• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ಶಾಲಾ ಪೈಪೋಟಿಯಲ್ಲಿ ಸರ್ಕಾರಿ ಶಾಲಾ ಪ್ರಗತಿ ಶಿಕ್ಷಕರಿಗೆ ಸವಾಲು
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಅನೇಕ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು ಸಹ ಪೋಷಕರನ್ನು ಖಾಸಗಿ ಶಾಲೆಗಳ ಬಾಹ್ಯನೋಟ ಸೆಳೆಯುತ್ತಿದೆ. ಇದು ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಸವಾಲಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶಂಕರ್ ಅಭಿಪ್ರಾಯಪಟ್ಟರು. ವರ್ಷವಿಡೀ ಶೈಕ್ಷಣಿಕ ಚಟುವಟಿಕೆಯಲ್ಲಿ ಮಕ್ಕಳು ತೊಡಗಿರುತ್ತಾರೆ, ಅವರಿಗೂ ಒಂದು ಸಂತೋಷದ ಕ್ಷಣವನ್ನು ರೂಪಿಸಿಕೊಡಬೇಕಾಗುತ್ತದೆ ಎಂದರು.
ಕಲಸಿಂದ ಪಿಎಸಿಸಿಎಸ್ ಅಧ್ಯಕ್ಷರಾಗಿ ಸ್ವಾಮಿ ಅವಿರೋಧ ಆಯ್ಕೆ
ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿ ಕಲಸಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನಿರ್ದೇಶಕ ಬೆಲಸಿಂದ ಗ್ರಾಮದ ಬಿ.ಎನ್. ಸ್ವಾಮಿ ರವರು ಅವಿರೋಧವಾಗಿ ಆಯ್ಕೆಗೊಂಡರು. . ಇವರನ್ನು ಹೊರತುಪಡಿಸಿ ಬೇರ್‍ಯಾರು ನಾಮಪತ್ರ ಸಲ್ಲಿಸದ ಕಾರಣ ಇವರ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ. ವಿಜಯೇಂದ್ರ ಘೋಷಿಸಿದರು.
ರಾಜ್ಯಮಟ್ಟದ ಹೊನಲು ಬೆಳಕಿನ ಹ್ಯಾಂಡ್ ಬಾಲ್ ಪಂದ್ಯಾವಳಿ
ಜಿಲ್ಲಾ ಕ್ರೀಡಾಂಗಣದಲ್ಲಿ ಡಿಸೆಂಬರ್ ೨೭ರ ಶುಕ್ರವಾರ ಸಂಜೆ ೧೯ನೇ ರಾಜ್ಯಮಟ್ಟದ ೨೦ ವರ್ಷದ ವಯೋಮಿತಿಯ ಪುರುಷರು ಮತ್ತು ಮಹಿಳೆಯರ ಹೊನಲು ಬೆಳಕಿನ ಹ್ಯಾಂಡ್ ಬಾಲ್ ಪಂದ್ಯಾವಳಿ ಪ್ರಾರಂಭವಾಗಿ ಡಿಸೆಂಬರ್ ೨೯ರ ಭಾನುವಾರ ಮುಕ್ತಾಯವಾಗಲಿದೆ ಎಂದು ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆ ಸಲಹೆಗಾರರಾದ ಜೆ.ಐ. ನಿರಂಜನ್ ರಾಜ್ ಮತ್ತು ಕಾರ್ಯದರ್ಶಿ ಸಿಎನ್. ವಿಶ್ವನಾಥ್ ತಿಳಿಸಿದರು.
ಸಚಿವರಾಗಿ ಮನಸ್ಸಿಗೆ ಬಂದಂತೆ ಮಾತಾಡಿದ್ದಾರೆ
ಡಾ.ಅಂಬೇಡ್ಕರ್ ಬಗ್ಗೆ ರಾಜ್ಯಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ದಸಂಸ(ಅಂಬೇಡ್ಕರ್ ವಾದ)ಹಾಗೂ ದಲಿತ ಮುಖಂಡರು ಡಾ.ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕಿ ಅಂಬೇಡ್ಕರರ ಭಾವಚಿತ್ರಗಳನ್ನಿಡಿದು ಬುಧವಾರ ಪ್ರತಿಭಟಿಸಿದರು.
ಜೆಪಿನಗರ ಚರ್ಚ್‌ನಲ್ಲಿ ಕ್ರಿಸ್‌ಮಸ್‌
ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಕ್ರೈಸ್ತ ಬಾಂಧವರು ಅತ್ಯಂತ ಸಡಗರದಿಂದ ಆಚರಿಸಿದರು. ಪಟ್ಟಣದ ಜೆಪಿ ನಗರದ ಸಂತ ಮಿಕೇಕೇನರ ದೇವಾಲಯದ ಧರ್ಮಗುರು ಫಾದರ್‌ ಪೃಸನ್ನ ಕುಮಾರ್ ಏಸುವಿನ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬಾಲ ಏಸುವಿನ ಪ್ರತಿಮೆಯನ್ನು ಅವರ ಜೀವನಾಧರಿತ ಕಥೆ ಸಾರುವ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶೀಘ್ರ ಸಹಸ್ರ ಕೂಟ ಜೀನಾಲಯ ಅಭಿವೃದ್ಧಿ
ಅರಸೀಕೆರೆ ನಗರದಲ್ಲಿರುವ ಏಕಶೀಲ ಸಹಸ್ರಕೂಟ ಜಿನಾಲಯ ದೇಶದಲ್ಲಿಯೇ ವಿಶಿಷ್ಟವಾಗಿದೆ. ಈ ಬಸದಿಯನ್ನು ಮೂಲ ಸೌಕರ್ಯಗಳ ಮೂಲಕ ಅಭಿವೃದ್ಧಿಪಡಿಸಲು ಕಾರ್ಯ ಪ್ರವೃತ್ತವಾಗಲಿದ್ದು, ಶ್ರವಣಬೆಳಗೊಳ ಶ್ರೀಮಠವು ಎಲ್ಲ ರೀತಿಯ ಜವಾಬ್ದಾರಿ ತೆಗೆದುಕೊಂಡು ಸ್ಥಳೀಯ ಜಿನಾಲಯವನ್ನು ವಿಶ್ವದಲ್ಲಿ ಧಾರ್ಮಿಕ ಶ್ರದ್ಧಾಕೇಂದ್ರವನ್ನಾಗಿ ಕೊಂಡೊಯ್ಯಲಾಗುವುದು ಎಂದು ಶ್ರವಣಬೆಳಗೊಳ ಶ್ರೀಮಠದ ಪೀಠಾಧ್ಯಕ್ಷರಾದ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು.
ಮಿಶ್ರ ಬೇಸಾಯ ಪದ್ಧತಿಯಿಂದ ಮಾತ್ರ ಲಾಭ ಸಾಧ್ಯ
ರೈತರು ಸಾಂಪ್ರದಾಯಿಕ ಬೆಳೆಗೆ ಜೋತು ಬೀಳದೇ ಮಿಶ್ರ ಬೆಳೆ ಬೇಸಾಯ ಪದ್ಧತಿಗೆ ಮುಂದಾದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂದು ಶಾಸಕ ಎ. ಮಂಜು ತಿಳಿಸಿದರು. ರೈತರಿಗೆ ಅನ್ಯಾಯ ಮಾಡಿದರೆ ನಮಗೆ ನಾವೇ ಮೋಸ ಮಾಡಿಕೊಂಡಂತಾಗುತ್ತದೆ. ಸೌಕರ್ಯಗಳನ್ನು ಉಪಯೋಗಿಸಿಕೊಳ್ಳುವುದು ರೈತರ ಜವಾಬ್ದಾರಿ ಆಗಬೇಕು. ಶೇ. 90ರಷ್ಟು ಸಬ್ಸಿಡಿ ಸೌಲಭ್ಯ ಇರುವ ಹನಿ ನೀರಾವರಿ ಹೊಂದುವ ಮುಖೇನ ವೈಜ್ಞಾನಿಕ ಬೇಸಾಯ ಪದ್ಧತಿ ಅನುಸರಿಸಬೇಕು ಎಂದು ಸಲಹೆ ನೀಡಿದರು.
ವಾಟೇಹೊಳೆ ಗ್ರೆಸ್ ರಿವೈವಲ್ ಚರ್ಚ್‌ನಲ್ಲಿ ಕ್ರಿಸ್ಮಸ್‌ ಆಚರಣೆ
ಆಲೂರು ತಾಲೂಕಿನ ವಾಟೇಹೊಳೆಯಲ್ಲಿರುವ ಗ್ರೆಸ್ ರಿವೈವಲ್ ಚರ್ಚ್‌ನಲ್ಲಿ ನಡೆದ ಕ್ರಿಸ್‌ಮಸ್ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕ್ರಿಸ್‌ಮಸ್ ಎಂಬುದು ಸೌಹಾರ್ದತೆಯಾಗುತ್ತಿದ್ದು, ಸಡಗರವಾಗಿ, ಜಾತಿ-ಧರ್ಮಗಳ ಭೇದವಿಲ್ಲದೆ ಆಚರಣೆಯಲ್ಲಿ ಭಾಗವಹಿಸುತ್ತಾರೆ. ನಮ್ಮ ಗ್ರೆಸ್ ರಿವೈವಲ್ ಚರ್ಚ್‌ನಲ್ಲಿ ಕ್ರೆಸ್ತ ಬಾಂಧವರೊ ದಿಗೆ ಅನ್ಯ ಧರ್ಮೀಯರು ಸಹ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗಿಯಾಗಿ ಸಾಮರಸ್ಯ ಮೆರೆದಿದ್ದಾರೆ ಎಂದು ತಿಳಿಸಿದರು.
ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣದ ಪ್ರಯುಕ್ತ ತಾಲೂಕು ದಸಂಸ (ಪ್ರೊ. ಕೃಷ್ಣಪ್ಪ ಬಣ) ತಾಲೂಕಿನಲ್ಲಿ ದಲಿತ ಚಳವಳಿಯನ್ನು ಕಟ್ಟಿದ ಹೋರಾಟಗಾರರ ಸ್ಮರಣೆ , ಹಿರಿಯ ದಲಿತ ಮುಖಂಡರಿಗೆ ಗೌರವಾರ್ಪಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಿ. 27ರಂದು ಹಮ್ಮಿಕೊಂಡಿದೆ ಎಂದು ಸಂಚಾಲಕ ಪಿ. ಶಂಕರ್ ತಿಳಿಸಿದರು. ಹತ್ತನೇ ತರಗತಿ, ದ್ವಿತೀಯ ಪಿಯು ಮತ್ತು ಪದವಿ ತರಗತಿಗಳಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಇಂದು ಜಿಲ್ಲೆಯ ಪತ್ರಕರ್ತರಿಗೆ ವಿಮೆ ಬಾಂಡ್ ವಿತರಣೆ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಸುರಕ್ಷತೆಗಾಗಿ ಮೊದಲ ಬಾರಿಗೆ ಮಾಡಿಸಿರುವ ವಿಮಾ ಬಾಂಡ್ ವಿತರಣೆ ಹಾಗೂ ಸುವರ್ಣ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಇಂದು ನಡೆಯಲಿದೆ. ಅಂದೇ ಸಂಘದಿಂದ ಹೊರತಂದಿರುವ ೨೦೨೫ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಕೆ. ಎಚ್.ವೇಣುಕುಮಾರ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved