ್ ಪಾರ್ಚಮೆಂಟ್ ಧಾರಣೆ ೨೧ ಸಾವಿರಕ್ಕೆ ತಲುಪಿದೆ. ಅರೇಬಿಕ್ ಚರ್ರಿ ಧಾರಣೆ ಸಹ ಯಾವುದೇ ಓಟಿ ಇಲ್ಲದೆ ೧೧ ಸಾವಿರದಿಂದ ಆರಂಭವಾಗಿದ್ದು ಮತ್ತಷ್ಟು ಬೆಲೆ ಕೂಡಿಕೆಯಾಗಲಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved