• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನ ಜಿಲ್ಲಾ ಕ್ರೀಡಾಂಗಣಕ್ಕೆ ಶಾಸಕ ಸ್ವರೂಪ್ ದಿಢೀರ್ ಭೇಟಿ, ಪರಿಶೀಲನೆ
ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಮಂಗಳವಾರ ಹಾಸನ ಜಿಲ್ಲಾ ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ನೀಡಿ ಆಟದ ಮೈದಾನ ಪರಿಶೀಲಿಸಿ, ಅಧಿಕಾರಿಗಳಿಂದ ಮತ್ತು ಕ್ರೀಡಾಪಟುಗಳಿಂದ ಮಾಹಿತಿ ಪಡೆದರಲ್ಲದೇ ಇಲ್ಲಿ ಆಗಬೇಕಾಗಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು.
ಕಾಫಿ ಬೆಳೆಗಾರರ ಸಮಸ್ಯೆ ಬಗೆಹರಿಸಲು ಪ್ರಮಾಣಿಕ ಪ್ರಯತ್ನ
ಕಾಫಿ ಬೆಳೆಗಾರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಪ್ರಮಾಣಿಕ ಪ್ರಯತ್ನ ನಡೆಯಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್ ಹೇಳಿದರು. ಸ್ಥಗಿತಗೊಂಡಿರುವ ಇನ್ಟೀಗ್ರೇಟಡ್ ಡೇವಲಫೆಂಟ್ ಯೋಜನೆ ಮರು ಆರಂಭಿಸಲಿದ್ದೇವೆ ಎಂದರು. ಸಬ್ಸಿಡಿಗಾಗಿ ೧೦೦ ಕೋಟಿ ಅನುದಾನದ ಬೇಡಿಕೆ ಇದ್ದು ಹಣಕಾಸು ಮಂತ್ರಿಗಳೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆಗೊಳಿಸಲಿದ್ದೇನೆ. ಕಾಡಾನೆ ಸಮಸ್ಯೆಗೆ ಉಪಗ್ರಹದ ಸಹಾಯ ಪಡೆದು, ಆನೆ ತಜ್ಞ ಸುರೇಂದ್ರ ವರ್ಮಾ ನೇತೃತ್ವದಲ್ಲಿ ಸಮಿತಿ ರಚಿಸಿ ಕಾಡಾನೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು.
ಸುಜಲಾ ಕಪ್‌ ಕ್ರಿಕೆಟ್ ಪಂದ್ಯಾವಳಿ
ಇಡೀ ವರ್ಷವೆಲ್ಲಾ ಓದುವುದರಲ್ಲೇ ಸಮಯ ಕಳೆಯುವ ವಿದ್ಯಾರ್ಥಿಗಳಿಗೆ ಇಂತಹ ಕ್ರಿಕೆಟ್ ಕ್ರೀಡೆಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಸ್ಥೈರ್ಯ ತುಂಬಲಿದೆ ಎಂದು ಸುಜಲಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಸ್. ಲೋಕೇಶ್ ತಿಳಿಸಿದರು. ಈ ಆಟೋಟ ಮೂಲಕ ಲವಲವಿಕೆಯಿಂದ ಭಾಗವಹಿಸಿದ್ದಾರೆ. ಈ ಒಂದು ದಿವಸ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ನಗುವಿನಿಂದ ಪಾಲ್ಗೊಂಡಿದ್ದು, ಕ್ರೀಡೆ ಎಂಬುದು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯಕ್ಕೆ ಉತ್ತಮವಾಗಿದೆ ಎಂದರು.
ಛಾಯಾಗ್ರಾಹಕ ವೃತ್ತಿ ಶ್ರೇಷ್ಠವಾದುದು
ಛಾಯಾಗ್ರಾಹಕ ವೃತ್ತಿ ಎನ್ನುವುದು ಅತ್ಯಂತ ಶ್ರೇಷ್ಠವಾಗಿದ್ದು, ಪುರಾತನ ಕಾಲದ ನೆನಪುಗಳನ್ನು ಇಂದಿಗೂ ಪ್ರಸ್ತುತಪಡಿಸುವಲ್ಲಿ ಛಾಯಾಗ್ರಾಹಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ ಹೇಳಿದರು. ವಿವಾಹ ಅಥವಾ ಇನ್ನಿತರ ಶುಭ ಕಾರ್ಯಗಳ ವೇಳೆ ಫೋಟೋಗ್ರಾಫರ್‌ ಬರುವುದು ತಡವಾದರೆ ಅವರ ಚಡಪಡಿಕೆ ಒಬ್ಬ ಛಾಯಾಗ್ರಾಹಕನ ಪ್ರಾಮುಖ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ, ತಮ್ಮ ವೃತ್ತಿ ಬದುಕಿನಲ್ಲಿ ತಮ್ಮನ್ನು ತಾವು ರಕ್ಷಣೆ ಮಾಡುವ ಜೊತೆಗೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತೆ ಕರೆ ನೀಡಿದರು.
ಅಪ್ರಾಪ್ತರು ವಾಹನ ಓಡಿಸಿದರೆ 25 ಸಾವಿರ ದಂಡ
ಗಾಂಜಾ ಅಫೀಮು ಮತ್ತು ಮಾದಕ ವಸ್ತುಗಳ ಬಗ್ಗೆ ಮತ್ತು ಇದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಹಾಗೂ ಮಕ್ಕಳು ಅಪರಾಧಕ್ಕೆ ಬಲಿಯಾಗುವ ಮುನ್ನ ಎಚ್ಚರಿಕೆ ಆಗಿರಬೇಕು. ಸಮಾಜದಲ್ಲಿ ಏನಾದರೂ ಅಹಿತಕರ ಘಟನೆಗಳು ನಡೆದರೆ ಕೂಡಲೇ ೧೧೨ ನಂಬರ್‌ಗೆ ಕರೆ ಮಾಡಬೇಕು. ಇಂಥ ಸಂದರ್ಭದಲ್ಲಿ ಕರೆ ಮಾಡಿದವರ ಮಾಹಿತಿಯನ್ನು ಗೌಪ್ಯವಾಗಿರುವುದಾಗಿಯೂ, ಮಕ್ಕಳು ಮಾದಕ ವಸ್ತುಗಳಿಂದ ದೂರವಿರಬೇಕಾಗಿಯೂ ಮಕ್ಕಳಿಗೆ ಸಲಹೆಯನ್ನು ನೀಡಿದರು.
ಬೆಂಡೆಕೆರೆ ಗ್ರಾಪಂ ಅಧ್ಯಕ್ಷರಾಗಿ ವಸಂತ ಗುರುಮೂರ್ತಿ
ತಾಲೂಕಿನ ಬೆಂಡೆಕೆರೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಚಿಕ್ಕೂರು ಗ್ರಾಮದ ವಸಂತ ಗುರುಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಸೈದಹಳ್ಳಿ ಮೂರ್ತಿ ಭೋವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ವಸಂತ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಉಪಾಧ್ಯಕ್ಷರು ಹಾಗೂ ಸದಸ್ಯರ ಒಡಗೂಡಿ ಬೆಂಡೆಕೆರೆ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಚೌಲಗೆರೆ ಟೋಲ್ ವಿವಾದಕ್ಕೆ ಸಂಸದರಿಂದ ತೆರೆ
ಆಲೂರು ಸಮೀಪದ ಚೌಲಗೆರೆ ಟೋಲ್ ಬಳಿ ಸುಂಕ ವಸೂಲಿ ಕುರಿತಾಗಿ ಏರ್ಪಟ್ಟಿದ್ದ ಗೊಂದಲಕ್ಕೆ ಸಂಸದ ಶ್ರೇಯಸ್ ಪಟೇಲ್ ತೆರೆ ಹೇಳಿದರು. ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳೀಯರು, ಕನ್ನಡಪರ ಸಂಘಟನೆಗಳು, ಟೋಲ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ ಸಂಸದರು, ಸಮಸ್ಯೆಯನ್ನು ಸೌಹಾರ್ದತಹಿತವಾಗಿ ಇತ್ಯರ್ಥಪಡಿಸಿದರು.
ವಲಸಿಗ ಕೂಲಿಗಳ ಬಗ್ಗೆ ಎಚ್ಚರ ವಹಿಸುವಂತೆ ಎಸ್ಪಿಗೆ ಮನವಿ
ಹೊರರಾಜ್ಯಗಳಿಂದ ಕೂಲಿ ಕೆಲಸಕ್ಕೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಲಸಿಗರ ಮೇಲೆ ಸೂಕ್ತ ನಿಗಾವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೇಲೂರು ತಾಲೂಕು ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ವಿ ಎಸ್ ಭೋಜೇಗೌಡ ಅವರ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಅವರಿಗೆ ಮನವಿ ಸಲ್ಲಿಸಲಾಯಿತು. ತಮ್ಮ ಕುಲಕಸುಬನ್ನೇ ನಂಬಿಕೊಂಡು ಬಂದಿದ್ದ ಸ್ಥಳೀಯ ಕಾರ್ಮಿಕರು ಇಂದು ಕೆಲಸವಿಲ್ಲದೆ ಪರದಾಡುವಂತಾಗಿದೆ ಎಂದರು.
ಹಾಸನ : ಅಗ್ನಿಶಾಮಕ ದಳದ ವತಿಯಿಂದ ಅಗ್ನಿ ಅವಘಡಗಳ ಸುರಕ್ಷತೆ ಬಗ್ಗೆ ಪ್ರಾತ್ಯಕ್ಷಿಕೆ

ಹಿಮ್ಸ್ ಭದ್ರತಾ ಸಿಬ್ಬಂದಿ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಅಗ್ನಿ ಅವಘಡಗಳಾದಾಗ ಅನುಸರಿಸಬೇಕಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಅಗ್ನಿಶಾಮಕ ದಳದ ಕರ್ತವ್ಯಗಳ ಬಗ್ಗೆ ವಿವರಿಸಿದರು. 

ನಾಟಕವನ್ನು ನೋಡುವ ಹವ್ಯಾಸ ಬೆಳೆಸಿಕೊಳ್ಳಿ
ನಾಟಕ ನೋಡುವ ಅಭಿರುಚಿ ಇರಬೇಕು. ಆದರೆ ಪ್ರಸ್ತುತದಲ್ಲಿ ಎಷ್ಟೇ ಟಿ,ವಿ ಚಾನೆಲ್‌ಗಳು, ಧಾರವಾಹಿಗಳು ಇದ್ದರೂ ಸಹ ಜನರಿಗೆ ನಾಟಕಗಳಿಂದ ಸಿಗುವ ಮನರಂಜನೆ, ಧಾರ್ಮಿಕ ಭಾವನೆ, ಸಾಂಸ್ಕೃತಿಕ, ಸಾಮಾಜಿಕ, ಚಿಂತನೆ ಮುಂತಾದ ಅನೇಕ ವಿಷಯಗಳ ಬಗ್ಗೆ ತಿಳಿಯಲು ಸಹಾಯಕಾರಿಯಾಗಿದೆ ಎಂದು ಹಾಸನ ಜವೇನಹಳ್ಳಿ ಮಠದ ಮಠಾಧೀಶರಾದ ಶ್ರೀ ಸಂಗಮೇಶ್ವರ ಸ್ವಾಮೀಜಿ ತಿಳಿಸಿದರು. , ಹಿಂದಿನಿಂದ ನಾಟಕೋತ್ಸವ ಪ್ರದರ್ಶನವನ್ನು ತರಳಬಾಳು ಮಠದ ಸಾಣೇಹಳ್ಳಿ ಮಠದ ಶ್ರೀ ಶಿವಕುಮಾರ ಕಲಾ ತಂಡದವರು ಅತ್ಯುತ್ತಮ ಪ್ರದರ್ಶನವನ್ನು ನುರಿತ ಕಲಾವಿದರು ನಡೆಸಿಕೊಂಡು ಬರುತ್ತಿದ್ದಾರೆ ಎಂದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved