• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರ ಸಾಧನೆ ಬಗ್ಗೆ ಮಾತಾಡುವ ನೈತಿಕತೆ ಸಂಸದರಿಗಿಲ್ಲ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮತ್ತು ಅವರ ಕುಟುಂಬದವರು ಏನು ಕೆಲಸ ಮಾಡಿದ್ದಾರೆ ಎನ್ನುವ ಬಗ್ಗೆ ಮಾತನಾಡಲು ಸಂಸದ ಶ್ರೇಯಸ್‌ಗೆ ನೈತಿಕತೆ ಇಲ್ಲ. ಹಾಗೆಯೇ ಅವರು ಏನು ಕೆಲಸ ಮಾಡಿದ್ದಾರೆ ಎಂದು ತಿಳಿಯಲು ಸಂಸದರು ಜಿಲ್ಲೆಯ ಪ್ರವಾಸ ಕೈಗೊಂಡು ಎಲ್ಲೆಲ್ಲಿ ಏನು ಕೆಲಸ ಆಗಿದೆ ಪಟ್ಟಿ ಮಾಡಿಕೊಳ್ಳಲಿ. ಇವರು ಮಾಡಿದ ಅಭಿವೃದ್ಧಿ ಕೆಲಸವನ್ನು ಸಂಸದರಾದ ಶ್ರೇಯಸ್ ಪಟೇಲ್ ಅವರು ಕೂಡ ಮಾಡಿ ತೋರಿಸಲಿ ಎಂದು ಕೆ.ಎಸ್. ಲಿಂಗೇಶ್ ಸವಾಲು ಹಾಕಿದರು.
ಅರಸೀಕೆರೆ ಪುರಸಭೆಯಿಂದ ಬಡವರಿಗೆ ಸೈಟ್‌ ಹಂಚಿಕೆ
ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿದಾರರ ಕಾರ್ಮಿಕರ ಸಂಘ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಪಟ್ಟಣದ ದೇವಸ್ಥಾನ ರಸ್ತೆಯ ಶ್ರೀ ರಾಮ ಹಾಲ್ ಸಭಾಂಗಣದಲ್ಲಿ ನಡೆಸಲಾಯಿತು. ಈ ಸಂಘದಲ್ಲಿ ಸದಸ್ಯರು ತೀರ ಕಷ್ಟದಲ್ಲಿದ್ದಾರೆ ಅವರಿಗೆ ಪುರಸಭೆಯ ಸಹಾಯಧನವನ್ನು ಕೊಡಿಸುತ್ತೇವೆ. ಸಂಘಕ್ಕೆ ಒಂದು ನಿವೇಶನವನ್ನು ಮಾಡಿಸಿಕೊಡಬೇಕೆಂದು ಕೇಳಿಕೊಂಡಿದ್ದಾರೆ ಅದರಂತೆ ನಮ್ಮ ಲೇಔಟ್ ಒಳಗಡೆ ಸಿ ಎ ಸೈಟ್ ಎಂಬುದನ್ನು ಕೊಡಲು ಅವಕಾಶವಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಜನರಿಗೆ ಎಲ್ಲಾ ಮೂಲಭೂತ ಸೌಕರ್ಯ ಸಿಗಬೇಕೆಂಬುದು ನನ್ನ ಆಶಯ
ನಗರ, ಪಟ್ಟಣ ಪ್ರದೇಶಗಳ ಜನರಿಗೆ ಮಾತ್ರವಲ್ಲದೆ ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ಬೂದುಕಾಲುವೆ, ಸಿ.ಸಿ.ಚರಂಡಿ ಮತ್ತು ರಸ್ತೆ ಬಳಕೆಗೆ ಸಿಗಬೇಕು ಹಾಗೂ ಇದರಿಂದ ಅಪಾರ ಮಂದಿಗೆ ಅನುಕೂಲ ಆಗಬೇಕು ಎಂಬ ಹಿತದೃಷ್ಟಿಯಿಂದ , ಸಿ.ಸಿ.ಚರಂಡಿ ಮತ್ತು ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ತಮ್ಮ ಅವಧಿಯಲ್ಲಿ ಇಡೀ ತಾಲೂಕು, ಕ್ಷೇತ್ರದಾದ್ಯಂತ ಗುಣಮಟ್ಟದ ರಸ್ತೆ, ಕುಡಿಯುವ ನೀರು, ಸಮುದಾಯ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಕ್ಷೇತ್ರದ ಜನರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಸಿಗಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.
ಹಿಂದಿ ಹೇರಿಕೆಯ ಒತ್ತಡದ ನಡುವೆ ಕನ್ನಡದ ಅಸ್ಮಿತೆ ಎತ್ತಿಹಿಡಿಯಬೇಕು
ಕನ್ನಡ ಸಾಹಿತ್ಯ ಸಮ್ಮೇಳನಗಳು ಅರ್ಥಪೂರ್ಣತೆಯನ್ನು ಕಳೆದುಕೊಳ್ಳುತ್ತಿದ್ದು ಅಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಸರ್ಕಾರ ಸ್ಪಂದಿಸದೆ ನಿರ್ಲಕ್ಷ್ಯ ತಾಳುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾದ ಸರ್ವಾಧ್ಯಕ್ಷರು ಮಂಡಿಸಿದ ನಿರ್ಣಯಗಳನ್ನು ಕನಿಷ್ಠ ಜಾರಿ ತರುವ ಬಗ್ಗೆ ಆಲೋಚಿಸಿದರೆ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಮನ್ನಣೆ ಸಿಗುತ್ತದೆ ಎಂದು ಕಿವಿಮಾತು ಹೇಳಿದರು.
ಜಿಲ್ಲೆಯಾದ್ಯಂತ ವಿವಿಧ ಚರ್ಚ್‌ಗಳಲ್ಲಿ ಕ್ರಿಸ್ಮಸ್ ಸಂಭ್ರಮ
ಹಾಸನ ನಗರದ ವಿವಿಧ ಚರ್ಚ್ಗಳಲ್ಲಿ ಕ್ರಿಸ್ಮಸ್ ಸಂಭ್ರಮದೊಂದಿಗೆ ಯೇಸುವಿನಲ್ಲಿ ಪ್ರಾರ್ಥನೆ ಮಾಡಿದ್ದು, ಜಿಲ್ಲೆಯ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ರಾತ್ರಿಯಿಂದ ಮತ್ತು ಬೆಳಿಗ್ಗೆ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ ಸಮುದಾಯದವರಿಗೆ ಶುಭಕೋರಿದರು. ಡಿಸೆಂಬರ್ ೨೪ರಂದು ಮಧ್ಯ ರಾತ್ರಿ ೧೨ ಗಂಟೆಯಿಂದಲೇ ಬಹಳ ಹರ್ಷದಿಂದ, ಪ್ರೀತಿಯಿಂದ ಯಾವ ಮತಬೇಧವಿಲ್ಲದೇ ಎಲ್ಲಾರೂ ಕೂಡ ಆಚರಿಸಿದರು.
ರಾತ್ರಿ ಕಾಡಾನೆ ಕಾಟ ಹಗಲು ಕೋತಿ ಆಟ
ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಸುತ್ತಮುತ್ತಲಿನಲ್ಲಿ ರಾತ್ರಿಯಾದರೆ ಸಾಕು ಕಾಡಾನೆಗಳು ಯಾವಾಗ ಗ್ರಾಮಕ್ಕೆ ಲಗ್ಗೆ ಕೊಡುತ್ತದೆಯೋ ಎನ್ನೋ ಭಯ ಒಂದೆಡೆಯಾದರೆ ಮತ್ತೊಂದೆಡೆ ಬೆಳಗಾಯಿತೆಂದರೆ ಸಾಕು ಗ್ರಾಮದ ಒಳಗೆ ಗುಂಪುಗುಂಪಾಗಿ ಕಪಿಗಳ ಹಿಂಡು ಮನೆಯ ಹಂಚು ಹಾಗು ಶೀಟ್‌ಗಳನ್ನು ಹಾನಿ ಮಾಡಿ ಮನೆಯೊಳಗೆ ಪ್ರವೇಶಿಸಿ ದಿನಸಿ, ತರಕಾರಿ ಹಾಗೂ ಇತರೆ ಪದಾರ್ಥಗಳನ್ನು ಚೆಲ್ಲಾಪಿಲ್ಲಿ ಮಾಡಿ ಜನರ ನೆಮ್ಮದಿ ಕೆಡಿಸಿದೆ.
ಕ್ರಿಸ್ಮಸ್ ಹಿನ್ನೆಲೆ ಕ್ರೈಸ್ತ ಸಮುದಾಯವರಿಂದ ಪ್ರಾರ್ಥನೆ
ಬೇಲೂರು ತಾಲೂಕು ಅರೇಹಳ್ಳಿಯ ಸಂತ ಯೊವಾನ್ನರ ದೇವಾಲಯದಲ್ಲಿ ಕ್ರಿಸ್ಮಸ್ ಅಂಗವಾಗಿ ಮಂಗಳವಾರ ರಾತ್ರಿ ಮಹೋತ್ಸವ ಪೂಜೆ ಜರುಗಿತು. ಆಧ್ಯಾತ್ಮಿಕ ಗುರು ಫಾ. ಮ್ಯಾಕ್ಸಿಮ್ ಪ್ರಬೋಧನೆ ನೀಡಿದರು. ಕ್ರೈಸ್ತ ಭಕ್ತಾದಿಗಳು ಕುಟುಂಬ ಸಮೇತರಾಗಿ ದೇವಾಲಯಕ್ಕೆ ಆಗಮಿಸುವುದರ ಮೂಲಕ ಮಹೋತ್ಸದವ ಪೂಜೆಯಲ್ಲಿ ಪಾಲ್ಗೊಂಡರು.
ಆಲೂರಿನ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ
ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿತು. ಬಡವರ ಬಗ್ಗೆ ಕಾಳಜಿ ವಹಿಸಲು ಮತ್ತು ಯಾರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಜನರನ್ನು ಪ್ರೇರೇಪಿಸುವುದು ಹಾಗೂ ಜನರ ನಡುವೆ ಪ್ರೀತಿ, ಭ್ರಾತೃತ್ವ ಮೂಡಿಸುವ ಸಲುವಾಗಿ ಕುಟುಂಬ ಸಭೆಗಳನ್ನು ನಡೆಸುವುದು ವಿಶೇಷ. ವಿವಿಧೆಡೆ ಹಾಡುಗಾರಿಕೆಯ ಮೂಲಕ ಕ್ರಿಸ್ಮಸ್ ಹಬ್ಬವನ್ನು ಆಚರಿಸುತ್ತಾರೆ, ನಾವು ಹುಟ್ಟುವ ಜಾಗ ನಮ್ಮ ಆಯ್ಕೆಯಾಗಿರುವುದಿಲ್ಲ ಆದರೆ ಯೇಸು ಸ್ವಾಮಿ ಅವರು ಹುಟ್ಟಿದ ಬಗ್ಗೆ ಶತಮಾನಗಳ ಮುಂಚೆಯೇ ದೇವರು ತಿಳಿಯಪಡಿಸಿದ್ದರು.
ಆನೆ ಕಾರಿಡಾರ್ ಕಾರ್ಯರೂಪಕ್ಕೆ ಬಾರದಿದ್ರೆ ಉಪವಾಸ ಸತ್ಯಾಗ್ರಹ
ಆನೆ ಕಾರಿಡರ್ ನಿರ್ಮಿಸುವುದಕ್ಕೆ ಮುಂದಿನ ಬಜೆಟ್‌ನಲ್ಲಿ 50 ಕೋಟಿ ಮೀಸಲಿಡುವುದಾಗಿ ಘೋಷಣೆ ಮಾಡಿದ್ದು, ಶೀಘ್ರವಾಗಿ ಕಾರ್ಯರೂಪಕ್ಕೆ ಬಾರದಿದ್ದರೇ ಫೆಬ್ರವರಿ ತಿಂಗಳ ಕೊನೆಯಲ್ಲಿ ವಿಧಾನಸೌಧದ ಮುಂದೆ ಅಹೋರಾತ್ರಿ ಉಪವಾಸ ಸತ್ಯಗ್ರಹ ಮಾಡುವುದಾಗಿ ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಎಂ.ಕೆ.ಆರ್. ಸೋಮೇಶ್ ಮತ್ತು ಜಿಲ್ಲಾ ಕಾರ್ಯಾಧ್ಯಕ್ಷ ಸಂಗಂ ಎಚ್ಚರಿಸಿದರು. ಸರ್ಕಾರ ಮತ್ತು ಸಚಿವರ ಘೋಷಣೆ ಘೋಷಣೆಯಾಗಿ ಉಳಿಯದೆ ಶೀಘ್ರವಾಗಿ ಬಜೆಟ್ ಸಂದರ್ಭದಲ್ಲೆ ಕಾರಿಡಾರ್ ಯೋಜನೆ ಕಾಮಗಾರಿ ಕಾರ್ಯರೂಪಕ್ಕೆ ಬಂದರೆ ಮಲೆನಾಡು ಬಾಗದ ರೈತರು ನಿಟ್ಟುಸಿರು ಬಿಡುವಂತಾಗುತ್ತದೆ.
ಪ್ರಾರ್ಥನಾ ಮಂದಿರದಲ್ಲಿ ಕ್ರಿಸ್ಮಸ್ ಆಚರಣೆ
ಎಂ ಹೊಸಹಳ್ಳಿ ಗ್ರಾಮದ "ಯೇಸು ನಡೆಸುತ್ತಾನೆ " ಪ್ರಾರ್ಥನ ಮಂದಿರದಲ್ಲಿ ಕ್ರಿಸ್ಮಸ್ ಕಾರ್ಯಕ್ರಮವನ್ನು ಸಡಗರದಿಂದ ಆಚರಿಸಲಾಯಿತು. ನಾಡಿನ ಎಲ್ಲಾ ಜನರಿಗೆ ಕ್ರಿಸ್ಮಸ್ ಶುಭಾಶಯಗಳು ತಿಳಿಸಿದರು. ಅದೇ ರೀತಿಯಾಗಿ ಯೇಸು ನಡೆಸುತ್ತಾನೆ ಪ್ರಾರ್ಥನೆ ಮಂದಿರದ ಸಭಾ ಪಾಲಕರಾದ ಸೋಮಣ್ಣ ಮಾತನಾಡಿ, ಎಲ್ಲ ಜನರಿಗೆ ಆರೋಗ್ಯ ಆಯಸ್ಸು ಹಾಗೂ ರಕ್ಷಣೆಯನ್ನು ಕರ್ತನಾದ ಯೇಸು ಕ್ರಿಸ್ತನು ನೀಡಲಿ ಎಂದು ಪ್ರಾರ್ಥಿಸಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved