• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್‌ಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಪಟ್ಟಂತೆ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳ ಆತ್ಮಸ್ಥೆರ್ಯ ಕುಂದಿಸುವಂತಹ ಮತ್ತು ಅವರ ಸಾಮರ್ಥ್ಯವನ್ನು ಪ್ರಶ್ನಿಸುವಂತಹ ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಮಂಗಳವಾರ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಕಷ್ಟಕರ ಸಂದಿಗ್ಧ ಸಂದರ್ಭದಲ್ಲಿ ಕುಟುಂಬದವರ ನೋವಿಗೆ ವಿದ್ಯಾರ್ಥಿ ಪರಿಷತ್ ಸಾಂತ್ವನವನ್ನು ತಿಳಿಸುತ್ತಾ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇವೆ ಎಂದು ಹೇಳಿದರು.
ಬಿಳಿಸುಳಿ ರೋಗಕ್ಕೆ ತುತ್ತಾದ ಮೆಕ್ಕೆಜೋಳ ನಷ್ಟಕ್ಕೆ ಪರಿಹಾರ ನೀಡಲಿ
ರಾಜ್ಯ ಸರ್ಕಾರದ ಅಧಿಕಾರಿಗಳು ಹಾಗೂ ವಿಜ್ಞಾನಿಗಳ ಒಳಗೊಂಡ ತಂಡಗಳನ್ನು ಜಿಲ್ಲೆಗೆ ಕಳುಹಿಸಿ ಬಿಳಿಸುಳಿ ರೋಗದಿಂದ ನಾಶವಾಗುತ್ತಿರುವ ಮೆಕ್ಕೆಜೋಳ ನಷ್ಟದ ಬಗ್ಗೆ ರೈತರಿಂದ ಮಾಹಿತಿ ಪಡೆದು ಸರಿಯಾದ ಪರಿಹಾರ ನೀಡಬೇಕು. ಇಲ್ಲದಿದ್ದರೆ ತೋಟಗಾರಿಕೆ ಬೆಳೆಯನ್ನೂ ಕೂಡ ರೈತರು ಕಳೆದುಕೊಳ್ಳಬೇಕಾಗುತ್ತದೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಸುಳ್ಳು ಹೇಳುವ ಅಗತ್ಯತೆ ನನಗಿಲ್ಲ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು ನೀಡಿದರು.
ಸ್ವಾಸ್ಥ್ಯ ಸಮಾಜಕ್ಕೆ ಮೂರು ಸೂತ್ರ ಹೇಳಿದ ಸುಬ್ರಹ್ಮಣ್ಯ
ಸ್ವಾಸ್ಥ್ಯ ಸಮಾಜವಾಗಬೇಕಾದರೆ ಸ್ವಾಸ್ಥ್ಯ ಸಂಕಲ್ಪ ಅಗತ್ಯ ಮೂರು ಸೂತ್ರಗಳನ್ನು ಅನುಸರಿಸಿದರೆ ಸಾಕು ಎಂದು ಸಂಪನ್ಮೂಲ ವ್ಯಕ್ತಿ ವಾಗ್ಮಿ ಚೆಸ್ಕಾಂ ಅಭಿಯಂತ ಸುಬ್ರಹ್ಮಣ್ಯ ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಂತ ಚಿತ್ತರಾಗಿರಿ, ತಾಳ್ಮೆ ಇರಲಿ ಯಾರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನು ಆಲಿಸಿ ಪೂರ್ಣ ಕೇಳಿಕೊಳ್ಳಿ ಮಧ್ಯ ಮಾತನಾಡಲು ಹೋಗಬೇಡಿ, ಶಾಂತಚಿತ್ತತೆ ಮುಖ್ಯ ಇದು ಉತ್ತಮ ಆರೋಗ್ಯಕ್ಕೂ ಸಹಕಾರಿ ಜ್ಞಾನ ವಿಕಾಸಕ್ಕೂ ಕೂಡ ಎಂದರು.
ಸಕಲೇಶಪುರ ದೊಡ್ಡಕೆರೆ ಅಭಿವೃದ್ಧಿಗೆ ಗಮನಕೊಡದ ಪುರಸಭೆ
ದೊಡ್ಡಕೆರೆ ಅಭಿವೃದ್ಧಿಗೆ ಜಿಲ್ಲಾಡಳಿತವೇ ಸೂಚನೆ ನೀಡಿ ವರ್ಷ ಕಳೆಯುತ್ತಿದ್ದರೂ ಪುರಸಭೆ ಆಡಳಿತ ಮಾತ್ರ ಗಾಢನಿದ್ರೆಗೆ ಜಾರಿದೆ. ಜಿಲ್ಲಾಡಳಿತ ಅಗಸ್ಟ್ ೨೦೨೪ರಲ್ಲಿ ಅನುಮೋದನೆ ನೀಡಿ ಟೆಂಡರ್ ಕರೆಯುವಂತೆ ಸೂಚನೆ ನೀಡಿತ್ತು. ಈ ವೇಳೆಗೆ ಪುರಸಭೆಗೆ ಜನಪ್ರತಿನಿಧಿಗಳ ಆಡಳಿತ ಬಂದಿದ್ದು ಕಳೆದ ೧೦ ತಿಂಗಳಿನಿಂದ ದೊಡ್ಡಕೆರೆ ಅಭಿವೃದ್ಧಿಗೆ ಟೆಂಡರ್ ಕರೆಯುವ ಬಗ್ಗೆ ಹಲವು ಚರ್ಚೆಗಳು ನಡೆದರೂ ಅಧ್ಯಕ್ಷರು ಮಾತ್ರ ಟೆಂಡರ್ ಪ್ರಕ್ರಿಯೆಗೆ ಒಪ್ಪಿಗೆ ನೀಡುತ್ತಿಲ್ಲ.
ವಿಶ್ವ ತಂಬಾಕು ರಹಿತ ಮಾಸಾಚಾರಣೆ
ಅರಕಲಗೂಡು ತಾಲೂಕಿನ ಕಂಚಿರಾಯ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ಮಾಸಾಚಾರಣೆ ಹಾಗೂ ಯುವ ಸ್ಪಂದನ ಅರಿವು ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಆರೋಗ್ಯ ಮತ್ತು ಜೀವನ ಶೈಲಿಯ ಬಗ್ಗೆ ಮಾನಸಿಕ ಆರೋಗ್ಯ ಸುರಕ್ಷತೆ ಸಂಬಂಧಗಳು ಹಾಗೂ ಶಿಕ್ಷಣ, ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಲೈಂಗಿಕ ದೌರ್ಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಲಾಯಿತು.
ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರೇ ಕಸ ಹೊಡೆಯುವಂತಾಗಿದೆ
ಕೃಷಿ ಇಲಾಖೆಯಲ್ಲಿ ಶೇ. ೬೦ ರಿಂದ ೭೦ರಷ್ಟು ಹುದ್ದೆಗಳು ಖಾಲಿ ಇದ್ದು, ಸಹಾಯಕ ನಿರ್ದೇಶಕರೇ ಕಸ ಗುಡಿಸುವ ಪರಿಸ್ಥಿತಿ ಇದೆ, ಸರ್ಕಾರಕ್ಕೆ ರೈತರು ಹಾಗೂ ಕೃಷಿ ಇಲಾಖೆ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲವೆಂದು ಶಾಸಕ ಎಚ್.ಡಿ.ರೇವಣ್ಣ ಕಟುವಾಗಿ ಟೀಕಿಸಿದರು. ಜಿಲ್ಲೆಯ ನಂದಿನಿ ಡೇರಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಮಾಜಿ ಪ್ರಧಾನಿ ದೇವೇಗೌಡರು ಕೊಡುಗೆಯಿಂದ ಈ ಸ್ಥಾನ ಪಡೆಯಲು ಸಾಧ್ಯವಾಗಿದೆ. ಅದೇ ರೀತಿ ಹಾಸನದಲ್ಲಿ ಕೃಷಿ ಕಾಲೇಜು ಸ್ಥಾಪನೆ ಮತ್ತು ಅಭಿವೃದ್ಧಿಯಲ್ಲಿ ಸಾಕಷ್ಟು ಕಾಳಜಿ ವಹಿಸಿದ ಕಾರಣದಿಂದ ರೈತರಿಗೆ ಒಳ್ಳೆಯದಾಗುತ್ತಿದೆ.
ಬಾನು ಮುಷ್ತಾಕ್‌ಗೆ ಪತ್ರಕರ್ತರ ಸಂಘದಿಂದ ಸನ್ಮಾನ
ಅಂತಾರಾಷ್ಟ್ರಿಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಎಚ್. ವೇಣುಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಬಿ. ಮದನಗೌಡ, ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತರಾದ ರವಿನಾಕಲಗೂಡು, ಖಜಾಂಚಿ ಕುಮಾರ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಆರ್. ಪ್ರಸನ್ನಕುಮಾರ್, ಪತ್ರಕರ್ತರಾದ ಹೆತ್ತೂರು ನಾಗರಾಜ್, ಸಂದೀಪ್ ಹಾಗೂ ಇತರರು ಹಾಜರಿದ್ದರು.
ಸರ್ಕಾರಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಿ
ಮೂರು ವರ್ಷಕ್ಕೂ ಮೇಲ್ಪಟ್ಟು ಮಕ್ಕಳನ್ನು ಈಗಾಗಲೇ ತಾಲೂಕಿನಲ್ಲಿ ಸ್ಥಾಪಿಸಿರುವ ಮಕ್ಕಳ ಮನೆಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಉತ್ತಮವಾದ ಶಿಕ್ಷಣವನ್ನು ಪಡೆದುಕೊಳ್ಳುವಂತೆ ಶಾಸಕ ಎ. ಮಂಜು ಸಲಹೆ ನೀಡಿದರು. ಮಕ್ಕಳ ಮನೆ ಶಾಲೆಯನ್ನು ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರು ಹಾಗೂ ಮಧ್ಯಮ ವರ್ಗದವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳ ಯಾವುದೇ ಆಮಿಷಗಳಿಗೆ ಒಳಗಾಗದಂತೆ ಖುದ್ದಾಗಿ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡುವ ಮೂಲಕ ಶಿಕ್ಷಣವನ್ನು ಪಡೆದುಕೊಳ್ಳಲು ಸಲಹೆ ನೀಡಿದರು.
ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
ಹೆದ್ದಾರಿಗಾಗಿ ಫಲವತ್ತಾದ ಭೂಮಿ ಸ್ವಾಧೀನ ಪಡಿಸಿಕೊಂಡು ಹಲವು ವರ್ಷಗಳೇ ಕಳೆದಿದ್ದರೂ, ಈವರೆಗೂ ಪರಿಹಾರ ನೀಡಿಲ್ಲ. ಆದರೂ ಕೆಲವು ಕಡೆ ಕಾಮಗಾರಿ ಮುಗಿಸಲಾಗಿದೆ ಎಂದು ಆರೋಪಿಸಿದರು. ಸರಿಯಾಗಿ ಪರಿಹಾರವನ್ನೂ ಕೊಡುವುದಿಲ್ಲ ಎಂದರೆ ನಾವು ಎಲ್ಲಿಗೆ ಹೋಗಬೇಕು. ನಾವು ಯಾರಿಗೂ ಧಮ್ಕಿ ಹಾಕಲು ಬಂದಿಲ್ಲ, ಡಿಸಿ ಅವರು ಹಿಂದೆ ನೀಡಿದ ಭರವಸೆಯಂತೆ ನಡೆಯಲಿ ಎಂದರು.
ಶ್ರವಣದ ಮೂಲಕ ಕೇಳಿಸಿಕೊಳ್ಳುವ ಸೌಭಾಗ್ಯ ಮನುಷ್ಯನಿಗೆ ಸಿಕ್ಕಿದೆ
ಭೂಮಿ ಮೇಲೆ ನಡೆಯುವ ಪ್ರತಿಯೊಂದು ಘಟನೆಯನ್ನು ನೋಡುವ ಮತ್ತು ಕೇಳಿಸಿಕೊಳ್ಳುವ ಸೌಭಾಗ್ಯವನ್ನು ಭಗವಂತ ಮನುಷ್ಯನಿಗೆ ಕೊಟ್ಟಿದ್ದಾನೆ. ಅದನ್ನು ಸವಿಯುವ ಅವಕಾಶ ಕಳೆದುಕೊಳ್ಳಬಾರದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್.ಬಿ. ಮದನ್ ಗೌಡ ತಿಳಿಸಿದರು. ಭೂಮಿ ಮೇಲೆ ನಡೆಯುವ ಪ್ರತಿಯೊಂದು ಘಟನೆಯನ್ನು ನೋಡುವ ಮತ್ತು ಕೇಳಿಸಿಕೊಳ್ಳುವಂತಹ ಸೌಭಾಗ್ಯವನ್ನು ಭಗವಂತ ನಮಗೆ ಕೊಟ್ಟಿದ್ದಾನೆ ಅದನ್ನು ಸವಿಯುವ ಅವಕಾಶ ಕಳೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು. ರೋಟರಿ ಕ್ಲಬ್ ಆಫ್ ಸೆಂಟ್ರಲ್ ಮತ್ತು ಟೀಮ್ ಈಶ್ವರ್ ಮಲ್ಪೆ ಅವರು ಯಂತ್ರವನ್ನು ಕೊಡುವ ಮೂಲಕ ಉತ್ತಮ ಕೆಲಸವನ್ನು ಮಾಡುತ್ತಿದೆ ಎಂದು ಶ್ಲಾಘಿಸಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved